AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್‌ನ ಮೊದಲ ನ್ಯಾಯಾಧೀಶೆ ಎಂ. ಫಾತಿಮಾ ಬೀವಿ ನಿಧನ

Justice Fathima Beevi: 1950 ರಲ್ಲಿ ವಕೀಲರಾಗಿ ದಾಖಲಾದ ಫಾತಿಮಾ ಬೀವಿ 1958 ರಲ್ಲಿ ಮುನ್ಸಿಫ್ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು 1968 ರಲ್ಲಿ ಉಪ ನ್ಯಾಯಾಧೀಶರಾಗಿ ಮತ್ತು 1972 ರಲ್ಲಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಗಿ ಬಡ್ತಿ ಪಡೆದರು. 1974ರಲ್ಲಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದರು.

ಸುಪ್ರೀಂಕೋರ್ಟ್‌ನ ಮೊದಲ ನ್ಯಾಯಾಧೀಶೆ ಎಂ. ಫಾತಿಮಾ ಬೀವಿ ನಿಧನ
ಫಾತಿಮಾ ಬೀವಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Nov 23, 2023 | 3:02 PM

Share

ಕೊಲ್ಲಂ ನವೆಂಬರ್ 23: ಸುಪ್ರೀಂಕೋರ್ಟ್‌ನ (Supreme Court) ಮೊದಲ ನ್ಯಾಯಾಧೀಶೆ ಹಾಗೂ ತಮಿಳುನಾಡಿನ ಮಾಜಿ ರಾಜ್ಯಪಾಲರಾದ  ಜಸ್ಟೀಸ್ ಎಂ. ಫಾತಿಮಾ ಬೀವಿ (Justice Fathima Beevi) ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಗುರುವಾರ ಬೆಳಗ್ಗೆ ಕೇರಳ ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ಫಾತಿಮಾ ಬೀವಿ ಕೊನೆಯುಸಿರೆಳೆದಿದ್ದಾರೆ.ಪತ್ತನಂತಿಟ್ಟದಲ್ಲಿ ಅಣ್ಣಾವೀಟ್‌ನಲ್ಲಿ ಮೀರಾ ಸಾಹಿಬ್ ಮತ್ತು ಖದೀಜಾ ಬೀವಿಯವರ ಮಗಳಾಗಿ 1927 ರಲ್ಲಿ ಜನಿಸಿದ ಫಾತಿಮಾ ಬೀವಿ, ಪತ್ತನಂತಿಟ್ಟ ಕ್ಯಾಥೋಲಿಕ್ ಹೈಸ್ಕೂಲ್‌ನಲ್ಲಿ ಓದಿದ ನಂತರ ತಿರುವನಂತಪುರಂ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ಪದವಿ ಪಡೆದರು.

ತಿರುವನಂತಪುರಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನೂ ಪಡೆದರು. 1950 ರಲ್ಲಿ ವಕೀಲರಾಗಿ ದಾಖಲಾದ ಫಾತಿಮಾ ಬೀವಿ 1958 ರಲ್ಲಿ ಮುನ್ಸಿಫ್ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು 1968 ರಲ್ಲಿ ಉಪ ನ್ಯಾಯಾಧೀಶರಾಗಿ ಮತ್ತು 1972 ರಲ್ಲಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಗಿ ಬಡ್ತಿ ಪಡೆದರು.

1974ರಲ್ಲಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದರು. 1983ರಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯಾದರು. 1989 ರಲ್ಲಿ, ಅವರು ಸುಪ್ರೀಂಕೋರ್ಟ್‌ನಲ್ಲಿ ದೇಶದ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಮೂರು ವರ್ಷಗಳ ನಂತರ ಅವರು ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾದರು.

ಇದನ್ನೂ ಓದಿ:  Rain Alert: ಕೇರಳ, ತಮಿಳುನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ, ಆರೆಂಜ್ ಅಲರ್ಟ್ ​, ಪುದುಚೇರಿಯಲ್ಲಿ ಶಾಲೆಗಳಿಗೆ ರಜೆ

ಫಾತಿಮಾ ಬೀವಿ 1997 ರಿಂದ 2001 ರವರೆಗೆ ತಮಿಳುನಾಡಿನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಈ ವರ್ಷ ಕೇರಳ ಸರ್ಕಾರವು ಫಾತಿಮಾ ಬೇವಿ ಅವರಿಗೆ ‘ಕೇರಳ ಪ್ರಭ’ ಪ್ರಶಸ್ತಿ ನೀಡಿ ಗೌರವಿಸಿದೆ. ಸಾಮಾಜಿಕ ಮತ್ತು ನಾಗರಿಕ ಸೇವಾ ಕ್ಷೇತ್ರದಲ್ಲಿನ ಕೊಡುಗೆಗಾಗಿ ಫಾತಿಮಾ ಬೀವಿ ಅವರಿಗೆ ‘ಕೇರಳಪ್ರಭಾ’ ಪ್ರಶಸ್ತಿಯನ್ನು ನೀಡಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Thu, 23 November 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​