AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಮುಜ್ ಜಲಸಂಧಿ ದಾಟಿ ಮುಂಬೈ ಬಂದರು ತಲುಪಿದ ಭಾರತದ ಮೊದಲ ತೈಲ ಟ್ಯಾಂಕರ್

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಾರ್ಮುಜ್ ಜಲಸಂಧಿಯನ್ನು ದಾಟಿದ ಲೈಬೀರಿಯನ್ ಕಚ್ಚಾ ತೈಲ ಟ್ಯಾಂಕರ್ 'ಶೆನ್ಲಾಂಗ್' ಮುಂಬೈ ಬಂದರನ್ನು ತಲುಪಿದೆ. ಇರಾನ್ ಇತ್ತೀಚೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ನಿರ್ಬಂಧಗಳನ್ನು ಬಿಗಿಗೊಳಿಸಿದೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಟ್ಯಾಂಕರ್ ಹಾದುಹೋಗಲು ಇರಾನ್ ಅನುಮತಿ ನೀಡಿದ ಬಳಿಕ ಭಾರತದ ಮೊದಲ ತೈಲ ಟ್ಯಾಂಕರ್ ಮುಂಬೈ ಬಂದರಿಗೆ ಆಗಮಿಸಿದೆ. 

ಹಾರ್ಮುಜ್ ಜಲಸಂಧಿ ದಾಟಿ ಮುಂಬೈ ಬಂದರು ತಲುಪಿದ ಭಾರತದ ಮೊದಲ ತೈಲ ಟ್ಯಾಂಕರ್
Indian Oil Tanker
ಸುಷ್ಮಾ ಚಕ್ರೆ
|

Updated on: Mar 12, 2026 | 2:43 PM

Share

ಮುಂಬೈ, ಮಾರ್ಚ್ 12: ಸೌದಿ ಅರೇಬಿಯಾದಿಂದ ಇಂಧನವನ್ನು ಸಾಗಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಇಂದು ಹಾರ್ಮುಜ್ ಜಲಸಂಧಿಯ (Strait Of Hormuz) ಮೂಲಕ ಸಾಗಿ ಸುರಕ್ಷಿತವಾಗಿ ಮುಂಬೈ ಬಂದರಿಗೆ ಆಗಮಿಸಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಲೇ ಇರುವುದರಿಂದ ತೈಲ ಟ್ಯಾಂಕರ್ ಸಾಗಣೆಗೆ ಭಾರತ ಇರಾನ್​ನ ಅನುಮತಿ ಕೋರಿತ್ತು. ಶೆನ್ಲಾಂಗ್ ಸೂಯೆಜ್‌ಮ್ಯಾಕ್ಸ್ ಎಂಬ ಈ ಹಡಗನ್ನು ಭಾರತೀಯರೊಬ್ಬರು ಮುನ್ನಡೆಸಿದ್ದಾರೆ. ಸೌದಿ ಅರೇಬಿಯಾದ ಪ್ರಮುಖ ತೈಲ ರಫ್ತು ಟರ್ಮಿನಲ್‌ಗಳಲ್ಲಿ ಒಂದಾದ ರಾಸ್ ತನುರಾದಿಂದ ಲೋಡ್ ಮಾಡಲಾದ ಕಚ್ಚಾ ತೈಲವನ್ನು ಅವರು ಸಾಗಿಸುತ್ತಿದ್ದರು.

ಮುಂಬೈ ಬಂದರಿನ ವಿಡಿಯೋಗಳು ತೈಲ ಟ್ಯಾಂಕರ್ ಬಂದರನ್ನು ಸಮೀಪಿಸುತ್ತಿರುವುದನ್ನು ಮತ್ತು ಡಾಕಿಂಗ್ ಮಾಡುತ್ತಿರುವುದನ್ನು ತೋರಿಸಿವೆ. ಈ ಟ್ಯಾಂಕರ್ ಮಾರ್ಚ್ 1ರಂದು ರಾಸ್ ತನುರಾದಿಂದ ಹೊರಟು ಮುಂಬೈ ತಲುಪುವ ಮೊದಲು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿತ್ತು. ಈ ಹಡಗು ಕಿರಿದಾದ ಕಡಲ ಕಾರಿಡಾರ್ ಮೂಲಕ ಹಾದುಹೋಗಲು ಇರಾನ್‌ನಿಂದ ಅನುಮತಿ ಪಡೆದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಸಾಗಣೆಗೆ ಇರಾನ್ ಒಪ್ಪಿಗೆ

ಇರಾನ್ ಇತ್ತೀಚೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ನಿರ್ಬಂಧಗಳನ್ನು ಬಿಗಿಗೊಳಿಸಿದೆ. ಈ ಮಾರ್ಗದಲ್ಲಿ ಸಾಗುವ ಹಡಗುಗಳು ಜಲಮಾರ್ಗವನ್ನು ಪ್ರವೇಶಿಸುವ ಮೊದಲು ಟೆಹ್ರಾನ್‌ನಿಂದ ಪೂರ್ವಾನುಮತಿ ಪಡೆಯಬೇಕಾಗುತ್ತದೆ.

ಹಾರ್ಮುಜ್ ಜಲಸಂಧಿಯು ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಹಡಗು ಮಾರ್ಗಗಳಲ್ಲಿ ಒಂದಾಗಿದೆ. ಇದು ಪರ್ಷಿಯನ್ ಕೊಲ್ಲಿಯನ್ನು ಜಾಗತಿಕ ಮಾರುಕಟ್ಟೆಗಳೊಂದಿಗೆ ಸಂಪರ್ಕಿಸುತ್ತದೆ. ಪ್ರತಿದಿನ 20 ಮಿಲಿಯನ್ ಬ್ಯಾರೆಲ್‌ಗಳಿಗೂ ಹೆಚ್ಚು ಕಚ್ಚಾ ತೈಲವು ಈ ಚಾನಲ್ ಮೂಲಕ ಹಾದುಹೋಗುತ್ತದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಇರಾನಿನ ಸಚಿವ ಅಬ್ಬಾಸ್ ಅರಗ್ಚಿ ನಡುವಿನ ಮಾತುಕತೆಯ ನಂತರ ಇರಾನ್ ಭಾರತೀಯ ತೈಲ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯನ್ನು ಸಾಗಿಸಲು ಅನುಮತಿ ಸಿಕ್ಕಿತ್ತು. ಇದಾದ ನಂತರ ಈ ಹಡಗು ಮುಂಬೈಗೆ ಆಗಮಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ