AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿನ್ನ’ ತಂದ ನೀವಾರ್​ ಚಂಡಮಾರುತ; ಸಮುದ್ರ ತೀರಕ್ಕೆ ಮೀನುಗಾರರು ದೌಡು

ಪೂರ್ವ ಗೋದಾವರಿಯ ಯು ಕೋಠಾಪಲ್ಲಿ ಮಂಡಲ್ ವ್ಯಾಪ್ತಿಯ ಹಳ್ಳಿಯಲ್ಲಿರುವ ಮೀನುಗಾರರಂತೂ ಬೀಚ್​ನಲ್ಲಿ ಬಿದ್ದ ಚಿನ್ನ ಆಯ್ದುಕೊಳ್ಳಲು ತರಾತುರಿಯಿಂದ ಓಡಿದ್ದಾರೆ. ಮುಂಜಾನೆ ಆರುಗಂಟೆಯಿಂದ, ಸಂಜೆಯವರೆಗೂ ಈ ಕಾಯಕ ಮುಂದುವರಿದಿತ್ತು.

‘ಚಿನ್ನ’ ತಂದ ನೀವಾರ್​ ಚಂಡಮಾರುತ; ಸಮುದ್ರ ತೀರಕ್ಕೆ ಮೀನುಗಾರರು ದೌಡು
ಸಮುದ್ರ ತೀರದಲ್ಲಿ ಸಿಕ್ಕ ಹಳದಿ ಬಣ್ಣದ ಮಣಿ...
Lakshmi Hegde
|

Updated on:Nov 30, 2020 | 3:55 PM

Share

ನಿವಾರ್ ಚಂಡಮಾರುತದ ನಂತರ ಜನರು ಸಮುದ್ರತೀರಕ್ಕೆ ಓಡಿದ ಘಟನೆ ಆಂಧ್ರಪ್ರದೇಶದ ಪೂರ್ವಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಸಮುದ್ರದಲ್ಲಿ ಅಲೆಗಳು ಅಬ್ಬರಿಸುತ್ತಿದ್ದರೂ ಲೆಕ್ಕಿಸದೆ ಜನರು ಉಪ್ಪಡಾ ಬೀಚ್​ನಲ್ಲಿ ಚಿನ್ನ ಆಯ್ದುಕೊಳ್ಳಲು ತಾಮುಂದು-ನಾಮುಂದು ಎನ್ನುತ್ತಿದ್ದರು ಎಂದು ವರದಿಯಾಗಿದೆ.

ಬೀಚ್​ನಲ್ಲಿ ಪತ್ತೆಯಾದ ಹಳದಿ ಬಣ್ಣದ (ಚಿನ್ನವನ್ನು ಹೋಲುವ) ಸಣ್ಣ ಮಣಿಯ ಫೋಟೋವನ್ನು ಸ್ಥಳೀಯರೊಬ್ಬರು ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಚಿನ್ನಕ್ಕಾಗಿ 100ಕ್ಕೂ ಹೆಚ್ಚು ಮಂದಿ ಉಪ್ಪಡಾ ಬೀಚ್​ಗೆ ಆಗಮಿಸಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡರು ಎಂದು ತಿಳಿಸಿದ್ದಾರೆ.

ಹೇಗೆ ಸಿಕ್ತು ಈ ಚಿನ್ನ? ಈ ಭಾಗದಲ್ಲಿದ್ದ ಹಲವು ಪುರಾತನ, ಪ್ರಮುಖ ದೇವಸ್ಥಾನಗಳು ಕಾಲಕ್ರಮೇಣ ಸಮುದ್ರದಲ್ಲಿ ಮುಳುಗಿಹೋಗಿ, ಧ್ವಂಸಗೊಂಡಿವೆ. ಇದೀಗ ನಿವಾರ್​ ಚಂಡಮಾರುತದಿಂದ ದೊಡ್ಡದೊಡ್ಡ ಅಲೆಗಳು ಸಾಗರದೊಳಗಿಂದ ಏಳುತ್ತಿವೆ. ಹೀಗಾಗಿ ಸಮುದ್ರದ ಅಡಿಯಲ್ಲಿರಬಹುದಾದ ದೇಗುಲಗಳ ವಿಗ್ರಹದಲ್ಲಿರುವ ಆಭರಣಗಳು ಅಲೆಗಳೊಂದಿಗೆ ತೀರಕ್ಕೆ ಬರುತ್ತಿವೆ ಎಂದು ಸ್ಥಳೀಯರು ಅಂದಾಜಿಸಿದ್ದಾರೆ.

ಮೀನುಗಾರರು ಫುಲ್ ಖುಷ್​ ಪೂರ್ವ ಗೋದಾವರಿಯ ಯು ಕೋಠಾಪಲ್ಲಿ ಮಂಡಲ್ ವ್ಯಾಪ್ತಿಯ ಹಳ್ಳಿಯಲ್ಲಿರುವ ಮೀನುಗಾರರಂತೂ ಬೀಚ್​ನಲ್ಲಿ ಬಿದ್ದ ಚಿನ್ನ ಆಯ್ದುಕೊಳ್ಳಲು ತರಾತುರಿಯಿಂದ ಓಡಿದ್ದಾರೆ. ಮುಂಜಾನೆ ಆರುಗಂಟೆಯಿಂದ, ಸಂಜೆಯವರೆಗೂ ಈ ಕಾಯಕ ಮುಂದುವರಿದಿತ್ತು. ಬಲವಾಗಿ ಗಾಳಿಬೀಸುತ್ತಿದ್ದರೂ ಲೆಕ್ಕಿಸದೆ ಮಹಿಳೆಯರು, ಮಕ್ಕಳು ಬೀಚ್​ನಲ್ಲಿ ಗುಂಪುಗೂಡಿದ್ದರು. ಅನೇಕರಿಗೆ ಹಳದಿ ಬಣ್ಣದ ಮಣಿಗಳು ಸಿಕ್ಕಿವೆ. ಆದರೆ ಅದು ಚಿನ್ನವೇ ಹೌದೋ..ಅಲ್ಲವೋ ಎಂಬುದಿನ್ನೂ ದೃಢವಾಗಿಲ್ಲ.

ಪ್ರತಿ ಚಂಡಮಾರುತವೂ ಚಿನ್ನ ಅಥವಾ ಇನ್ಯಾವುದಾದರೂ ಬೆಲೆಬಾಳುವ ವಸ್ತುಗಳನ್ನು ತೀರಕ್ಕೆ ತರುತ್ತದೆ ಎಂದು ನಂಬುವ ಮೀನುಗಾರರು, ಈ ಬಾರಿ ಚಂಡಮಾರುತದ ಬಳಿಕವೂ ಬೀಚ್​ನಲ್ಲಿ ಹುಡುಕಾಟ ನಡೆಸಿದ್ದರು.

ಇದನ್ನೂ ಓದಿ:  ನಿವಾರ್​ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ ಚಳಿ, ತಮಿಳುನಾಡಿನಲ್ಲಿ 3 ಸಾವು, ಆಂಧ್ರದಲ್ಲಿ ಭಾರಿ ಮಳೆ

Published On - 3:50 pm, Mon, 30 November 20

Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ