AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

African Cheetahs ಪ್ರಧಾನಿ ಮೋದಿ ಜನ್ಮದಿನದಂದು ಭಾರತಕ್ಕೆ ತರಲಿರುವ ಆಫ್ರಿಕನ್ ಚಿರತೆಗಳ ಫಸ್ಟ್​​ ಲುಕ್​​; ವಿಡಿಯೊ ನೋಡಿ

ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಚೀತಾ ಪ್ರಾಜೆಕ್ಟ್ ಮುಖ್ಯಸ್ಥ ಎಸ್‌ಪಿ ಯಾದವ್, ನಮೀಬಿಯಾದಿಂದ ಬರುವ ಚಿರತೆಗಳು ಈಗ ಗ್ವಾಲಿಯರ್‌ಗೆ ಬಂದಿಳಿಯಲಿವೆ.

African Cheetahs ಪ್ರಧಾನಿ ಮೋದಿ ಜನ್ಮದಿನದಂದು ಭಾರತಕ್ಕೆ ತರಲಿರುವ ಆಫ್ರಿಕನ್ ಚಿರತೆಗಳ ಫಸ್ಟ್​​ ಲುಕ್​​; ವಿಡಿಯೊ ನೋಡಿ
ಆಫ್ರಿಕಾದ ಚಿರತೆ
TV9 Web
| Edited By: |

Updated on:Sep 16, 2022 | 1:56 PM

Share

ಮಧ್ಯಪ್ರದೇಶದ (Madhya Pradesh) ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ (KUNO National Park) ಸೆಪ್ಟೆಂಬರ್ 17 ರಂದು ಆಫ್ರಿಕಾದ ನಮೀಬಿಯಾದಿಂದ ಭಾರತಕ್ಕೆ ತರಲಾಗುವ ಚಿರತೆಗಳ (Cheetahs) ಫಸ್ಟ್ ಲುಕ್ ಅನ್ನು ಶುಕ್ರವಾರ ಎಎನ್ಐ  ಸುದ್ದಿಸಂಸ್ಥೆ ಹಂಚಿಕೊಂಡಿದೆ. ರಾಷ್ಟ್ರೀಯ ಉದ್ಯಾನವನವೆಂದು ನಂಬಲಾದ ಮರದ ಕೆಳಗೆ ಎರಡು ಚಿರತೆಗಳು ವಿಶ್ರಾಂತಿ ಪಡೆಯುತ್ತಿರುವುದನ್ನು ಒಂದು ನಿಮಿಷದ ವಿಡಿಯೊ ತೋರಿಸುತ್ತದೆ. ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಶುಕ್ರವಾರ 16 ಚಿರತೆಗಳು ಭಾರತಕ್ಕೆ ಆಗಮಿಸಲಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಧ್ಯಪ್ರದೇಶದ ಶಿಯೋಪುರದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳನ್ನು ಬಿಡುಗಡೆ ಮಾಡಲಿದ್ದು, ಸುಮಾರು 70 ವರ್ಷಗಳ ನಂತರ ದೇಶದಲ್ಲಿ ಚಿರತೆಗಳನ್ನು ಮರು ಪರಿಚಯಿಸಲು ಸಿದ್ಧತೆ ನಡೆಸಲಾಗುತ್ತಿದೆ. ಮೋದಿ ಜನ್ಮದಿನದ ಸಂದರ್ಭದಲ್ಲಿ, ದೇಶದ ವನ್ಯಜೀವಿ ಮತ್ತು ಆವಾಸಸ್ಥಾನವನ್ನು ಪುನರುಜ್ಜೀವನಗೊಳಿಸುವ ಮತ್ತು ವೈವಿಧ್ಯಗೊಳಿಸುವ ಪ್ರಯತ್ನಗಳ ಭಾಗವಾಗಿ ನಮೀಬಿಯಾದಿಂದ ತಂದ ಎಂಟು ಚಿರತೆಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಲಿದ್ದಾರೆ. ಚಿರತೆಯನ್ನು ವಿಶೇಷ ಕಾರ್ಗೋ ವಿಮಾನ ಬೋಯಿಂಗ್ -747 ನಲ್ಲಿ ತರಲಾಗುತ್ತಿದ್ದು ಇದು ಗ್ವಾಲಿಯರ್‌ನಲ್ಲಿ ಇಳಿಯಲಿದೆ. ನಂತರ ಅವುಗಳನ್ನು ಹೆಲಿಕಾಪ್ಟರ್‌ನಲ್ಲಿ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗುತ್ತದೆ.

ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಚೀತಾ ಪ್ರಾಜೆಕ್ಟ್ ಮುಖ್ಯಸ್ಥ ಎಸ್‌ಪಿ ಯಾದವ್, ನಮೀಬಿಯಾದಿಂದ ಬರುವ ಚಿರತೆಗಳು ಈಗ ಗ್ವಾಲಿಯರ್‌ಗೆ ಬಂದಿಳಿಯಲಿವೆ. ಅವುಗಳನ್ನು ಸೆಪ್ಟೆಂಬರ್ 17 ರಂದು ಜೈಪುರದಲ್ಲಿ ಇಳಿಸುವುದಾಗಿ ಮೊದಲು ನಿರ್ಧರಿಸಲಾಗಿತ್ತು. ಗ್ವಾಲಿಯರ್ ಗೆ ಬಂದಿಳಿಯಲಿರುವ ಚಿರತೆಗಳನ್ನು ಹೆಲಿಕಾಪ್ಟರ್‌ನಿಂದ ಕುನೊ ರಾಷ್ಟ್ರೀಯ ಉದ್ಯಾನವನ ಶೆಯೋಪುರಕ್ಕೆ ತರಲಾಗುತ್ತದೆ.

ಭಾರತೀಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿ-ಪ್ರಾಜೆಕ್ಟ್ ಚೀತಾ- ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (IUCN) ಮಾರ್ಗಸೂಚಿಗಳ ಪ್ರಕಾರ ವನ್ಯಜೀವಿ ಪ್ರಭೇದಗಳನ್ನು ವಿಶೇಷವಾಗಿ ಚೀತಾವನ್ನು ಮರುಪರಿಚಯಿಸಲಾಗುತ್ತಿದೆ.

ಭಾರತವು ವನ್ಯಜೀವಿ ಸಂರಕ್ಷಣೆಯ ಸುದೀರ್ಘ ಇತಿಹಾಸವನ್ನು ಹೊಂದಿದೆ. ಅತ್ಯಂತ ಯಶಸ್ವಿ ವನ್ಯಜೀವಿ ಸಂರಕ್ಷಣಾ ಉದ್ಯಮಗಳಲ್ಲಿ ಒಂದಾದ ‘ಪ್ರಾಜೆಕ್ಟ್ ಟೈಗರ್’ 1972 ರಲ್ಲಿ ಪ್ರಾರಂಭವಾಯಿತು, ಇದು ಹುಲಿಗಳ ಸಂರಕ್ಷಣೆಗೆ ಮಾತ್ರವಲ್ಲದೆ ಇಡೀ ಪರಿಸರ ವ್ಯವಸ್ಥೆಗೆ ಕೊಡುಗೆ ನೀಡಿದೆ.

Published On - 1:35 pm, Fri, 16 September 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?