AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಧು ತಮ್ಮ ಮಕ್ಕಳನ್ನು ಗಡಿ ಕಾಯಲು ಕಳಿಸಿ, ಬಳಿಕ ಇಮ್ರಾನ್​​ರನ್ನು ಅಣ್ಣ ಎನ್ನಲಿ: ಬಿಜೆಪಿ ಸಂಸದ ಗೌತಮ್ ಗಂಭೀರ್​

ನಮ್ಮ ದೇಶದ ಪ್ರಧಾನಿ, ಪಂಜಾಬ್​ ಹಿಂದಿನ ಮುಖ್ಯಮಂತ್ರಿ ಕ್ಯಾ.ಅಮರಿಂದರ್​ ಸಿಂಗ್​, ಈಗಿನ ಮುಖ್ಯಮಂತ್ರಿ ಚರಣಜಿತ್​ ಛನ್ನಿ ವಿರುದ್ಧ ಮಾತನಾಡುವ ಸಿಧು, ಪಾಕಿಸ್ತಾನದಲ್ಲಿ ಪ್ರಧಾನಿಯನ್ನು ಅಣ್ಣ ಎನ್ನುತ್ತಾರೆ ಎಂದರೆ ಏನರ್ಥ ಎಂದೂ ಗೌತಮ್ ಗಂಭೀರ್​ ಪ್ರಶ್ನಿಸಿದ್ದಾರೆ.

ಸಿಧು ತಮ್ಮ ಮಕ್ಕಳನ್ನು ಗಡಿ ಕಾಯಲು ಕಳಿಸಿ, ಬಳಿಕ ಇಮ್ರಾನ್​​ರನ್ನು ಅಣ್ಣ ಎನ್ನಲಿ: ಬಿಜೆಪಿ ಸಂಸದ ಗೌತಮ್ ಗಂಭೀರ್​
ಗೌತಮ್​ ಗಂಭೀರ್​
TV9 Web
| Edited By: |

Updated on: Nov 21, 2021 | 10:54 AM

Share

ದೆಹಲಿ: ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್​ ನನ್ನ ಅಣ್ಣ ಎಂದು ಹೇಳಿದ್ದ ನವಜೋತ್​ ಸಿಂಗ್​ ಸಿಧು ಅವರ ವಿರುದ್ಧ ಬಿಜೆಪಿ ಸಂಸದ ಗೌತಮ್​ ಗಂಭೀರ್​ ಕಿಡಿಕಾರಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ನಿನ್ನೆ ಕರ್ತಾರ್​ಪುರ ಸಾಹೀಬ್​ಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿ, ಕ್ರಿಕೆಟ್ ಆಟ ಆಡುತ್ತಿದ್ದ ಕಾಲದಿಂದಲೂ ಇಮ್ರಾನ್ ಖಾನ್​ ನನ್ನ ಉತ್ತಮ ಸ್ನೇಹಿತ ಅಷ್ಟೇಅಲ್ಲ, ನನ್ನ ಅಣ್ಣನಂತೆ ಇದ್ದರು ಎಂದು ಹೊಗಳಿದ್ದರು. ಆದರೆ ಸಿಧು ಈ ಮಾತು ಭಾರತೀಯರಿಗೆ ಇಷ್ಟವಾಗಿರಲಿಲ್ಲ. ಹಲವರು ಸೋಷಿಯಲ್​ ಮೀಡಿಯಾ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದರು.  

ಹಾಗೇ ಮಾಜಿ ಕ್ರಿಕೆಟರ್​, ಬಿಜೆಪಿ ಸಂಸದ ಗೌತಮ್​ ಗಂಭೀರ್​ ಕೂಡ ತಿರುಗೇಟು ನೀಡಿದ್ದಾರೆ. ನವಜೋತ್​ ಸಿಂಗ್ ಸಿಧು ಮೊದಲು ಅವರ ಮಕ್ಕಳನ್ನು ಗಡಿ ಕಾಯಲು ಕಳಿಸಲಿ. ತಮ್ಮ ಮಕ್ಕಳನ್ನು ಸೇನೆಗೆ ಸೇರಿಸಿದ ಬಳಿಕವೂ ಅವರು ಇಮ್ರಾನ್​ ಖಾನ್​ರನ್ನು ಅಣ್ಣ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.  ಕಾಶ್ಮೀರದಲ್ಲಿ ಕಳೆದ ಒಂದು ತಿಂಗಳಲ್ಲಿ ನಾಗರಿಕರು, ಯೋಧರೆಲ್ಲ ಸೇರಿ 40 ಮಂದಿಯ ಹತ್ಯೆಯಾಗಿದೆ. ಈ ಬಗ್ಗೆ ಸಿಧು ಮಾತನಾಡುತ್ತಿಲ್ಲ. ಸಿಧು ಕರ್ತಾರ್​ಪುರ ಸಾಹೀಬ್​​ಗೆ ಹೋಗಿ ಪಾಕ್​ ಆರ್ಮಿ ಮುಖ್ಯಸ್ಥ ಬಜ್ವಾರನ್ನು ಅಪ್ಪಿಕೊಳ್ಳುತ್ತಾರೆ..ಇಮ್ರಾನ್​ಖಾನ್​ರನ್ನು ಅಣ್ಣ ಎನ್ನುತ್ತಾರೆ. ಇದರಂಥಾ ನಾಚಿಕೆಗೇಡಿನ ಹೇಳಿಕೆ ಇನ್ನೊಂದಿಲ್ಲ ಎಂದು ಗಂಭೀರ್​ ಕಿಡಿಕಾರಿದ್ದಾರೆ.

ನವಜೋತ್​ ಸಿಂಗ್ ಸಿಧು ಎಂಥ ರಾಜಕಾರಣ ಮಾಡುತ್ತಿದ್ದಾರೆ ಎಂಬುದನ್ನು ಇಡೀ ದೇಶವೇ ಅರ್ಥ ಮಾಡಿಕೊಳ್ಳಬಲ್ಲದು. ನಮ್ಮ ದೇಶದ ಪ್ರಧಾನಿ, ಪಂಜಾಬ್​ ಹಿಂದಿನ ಮುಖ್ಯಮಂತ್ರಿ ಕ್ಯಾ.ಅಮರಿಂದರ್​ ಸಿಂಗ್​, ಈಗಿನ ಮುಖ್ಯಮಂತ್ರಿ ಚರಣಜಿತ್​ ಛನ್ನಿ ವಿರುದ್ಧವೇ ಮಾತನಾಡುವ ಸಿಧು, ಪಾಕಿಸ್ತಾನದಲ್ಲಿ ಪ್ರಧಾನಿಯನ್ನು ಅಣ್ಣ ಎನ್ನುತ್ತಾರೆ ಎಂದರೆ ಏನರ್ಥ ಎಂಬ ಪ್ರಶ್ನೆಯನ್ನೂ ಗೌತಮ್​ ಗಂಭೀರ್​ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: Viral Video: ಅಮಾಯಕನಂತೆ ವರ್ತಿಸುತ್ತಾ ಸೈಕಲ್ ಕದ್ದು ಪರಾರಿಯಾಗಲು ಹೊರಟ ಕಳ್ಳ; ಮುಂದೇನಾಯ್ತು? ವಿಡಿಯೊ ನೋಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್