AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಮೊದಲ ಮಂಗಳಮುಖಿ ಆರ್​ಜೆ ಅನನ್ಯಾ ಕುಮಾರಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ; ಅಂದು ಜೀವ ಬೆದರಿಕೆ ಇದೆ ಎಂದಿದ್ದರು..!

Kerala: ಅನನ್ಯಾ ಕುಮಾರಿ ಕೊಲ್ಲಂ ಪೆರುಮಾನ್​ ನಿವಾಸಿ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಲ್ಲಪ್ಪುರಂ ಜಿಲ್ಲೆಯ ವೆಂಗಾರಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು.

ಕೇರಳದ ಮೊದಲ ಮಂಗಳಮುಖಿ ಆರ್​ಜೆ ಅನನ್ಯಾ ಕುಮಾರಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ; ಅಂದು ಜೀವ ಬೆದರಿಕೆ ಇದೆ ಎಂದಿದ್ದರು..!
ಅನನ್ಯಾ ಕುಮಾರಿ ಅಲೆಕ್ಸ್​
TV9 Web
| Edited By: |

Updated on: Jul 21, 2021 | 9:15 AM

Share

ಕೇರಳದ ಮೊದಲ ಮಂಗಳಮುಖಿ ರೇಡಿಯೋ ಜಾಕಿ (RJ) ಮತ್ತು ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದ ಅನನ್ಯ ಕುಮಾರಿ ಅಲೆಕ್ಸ್​ ಕೊಚ್ಚಿಯ ಫ್ಲ್ಯಾಟ್​ವೊಂದರಲ್ಲಿ ಮೃತಪಟ್ಟಿದ್ದಾರೆ. ಅಪಾರ್ಟ್​ಮೆಂಟ್​​ನ ಬೆಡ್​ರೂಮ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅನನ್ಯಾ ಶವ ಪತ್ತೆಯಾಗಿದೆ ಎಂದು ಕಲಂಸ್ಸೆರಿ ಪೊಲೀಸರು ತಿಳಿಸಿದ್ದಾರೆ. 2020ರಲ್ಲಿ ಲಿಂಗಪರಿವರ್ತನೆ ಸರ್ಜರಿಗೆ ಒಳಗಾಗಿದ್ದ 28ವರ್ಷದ ಅನನ್ಯಾ, ತಾವು ತುಂಬ ಗಂಭೀರವಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದರು.

ಲಿಂಗಪರಿವರ್ತನೆ ಶಸ್ತ್ರಚಿಕಿತ್ಸೆ ನಂತರ ದೀರ್ಘಕಾಲದವರೆಗೆ ನಿಲ್ಲಲು ಸಾಧ್ಯವಾಗುತ್ತಿಲ್ಲ. ಕೆಲಸ ಮಾಡಲೂ ಕಷ್ಟವಾಗುತ್ತಿದೆ. ಸರ್ಜರಿ ಮಾಡುವಾಗ ಆದ ತಪ್ಪುಗಳಿಂದ ನಾನು ತುಂಬ ಬಳಲುತ್ತಿದ್ದೇನೆ ಎಂದು ಅನನ್ಯಾ ಬೇಸರಿಸಿಕೊಂಡಿದ್ದರು. ಇದೀಗ ಅವರು ದೈಹಿಕ ಸಂಕಟ ತಾಳಲಾರೆದೆನೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಿರುವ ಪೊಲೀಸರು, ಸದ್ಯ ಪ್ರಕರಣದ ತನಿಖೆ ಶುರು ಮಾಡಿದ್ದಾರೆ. ಇನ್ನು ಅನನ್ಯಾ ಸಾವಿನ ಸಂಬಂಧ ಅವರ ಸ್ನೇಹಿತರು ಮುಖ್ಯಮಂತ್ರಿಗೆ ದೂರು ನೀಡಿದ್ದು, ಸರಿಯಾದ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಅನನ್ಯಾ ಕುಮಾರಿ ಕೊಲ್ಲಂ ಪೆರುಮಾನ್​ ನಿವಾಸಿ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಲ್ಲಪ್ಪುರಂ ಜಿಲ್ಲೆಯ ವೆಂಗಾರಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಆದರೆ ನಂತರ ಪ್ರಜಾಪ್ರಭುತ್ವ ಸಾಮಾಜಿಕ ನ್ಯಾಯ ಪಕ್ಷದ (Democratic Social Justice Party (DSJP) ನಾಯಕರಿಂದ ನಿರಂತರವಾಗಿ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಮಾನಸಿಕವಾಗಿ ತುಂಬ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಇನ್ನು ಇವರು ಕೇರಳ ರಾಜ್ಯದ ಮೊದಲ ಆರ್​ಜೆ ಕೂಡ ಹೌದು. ಮೇಕಪ್​ ಆರ್ಟಿಸ್ಟ್​ ಆಗಿಯೂ ಕೆಲಸ ಮಾಡಿದ್ದ ಅನನ್ಯ ಕುಮಾರಿ, ರಾಜ್ಯದ ಖಾಸಗಿ ಸುದ್ದಿ ವಾಹಿನಿಯಲ್ಲಿ ಸುದ್ದಿ ನಿರೂಪಕಿಯಾಗಿಯೂ ಕೆಲಸ ಮಾಡಿದ್ದರು.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳುವತ್ತ ಯೋಚಿಸಬಹುದು; ಬೆಲೆ ಅಲ್ಪವೇ ಏರಿಕೆಯಾಗಿದೆ ಅಷ್ಟೆ! ಪ್ರಮುಖ ನಗರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Kerala’s first transgender RJ Anannyah Kumari Alex Found Dead

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್