AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿನ್ನ’ ತಂದ ನೀವಾರ್​ ಚಂಡಮಾರುತ; ಸಮುದ್ರ ತೀರಕ್ಕೆ ಮೀನುಗಾರರು ದೌಡು

ಪೂರ್ವ ಗೋದಾವರಿಯ ಯು ಕೋಠಾಪಲ್ಲಿ ಮಂಡಲ್ ವ್ಯಾಪ್ತಿಯ ಹಳ್ಳಿಯಲ್ಲಿರುವ ಮೀನುಗಾರರಂತೂ ಬೀಚ್​ನಲ್ಲಿ ಬಿದ್ದ ಚಿನ್ನ ಆಯ್ದುಕೊಳ್ಳಲು ತರಾತುರಿಯಿಂದ ಓಡಿದ್ದಾರೆ. ಮುಂಜಾನೆ ಆರುಗಂಟೆಯಿಂದ, ಸಂಜೆಯವರೆಗೂ ಈ ಕಾಯಕ ಮುಂದುವರಿದಿತ್ತು.

‘ಚಿನ್ನ’ ತಂದ ನೀವಾರ್​ ಚಂಡಮಾರುತ; ಸಮುದ್ರ ತೀರಕ್ಕೆ ಮೀನುಗಾರರು ದೌಡು
ಸಮುದ್ರ ತೀರದಲ್ಲಿ ಸಿಕ್ಕ ಹಳದಿ ಬಣ್ಣದ ಮಣಿ...
Lakshmi Hegde
|

Updated on:Nov 30, 2020 | 3:55 PM

Share

ನಿವಾರ್ ಚಂಡಮಾರುತದ ನಂತರ ಜನರು ಸಮುದ್ರತೀರಕ್ಕೆ ಓಡಿದ ಘಟನೆ ಆಂಧ್ರಪ್ರದೇಶದ ಪೂರ್ವಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಸಮುದ್ರದಲ್ಲಿ ಅಲೆಗಳು ಅಬ್ಬರಿಸುತ್ತಿದ್ದರೂ ಲೆಕ್ಕಿಸದೆ ಜನರು ಉಪ್ಪಡಾ ಬೀಚ್​ನಲ್ಲಿ ಚಿನ್ನ ಆಯ್ದುಕೊಳ್ಳಲು ತಾಮುಂದು-ನಾಮುಂದು ಎನ್ನುತ್ತಿದ್ದರು ಎಂದು ವರದಿಯಾಗಿದೆ.

ಬೀಚ್​ನಲ್ಲಿ ಪತ್ತೆಯಾದ ಹಳದಿ ಬಣ್ಣದ (ಚಿನ್ನವನ್ನು ಹೋಲುವ) ಸಣ್ಣ ಮಣಿಯ ಫೋಟೋವನ್ನು ಸ್ಥಳೀಯರೊಬ್ಬರು ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಚಿನ್ನಕ್ಕಾಗಿ 100ಕ್ಕೂ ಹೆಚ್ಚು ಮಂದಿ ಉಪ್ಪಡಾ ಬೀಚ್​ಗೆ ಆಗಮಿಸಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡರು ಎಂದು ತಿಳಿಸಿದ್ದಾರೆ.

ಹೇಗೆ ಸಿಕ್ತು ಈ ಚಿನ್ನ? ಈ ಭಾಗದಲ್ಲಿದ್ದ ಹಲವು ಪುರಾತನ, ಪ್ರಮುಖ ದೇವಸ್ಥಾನಗಳು ಕಾಲಕ್ರಮೇಣ ಸಮುದ್ರದಲ್ಲಿ ಮುಳುಗಿಹೋಗಿ, ಧ್ವಂಸಗೊಂಡಿವೆ. ಇದೀಗ ನಿವಾರ್​ ಚಂಡಮಾರುತದಿಂದ ದೊಡ್ಡದೊಡ್ಡ ಅಲೆಗಳು ಸಾಗರದೊಳಗಿಂದ ಏಳುತ್ತಿವೆ. ಹೀಗಾಗಿ ಸಮುದ್ರದ ಅಡಿಯಲ್ಲಿರಬಹುದಾದ ದೇಗುಲಗಳ ವಿಗ್ರಹದಲ್ಲಿರುವ ಆಭರಣಗಳು ಅಲೆಗಳೊಂದಿಗೆ ತೀರಕ್ಕೆ ಬರುತ್ತಿವೆ ಎಂದು ಸ್ಥಳೀಯರು ಅಂದಾಜಿಸಿದ್ದಾರೆ.

ಮೀನುಗಾರರು ಫುಲ್ ಖುಷ್​ ಪೂರ್ವ ಗೋದಾವರಿಯ ಯು ಕೋಠಾಪಲ್ಲಿ ಮಂಡಲ್ ವ್ಯಾಪ್ತಿಯ ಹಳ್ಳಿಯಲ್ಲಿರುವ ಮೀನುಗಾರರಂತೂ ಬೀಚ್​ನಲ್ಲಿ ಬಿದ್ದ ಚಿನ್ನ ಆಯ್ದುಕೊಳ್ಳಲು ತರಾತುರಿಯಿಂದ ಓಡಿದ್ದಾರೆ. ಮುಂಜಾನೆ ಆರುಗಂಟೆಯಿಂದ, ಸಂಜೆಯವರೆಗೂ ಈ ಕಾಯಕ ಮುಂದುವರಿದಿತ್ತು. ಬಲವಾಗಿ ಗಾಳಿಬೀಸುತ್ತಿದ್ದರೂ ಲೆಕ್ಕಿಸದೆ ಮಹಿಳೆಯರು, ಮಕ್ಕಳು ಬೀಚ್​ನಲ್ಲಿ ಗುಂಪುಗೂಡಿದ್ದರು. ಅನೇಕರಿಗೆ ಹಳದಿ ಬಣ್ಣದ ಮಣಿಗಳು ಸಿಕ್ಕಿವೆ. ಆದರೆ ಅದು ಚಿನ್ನವೇ ಹೌದೋ..ಅಲ್ಲವೋ ಎಂಬುದಿನ್ನೂ ದೃಢವಾಗಿಲ್ಲ.

ಪ್ರತಿ ಚಂಡಮಾರುತವೂ ಚಿನ್ನ ಅಥವಾ ಇನ್ಯಾವುದಾದರೂ ಬೆಲೆಬಾಳುವ ವಸ್ತುಗಳನ್ನು ತೀರಕ್ಕೆ ತರುತ್ತದೆ ಎಂದು ನಂಬುವ ಮೀನುಗಾರರು, ಈ ಬಾರಿ ಚಂಡಮಾರುತದ ಬಳಿಕವೂ ಬೀಚ್​ನಲ್ಲಿ ಹುಡುಕಾಟ ನಡೆಸಿದ್ದರು.

ಇದನ್ನೂ ಓದಿ:  ನಿವಾರ್​ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ ಚಳಿ, ತಮಿಳುನಾಡಿನಲ್ಲಿ 3 ಸಾವು, ಆಂಧ್ರದಲ್ಲಿ ಭಾರಿ ಮಳೆ

Published On - 3:50 pm, Mon, 30 November 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ