AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಧು ತಮ್ಮ ಮಕ್ಕಳನ್ನು ಗಡಿ ಕಾಯಲು ಕಳಿಸಿ, ಬಳಿಕ ಇಮ್ರಾನ್​​ರನ್ನು ಅಣ್ಣ ಎನ್ನಲಿ: ಬಿಜೆಪಿ ಸಂಸದ ಗೌತಮ್ ಗಂಭೀರ್​

ನಮ್ಮ ದೇಶದ ಪ್ರಧಾನಿ, ಪಂಜಾಬ್​ ಹಿಂದಿನ ಮುಖ್ಯಮಂತ್ರಿ ಕ್ಯಾ.ಅಮರಿಂದರ್​ ಸಿಂಗ್​, ಈಗಿನ ಮುಖ್ಯಮಂತ್ರಿ ಚರಣಜಿತ್​ ಛನ್ನಿ ವಿರುದ್ಧ ಮಾತನಾಡುವ ಸಿಧು, ಪಾಕಿಸ್ತಾನದಲ್ಲಿ ಪ್ರಧಾನಿಯನ್ನು ಅಣ್ಣ ಎನ್ನುತ್ತಾರೆ ಎಂದರೆ ಏನರ್ಥ ಎಂದೂ ಗೌತಮ್ ಗಂಭೀರ್​ ಪ್ರಶ್ನಿಸಿದ್ದಾರೆ.

ಸಿಧು ತಮ್ಮ ಮಕ್ಕಳನ್ನು ಗಡಿ ಕಾಯಲು ಕಳಿಸಿ, ಬಳಿಕ ಇಮ್ರಾನ್​​ರನ್ನು ಅಣ್ಣ ಎನ್ನಲಿ: ಬಿಜೆಪಿ ಸಂಸದ ಗೌತಮ್ ಗಂಭೀರ್​
ಗೌತಮ್​ ಗಂಭೀರ್​
TV9 Web
| Edited By: |

Updated on: Nov 21, 2021 | 10:54 AM

Share

ದೆಹಲಿ: ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್​ ನನ್ನ ಅಣ್ಣ ಎಂದು ಹೇಳಿದ್ದ ನವಜೋತ್​ ಸಿಂಗ್​ ಸಿಧು ಅವರ ವಿರುದ್ಧ ಬಿಜೆಪಿ ಸಂಸದ ಗೌತಮ್​ ಗಂಭೀರ್​ ಕಿಡಿಕಾರಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ನಿನ್ನೆ ಕರ್ತಾರ್​ಪುರ ಸಾಹೀಬ್​ಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿ, ಕ್ರಿಕೆಟ್ ಆಟ ಆಡುತ್ತಿದ್ದ ಕಾಲದಿಂದಲೂ ಇಮ್ರಾನ್ ಖಾನ್​ ನನ್ನ ಉತ್ತಮ ಸ್ನೇಹಿತ ಅಷ್ಟೇಅಲ್ಲ, ನನ್ನ ಅಣ್ಣನಂತೆ ಇದ್ದರು ಎಂದು ಹೊಗಳಿದ್ದರು. ಆದರೆ ಸಿಧು ಈ ಮಾತು ಭಾರತೀಯರಿಗೆ ಇಷ್ಟವಾಗಿರಲಿಲ್ಲ. ಹಲವರು ಸೋಷಿಯಲ್​ ಮೀಡಿಯಾ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದರು.  

ಹಾಗೇ ಮಾಜಿ ಕ್ರಿಕೆಟರ್​, ಬಿಜೆಪಿ ಸಂಸದ ಗೌತಮ್​ ಗಂಭೀರ್​ ಕೂಡ ತಿರುಗೇಟು ನೀಡಿದ್ದಾರೆ. ನವಜೋತ್​ ಸಿಂಗ್ ಸಿಧು ಮೊದಲು ಅವರ ಮಕ್ಕಳನ್ನು ಗಡಿ ಕಾಯಲು ಕಳಿಸಲಿ. ತಮ್ಮ ಮಕ್ಕಳನ್ನು ಸೇನೆಗೆ ಸೇರಿಸಿದ ಬಳಿಕವೂ ಅವರು ಇಮ್ರಾನ್​ ಖಾನ್​ರನ್ನು ಅಣ್ಣ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.  ಕಾಶ್ಮೀರದಲ್ಲಿ ಕಳೆದ ಒಂದು ತಿಂಗಳಲ್ಲಿ ನಾಗರಿಕರು, ಯೋಧರೆಲ್ಲ ಸೇರಿ 40 ಮಂದಿಯ ಹತ್ಯೆಯಾಗಿದೆ. ಈ ಬಗ್ಗೆ ಸಿಧು ಮಾತನಾಡುತ್ತಿಲ್ಲ. ಸಿಧು ಕರ್ತಾರ್​ಪುರ ಸಾಹೀಬ್​​ಗೆ ಹೋಗಿ ಪಾಕ್​ ಆರ್ಮಿ ಮುಖ್ಯಸ್ಥ ಬಜ್ವಾರನ್ನು ಅಪ್ಪಿಕೊಳ್ಳುತ್ತಾರೆ..ಇಮ್ರಾನ್​ಖಾನ್​ರನ್ನು ಅಣ್ಣ ಎನ್ನುತ್ತಾರೆ. ಇದರಂಥಾ ನಾಚಿಕೆಗೇಡಿನ ಹೇಳಿಕೆ ಇನ್ನೊಂದಿಲ್ಲ ಎಂದು ಗಂಭೀರ್​ ಕಿಡಿಕಾರಿದ್ದಾರೆ.

ನವಜೋತ್​ ಸಿಂಗ್ ಸಿಧು ಎಂಥ ರಾಜಕಾರಣ ಮಾಡುತ್ತಿದ್ದಾರೆ ಎಂಬುದನ್ನು ಇಡೀ ದೇಶವೇ ಅರ್ಥ ಮಾಡಿಕೊಳ್ಳಬಲ್ಲದು. ನಮ್ಮ ದೇಶದ ಪ್ರಧಾನಿ, ಪಂಜಾಬ್​ ಹಿಂದಿನ ಮುಖ್ಯಮಂತ್ರಿ ಕ್ಯಾ.ಅಮರಿಂದರ್​ ಸಿಂಗ್​, ಈಗಿನ ಮುಖ್ಯಮಂತ್ರಿ ಚರಣಜಿತ್​ ಛನ್ನಿ ವಿರುದ್ಧವೇ ಮಾತನಾಡುವ ಸಿಧು, ಪಾಕಿಸ್ತಾನದಲ್ಲಿ ಪ್ರಧಾನಿಯನ್ನು ಅಣ್ಣ ಎನ್ನುತ್ತಾರೆ ಎಂದರೆ ಏನರ್ಥ ಎಂಬ ಪ್ರಶ್ನೆಯನ್ನೂ ಗೌತಮ್​ ಗಂಭೀರ್​ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: Viral Video: ಅಮಾಯಕನಂತೆ ವರ್ತಿಸುತ್ತಾ ಸೈಕಲ್ ಕದ್ದು ಪರಾರಿಯಾಗಲು ಹೊರಟ ಕಳ್ಳ; ಮುಂದೇನಾಯ್ತು? ವಿಡಿಯೊ ನೋಡಿ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು