AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ಮೊದಲ ರಾತ್ರಿಯೇ ಚಿನ್ನಾಭರಣ, ಹಣ ದೋಚಿ ವಧು ಪರಾರಿ

ಮದುವೆ(Marriage)ಯ ಮೊದಲ ದಿನ ನಮ್ಮ ಸಂಪ್ರದಾಯದಲ್ಲಿ ಗಂಡ-ಹೆಂಡತಿ ಒಟ್ಟಿಗೆ ಇರಬಾರದು ಎಂದು ನವವಧು ಗಂಡನನ್ನು ನಂಬಿಸಿ ಬೇರೆಡೆ ಮಲಗಿಸಿ, ಮನೆಯಲ್ಲಿರುವ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿರುವ ಘಟನೆ ರಾಜಸ್ಥಾನದ ಕಿಶನ್​ಗಢದಲ್ಲಿ ನಡೆದಿದೆ. ಈ ಘಟನೆಯಿಂದ ವರನ ಕುಟುಂಬ ಆಘಾತ ಮತ್ತು ಅವಮಾನಕ್ಕೊಳಗಾಗಿದೆ. ಆ ವ್ಯಕ್ತಿ ಆಗ್ರಾದ ಮಹಿಳೆಯೊಂದಿಗೆ ವಿವಾಹವಾಗಿದ್ದ ಮದುವೆಯ ಮೊದಲ ರಾತ್ರಿಯೇ ಚಿನ್ನಾಭರಣ ಮತ್ತು ಹಣವನ್ನು ತೆಗೆದುಕೊಂಡು ನಾಪತ್ತೆಯಾಗಿದ್ದಾಳೆ.

ಮದುವೆಯ ಮೊದಲ ರಾತ್ರಿಯೇ ಚಿನ್ನಾಭರಣ, ಹಣ ದೋಚಿ ವಧು ಪರಾರಿ
ಮದುವೆ
ನಯನಾ ರಾಜೀವ್
|

Updated on: Sep 30, 2025 | 12:43 PM

Share

ಕಿಶನ್​ಗಢ, ಸೆಪ್ಟೆಂಬರ್ 30: ಮದುವೆ(Marriage)ಯ ಮೊದಲ ದಿನ ನಮ್ಮ ಸಂಪ್ರದಾಯದಲ್ಲಿ ಗಂಡ-ಹೆಂಡತಿ ಒಟ್ಟಿಗೆ ಇರಬಾರದು ಎಂದು ನವವಧು ಗಂಡನನ್ನು ನಂಬಿಸಿ ಬೇರೆಡೆ ಮಲಗಿಸಿ, ಮನೆಯಲ್ಲಿರುವ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿರುವ ಘಟನೆ ರಾಜಸ್ಥಾನದ ಕಿಶನ್​ಗಢದಲ್ಲಿ ನಡೆದಿದೆ. ಈ ಘಟನೆಯಿಂದ ವರನ ಕುಟುಂಬ ಆಘಾತ ಮತ್ತು ಅವಮಾನಕ್ಕೊಳಗಾಗಿದೆ. ಆ ವ್ಯಕ್ತಿ ಆಗ್ರಾದ ಮಹಿಳೆಯೊಂದಿಗೆ ವಿವಾಹವಾಗಿದ್ದ ಮದುವೆಯ ಮೊದಲ ರಾತ್ರಿಯೇ ಚಿನ್ನಾಭರಣ ಮತ್ತು ಹಣವನ್ನು ತೆಗೆದುಕೊಂಡು ನಾಪತ್ತೆಯಾಗಿದ್ದಾಳೆ.

ವಿವಾಹವು ರಾಜಸ್ಥಾನದ ಸಂಪ್ರದಾಯದಂತೆ ನೆರವೇರಿತ್ತು, ಸಂಗೀತ, ಸಿಹಿತಿಂಡಿಗಳು ಮತ್ತು ಆಚರಣೆಗಳೊಂದಿಗೆ ನಡೆಯಿತು ಆಕೆಗೆ ಮದುವೆಯಾಗಲು 2 ಲಕ್ಷ ರೂ. ಕೂಡ ವರ ಕೊಟ್ಟಿದ್ದ ಎನ್ನಲಾಗಿದೆ. ವಧುವನ್ನು ಕಿಶನ್‌ಗಢದಲ್ಲಿರುವ ಮನೆಗೆ ಕರೆತರಲಾಗಿತ್ತು. ವಿವಾಹದ ನಂತರದ ಸಂಪ್ರದಾಯಗಳ ಭಾಗವಾಗಿ ವರನ ತಾಯಿ ತನ್ನ ಹೊಸ ಸೊಸೆಗೆ ಚಿನ್ನದ ಆಭರಣಗಳನ್ನು ಉಡುಗೊರೆಯಾಗಿ ನೀಡಿದ್ದರು.

ದಂಪತಿ ಮೊದಲ ರಾತ್ರಿ ಕೋಣೆಗೆ ಹೋದಾಗ, ವಧು ಅಸಾಮಾನ್ಯ ಬೇಡಿಕೆಯನ್ನು ಮುಂದಿಟ್ಟಿದ್ದಳು, ನಾವು ಇಂದು ರಾತ್ರಿ ಒಟ್ಟಿಗೆ ಮಲಗಲು ಸಾಧ್ಯವಿಲ್ಲ, ಅದು ನಮ್ಮ ಪದ್ಧತಿಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾಳೆ. ಆಕೆ ಕಳ್ಳತನ ಮಾಡಲು ದೊಡ್ಡ ಪ್ಲ್ಯಾನ್ ಮಾಡಿದ್ದಳು, ಆದರೆ ಆಕೆಯ ಕುಟುಂಬಕ್ಕೆ ಯಾವುದೇ ಅನುಮಾನ ಬಂದಿರಲಿಲ್ಲ.

ಮತ್ತಷ್ಟು ಓದಿ: ವಧುವಿನ ಮನೆಯೇ ಕಣ್ಮರೆ; ಕುಟುಂಬದ ಜೊತೆ ಮದುವೆ ಮೆರವಣಿಗೆ ಬಂದ ವರನಿಗೆ ಶಾಕ್

ಬೆಳಗಿನ ಜಾವ 3 ಗಂಟೆ ಸುಮಾರಿಗೆ, ವರ ನೀರು ತರಲು ಎದ್ದಾಗ, ಮನೆಯಲ್ಲಿರುವವರು ಆಘಾತಕಾರಿ ಸತ್ಯವನ್ನು ಆತನಿಗೆ ಹೇಳಿದ್ದಾರೆ, ವಧು ಕಾಣೆಯಾಗಿದ್ದಳು, ಬೀರುವಿನಿಂದ ಚಿನ್ನಾಭರಣ ಮತ್ತು ಹಣವನ್ನು ತೆಗೆದುಕೊಂಡು ಹೋಗಿದ್ದಳು.

ಕುಟುಂಬವು ಸ್ಥಳೀಯ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಹತ್ತಿರದ ಪ್ರದೇಶಗಳಲ್ಲಿ ಹುಡುಕಾಡಿದರೂ ಆಕೆಯ ಸುಳಿವು ಸಿಗಲಿಲ್ಲ. ಸಂಬಂಧಿ ರಾಕೇಶ್ ಮದನ್‌ಗಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆಯು ಮದುವೆಯಾಗಬೇಕೆಂಬ ಕನಸು ಹೊತ್ತಿದ್ದ ಹಲವರನ್ನು ಭಯಕ್ಕೆ ತಳ್ಳಿದೆ.

ಮತ್ತೊಂದು ಘಟನೆ

62ರ ವೃದ್ಧನ ಜೊತೆ 45ರ ಮಹಿಳೆಯ ಮದುವೆ ಎರಡೇ ದಿನಕ್ಕೆ ಚಿನ್ನದ ಜೊತೆ ವಧು ಪರಾರಿ ಉತ್ತರ ಪ್ರದೇಶದ ಕಾನ್ಸುರದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಒಂಟಿತನದಿಂದ ಬಳಲುತ್ತಿದ್ದ 62 ವರ್ಷದ ವ್ಯಕ್ತಿಯೊಬ್ಬರು 45 ವರ್ಷದ ಮಹಿಳೆಯನ್ನು ವಿವಾಹವಾಗಿದ್ದಾರೆ. ಇನ್ನೂ ಮದುವೆಯಾದ ಎರಡೇ ದಿನಕ್ಕೆ ವಧು ನಗದು ಹಾಗೂ ಬಂಗಾರದೊಂದಿಗೆ ಪರಾರಿ ಆಗಿದ್ದಾಳೆ. ಆ ವೃದ್ಧ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದು, ಈ ಸಂಬಂಧ ಪೊಲೀಸರು ಕೂಡ ಈ ವಿಚಾರದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ನಿವೃತ್ತ ಸಿಒಡಿ ಉದ್ಯೋಗಿಯಾಗಿರುವ ಹರೀಶ್ ಕುಮಾರ್ ಶುಕ್ಲಾ ಎಂಬುವವರು ಚಾಕೇರಿ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇತ್ತೀಚೆಗೆ ಹರೀಶ್ ಅವರಿಗೆ ತಮ್ಮ ಮನೆಯ ಬಳಿ ಬಾಡಿಗೆಗೆ ವಾಸಿಸುತ್ತಿದ್ದ 45 ವರ್ಷದ ಪೂಜಾ ಎನ್ನುವಾಕೆಯ ಪರಿಚಯವಾಗಿತ್ತು.

ಪರಿಚಯ ನಿಧಾನವಾಗಿ ಪ್ರೀತಿಗೆ ತಿರುಗಿದ್ದು, ಇಬ್ಬರು ಮದುವೆ ಆಗೋಣ ಎಂದು ನಿರ್ಧರಿಸಿದ್ದಾರೆ. ಇದೇ ಫೆ.11 ರಂದು ಹರೀಶ್ ಪೂಜಾ ಅವರೊಂದಿಗೆ ಬೆನಝಬರ್‌ನಲ್ಲಿರುವ ಆರ್ಯ ಸಮಾಜ ದೇವಸ್ಥಾನದಲ್ಲಿ ಹರೀಶ್ ಕುಮಾರ್ ಶುಕ್ಲಾ ಮದುವೆಯಾಗಿದ್ದರು. ಬಳಿಕ ಆಕೆ ಪರಾರಿಯಾಗಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!