AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಬ್ಯಾಂಕ್​​ನಿಂದ ಜಪ್ತಿ ನೋಟಿಸ್ ಬಂದ ಕೆಲವೇ ಗಂಟೆಗಳಲ್ಲಿ ಹೊಡೆಯಿತು 70 ಲಕ್ಷ ರೂ. ಬಹುಮಾನದ ಲಾಟರಿ

ನೋಟಿಸ್ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಲಾಟರಿಯ ವಿಜೇತ ಸಂಖ್ಯೆಯನ್ನು ಘೋಷಿಸಿದಾಗ ನಮಗೆ ಮೊದಲ ಬಹುಮಾನ ಬಂದಿತ್ತು ಅಂತಾರೆ ಈ ಮೀನುಗಾರರ ಕುಟುಂಬ.

ಕೇರಳ: ಬ್ಯಾಂಕ್​​ನಿಂದ ಜಪ್ತಿ ನೋಟಿಸ್ ಬಂದ ಕೆಲವೇ ಗಂಟೆಗಳಲ್ಲಿ ಹೊಡೆಯಿತು 70 ಲಕ್ಷ ರೂ. ಬಹುಮಾನದ ಲಾಟರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 14, 2022 | 7:24 PM

Share

ಕೇರಳದ ಮೀನು ಮಾರಾಟಗಾರರಾದ ಪೂಕುಂಞು, ಬ್ಯಾಂಕ್​​ನಿಂದ  (Bank) ಸಾಲ ಪಡೆದಿದ್ದು ಸಾಲ ಮರುಪಾವತಿ ಮಾಡಲು ಸಾಧ್ಯವಾಗದೇ ಇದ್ದಾಗ ಬ್ಯಾಂಕ್‌ನಿಂದ ಜಪ್ತಿ ನೋಟಿಸ್ ಬಂದಿತ್ತು. ಬ್ಯಾಂಕ್ ನೋಟಿಸ್ ಬಂದ ತಲೆ ಬಿಸಿಯಲ್ಲಿರುವಾಗಲೇ ಭಾಗ್ಯ ದೇವತೆ ಬಂದು ಅವರ ಕದ ತಟ್ಟಿದ್ದಾಳೆ. ರಾಜ್ಯ ಸರ್ಕಾರದ 70 ಲಕ್ಷ ರೂಪಾಯಿ ಅಕ್ಷಯ ಲಾಟರಿ (Akshaya lottery) ಪೂಕುಂಞುಗೆ ಒಲಿದಿದೆ. ಅಕ್ಟೋಬರ್ 12 ರಂದು ಪೂಕುಂಞು ಅವರು ಮೀನು ಸಂಗ್ರಹಿಸಲು ತೆರಳುತ್ತಿದ್ದಾಗ ಲಾಟರಿ ಖರೀದಿಸಿದ್ದು ಮೊದಲ ಬಹುಮಾನ 70 ಲಕ್ಷ ರೂಪಾಯಿಯನ್ನು ಅವರು ಗೆದ್ದಿದ್ದಾರೆ. ಮಧ್ಯಾಹ್ನ ಮನೆಗೆ ಹಿಂದಿರುಗಿದಾಗ ಸುಮಾರು 9 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಕಾರಣ ಬ್ಯಾಂಕ್ ತನ್ನ ಮನೆಗೆ ಸಂಬಂಧಿಸಿದಂತೆ ಜಪ್ತಿ ನೋಟಿಸ್ ಕಳುಹಿಸಿದೆ ಎಂದು ತಿಳಿದುಬಂದಿದೆ. “ಬ್ಯಾಂಕ್‌ನಿಂದ ನೋಟಿಸ್ ಬಂದ ನಂತರ ನಾವು ಬೇಸರದಲ್ಲಿದ್ದೆವು. ನಮಗೆ ಏನು ಮಾಡಬೇಕೆಂದು ತಿಳಿಯಲಿಲ್ಲ. ನಮ್ಮ ಆಸ್ತಿಯನ್ನು ಮಾರಾಟ ಮಾಡಬೇಕಾಗುತ್ತದೆಯೇ ಎಂದು ನಾವು ಯೋಚಿಸುತ್ತಿದ್ದೆವು” ಎಂದು ಪೂಕುಂಞು ಅವರ ಹೆಂಡತಿ ಹೇಳಿದ್ದಾರೆ.

ನೋಟಿಸ್ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಲಾಟರಿಯ ವಿಜೇತ ಸಂಖ್ಯೆಯನ್ನು ಘೋಷಿಸಿದಾಗ ನಮಗೆ ಮೊದಲ ಬಹುಮಾನ ಬಂದಿತ್ತು ಅಂತಾರೆ ಈ ಮೀನುಗಾರರ ಕುಟುಂಬ. ಕೆಲವೇ ಗಂಟೆಗಳ ಹಿಂದೆ ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿ ಈಗ ಲಕ್ಷಾಧಿಪತಿ!.

ಮೊದಲು ಎಲ್ಲಾ ಸಾಲಗಳನ್ನು ತೀರಿಸಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಇದರಿಂದ ಅವರು ಜೀವನದಲ್ಲಿ ಉತ್ತಮ ಮಟ್ಟವನ್ನು ತಲುಪುತ್ತಾರೆ ಎಂದು ತಮ್ಮ ಭಾವೀ ಯೋಜನೆಗಳ ಬಗ್ಗೆ ಪೂಕುಂಞು ಹೇಳಿದ್ದಾರೆ.

Published On - 5:10 pm, Fri, 14 October 22

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ