AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಗ್ಯಾಂಗ್‌ಸ್ಟರ್​​ನ್ನು ಹತ್ಯೆಗೈದ ಐವರು ಆರೋಪಿಗಳ ಬಂಧನ

ಪೊಲೀಸರ ಪ್ರಕಾರ, ತನ್ನ ವಿರುದ್ಧ 30 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದ ಥೇಟ್, ಜೂನ್ 2017 ರಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಭೀಕರ ಕ್ರಿಮಿನಲ್ ಆನಂದಪಾಲ್ ಸಿಂಗ್‌ನೊಂದಿಗೆ ಹಗೆ ಹೊಂದಿದ್ದನು

ರಾಜಸ್ಥಾನದ ಗ್ಯಾಂಗ್‌ಸ್ಟರ್​​ನ್ನು ಹತ್ಯೆಗೈದ ಐವರು ಆರೋಪಿಗಳ ಬಂಧನ
ದುಷ್ಕರ್ಮಿಗಳು ಗುಂಡು ಹಾರಿಸುತ್ತಿರುವುದು (ವಿಡಿಯೊ ದೃಶ್ಯ)
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 04, 2022 | 4:41 PM

Share

ಸಿಕರ್: ಒಂದು ದಿನದ ಹಿಂದೆ ರಾಜಸ್ಥಾನದ(Rajasthan) ಸಿಕರ್ ಜಿಲ್ಲೆಯಲ್ಲಿ ಗ್ಯಾಂಗ್‌ಸ್ಟರ್ (Gangster) ರಾಜು ಥೇಟ್ ಮತ್ತು ಮತ್ತೊಬ್ಬ ವ್ಯಕ್ತಿಯನ್ನು ಆತನ ಮನೆಯ ಗೇಟ್‌ನಲ್ಲಿ ಹತ್ಯೆ ಮಾಡಿದ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾನುವಾರ ತಿಳಿಸಿದ್ದಾರೆ.ಪೊಲೀಸರ ಪ್ರಕಾರ ಎನ್‌ಕೌಂಟರ್​​ನಲ್ಲಿ ಇಬ್ಬರು ಗಾಯಗೊಂಡ ನಂತರ ಅವರನ್ನು ಸೆರೆಹಿಡಿಯಲಾಯಿತು. ವಾಂಟೆಡ್ ಗ್ಯಾಂಗ್‌ಸ್ಟರ್ ಥೇಟ್ ಜತೆಗೆ ಅಲ್ಲಿನ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಓದುತ್ತಿರುವ ತನ್ನ ಮಗಳನ್ನು ಭೇಟಿಯಾಗಲು ಹೋಗಿದ್ದ ತಾರಾಚಂದ್ ಕಡ್ವಾಸರ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಗುಂಡು ತಗುಲಿ ಸಾವನ್ನಪ್ಪಿದ್ದಾನೆ. ಆರೋಪಿಗಳು ಥೇಟ್​​ನ ಆಪ್ತ ಎಂದು ಭಾವಿಸಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಆನಂತರ ದುಷ್ಕರ್ಮಿಗಳು ಕಡ್ವಾಸರ ಕಾರಿನ ಕೀ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತನ್ನ ವಿರುದ್ಧ 30 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದ ಥೇಟ್, ಜೂನ್ 2017 ರಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಭೀಕರ ಕ್ರಿಮಿನಲ್ ಆನಂದಪಾಲ್ ಸಿಂಗ್‌ನೊಂದಿಗೆ ಹಗೆ ಹೊಂದಿದ್ದನು. ಜಾಮೀನಿನ ಮೇಲೆ ಅವನು ಐಷಾರಾಮಿ ಜೀವನ ನಡೆಸುತ್ತಿದ್ದು ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಹೊಂದಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಸಿಕರ್ ನಿವಾಸಿಗಳಾದ ಮನೀಶ್ ಜಾಟ್, ವಿಕ್ರಮ್ ಗುರ್ಜರ್ ಮತ್ತು ಹರಿಯಾಣದ ಸತೀಶ್ ಕುಮಾರ್, ಜತಿನ್ ಮೇಘವಾಲ್ ಮತ್ತು ನವೀನ್ ಮೇಘವಾಲ್ ಎಂಬಾತನ್ನನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಉಮೇಶ್ ಮಿಶ್ರಾ ಜೈಪುರದಲ್ಲಿ ತಿಳಿಸಿದ್ದಾರೆ. ಆರೋಪಿಯನ್ನು ಹಿಡಿದ ಪೊಲೀಸ್ ಸಿಬ್ಬಂದಿಗೆ ಬಹುಮಾನ ನೀಡಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಿನ್ನೆಯ ಸಿಕಾರ್‌ನಲ್ಲಿ ನಡೆದ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ಶಸ್ತ್ರಾಸ್ತ್ರಗಳು ಮತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲಾ ಆರೋಪಿಗಳ ತ್ವರಿತ ವಿಚಾರಣೆ ನಡೆಸಿ ನ್ಯಾಯಾಲಯವು ಕಠಿಣ ಶಿಕ್ಷೆಗೆ ಗುರಿಪಡಿಸುತ್ತದೆ ಎಂದಿದ್ದಾರೆ.

ಶನಿವಾರ ಥೇಟ್​​ನ್ನು ಗುಂಡಿಕ್ಕಿ ಕೊಂದ ನಂತರ, ತನ್ನನ್ನು ಫೇಸ್‌ಬುಕ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಪರಿಚಯಿಸಿಕೊಂಡ ರೋಹಿತ್ ಗೋಡಾರಾ ಎಂಬ ವ್ಯಕ್ತಿ, ಇದು ಆನಂದಪಾಲ್ ಸಿಂಗ್ ಮತ್ತು ಬಲ್ಬೀರ್ ಬಾನುಡಾ ಅವರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಮಾಡಿದ್ದು ಎಂದು ಹತ್ಯೆಯ ಹೊಣೆ ಹೊತ್ತಿದ್ದಾನೆ.

ಆನಂದ್‌ಪಾಲ್ ಗ್ಯಾಂಗ್‌ನ ಸದಸ್ಯ ಬಾನುಡಾ ಜುಲೈ 2014 ರಲ್ಲಿ ಬಿಕಾನೇರ್ ಜೈಲಿನಲ್ಲಿ ನಡೆದ ಗ್ಯಾಂಗ್ ವಾರ್‌ನಲ್ಲಿ ಹತ್ಯೆಯಾಗಿದ್ದ. ಈ ಕೊಲೆಯ ಹಿಂದೆ ಥೇಟ್​​ನ ಕೈವಾಡವಿದೆ ಎಂದು ಆರೋಪಿಸಲಾಗಿದೆ. ಅಂದ ಹಾಗೆ ಈ ಫೇಸ್​​ಬುಕ್ ಪೋಸ್ಟ್ ಈಗ ಡಿಲೀಟ್ ಆಗಿದೆ ಆದಾಗ್ಯೂ, ಗೋದಾರಾ ರಾತ್ರಿ ಫೇಸ್‌ಬುಕ್‌ನಲ್ಲಿ ಮತ್ತೊಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದು ಥೇಟ್ ತನ್ನ ಶತ್ರು ಎಂದು ಹೇಳಿದ್ದಾನೆ. ಅವನ ಹತ್ಯೆಗೆ ಯಾವುದೇ ವಿಷಾದವಿಲ್ಲ ಆದರೆ ನಾಗೌರ್ ಜಿಲ್ಲೆಯ ರೈತ ಕಡ್ವಾಸರ ಕುಟುಂಬ ಮತ್ತು ಅವನ ಸಮುದಾಯದವರ ಕ್ಷಮೆಯಾಚಿಸುತ್ತಿದ್ದೇನೆ ಎಂದು ಹೇಳಿದ್ದಾನೆ.ಕಡ್ವಾಸರ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಲು ಪ್ರಯತ್ನಿಸುವುದಾಗಿ ಆತ ಹೇಳಿದ್ದಾನೆ.

ಘಟನೆಯ ಸಿಸಿಟಿವಿ ದೃಶ್ಯ ನೋಡಿದರೆ ಐವರು ಥೇಟ್ ಮನೆಯ ಗೇಟ್‌ನಲ್ಲಿದ್ದುದನ್ನು ತೋರಿಸಿದೆ. ಟ್ರಾಕ್ಟರ್-ಟ್ರಾಲಿಯು ಮನೆಯ ಮುಂಭಾಗದವರೆಗೆ ಚಲಿಸಿ ದುಷ್ಕರ್ಮಿಗಳು ಥೇಟ್ ಮೇಲೆ ಗುಂಡು ಹಾರಿಸಿದರು. ಈ ಕೃತ್ಯದಲ್ಲಿ ಟ್ರ್ಯಾಕ್ಟರ್ ಚಾಲಕನೂ ಭಾಗಿಯಾಗಿರುವ ಶಂಕೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಮತ್ತೊಂದು ವಿಡಿಯೊದಲ್ಲಿ ಆರೋಪಿಗಳು ಥೇಟ್ ನ್ನು ಕೊಂದು ಪರಾರಿಯಾಗುತ್ತಿರುವುದು ಕಂಡುಬಂದಿದೆ.

ಕೊಲೆಯಾದ ಕೆಲವೇ ಗಂಟೆಗಳ ನಂತರ ಆರೋಪಿಯದ್ದೆಂದು ನಂಬಲಾದ ವೇಗದ ಕಾರನ್ನು ಜುಂಜುನು ಜಿಲ್ಲೆಯಲ್ಲಿ ಕೆಲವು ಸ್ಥಳೀಯರು ಗುರುತಿಸಿದ್ದಾರೆ.ದಾರಿಯನ್ನು ತೆರವುಗೊಳಿಸಲು ರಸ್ತೆಯನ್ನು ದುರಸ್ತಿ ಮಾಡುತ್ತಿದ್ದ ಕೆಲವು ಕಾರ್ಮಿಕರ ಮೇಲೆ ನಿವಾಸಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ಥೇಟ್ ಮತ್ತು ಕಡ್ವಾಸರ ಕುಟುಂಬಸ್ಥರು ಮತ್ತು ಸಂಬಂಧಿಕರು ಶನಿವಾರ ಸಿಕಾರ್‌ನಲ್ಲಿರುವ ಜಿಲ್ಲಾ ಆಸ್ಪತ್ರೆಯ ಶವಾಗಾರದ ಎದುರು ಧರಣಿ ಕುಳಿತರು. ನಾಗೌರ್‌ನ ಲಾಡ್ನುವಿನ ಕಾಂಗ್ರೆಸ್ ಶಾಸಕ ಮುಖೇಶ್ ಭಾಕರ್ ಕೂಡ ಧರಣಿಯಲ್ಲಿ ಉಪಸ್ಥಿತರಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ