AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತ: 5 ಸಾವು, ಬೆಂಗಳೂರಿನ ವಂಡರ್ ​ಲಾಗೆ ಬರುತ್ತಿದ್ದವರು ಸೇರಿದ್ದು ಮಸಣ

ಬೆಳಿಗ್ಗೆ 4 ಗಂಟೆ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರು ಈರೋಡ್ ಜಿಲ್ಲೆಯ ಭವಾನಿಯಿಂದ ಬೆಂಗಳೂರಿನ ವಂಡರ್ ​ಲಾಗೆ ಹೊರಟಿದ್ದರು. ಈ ವೇಳೆ ಪ್ಯಾಸೆಂಜರ್ ಇಳಿಸಲು ನಿಲ್ಲಿಸಿದ್ದ ಬಸ್ಸಿಗೆ ಪ್ರವಾಸಕ್ಕೆ ತೆರಳುತ್ತಿದ್ದ ಸ್ನೇಹಿತರ ಓಮ್ನಿ ಕಾರು ಡಿಕ್ಕಿ ಹೊಡೆದಿದೆ.

ಭೀಕರ ಅಪಘಾತ: 5 ಸಾವು, ಬೆಂಗಳೂರಿನ ವಂಡರ್ ​ಲಾಗೆ ಬರುತ್ತಿದ್ದವರು ಸೇರಿದ್ದು ಮಸಣ
ಅಪಘಾತದಲ್ಲಿ ನಜ್ಜುಗುಜ್ಜಾದ ಓಮ್ನಿ ಕಾರು
ಪೃಥ್ವಿಶಂಕರ
|

Updated on:Feb 01, 2021 | 12:51 PM

Share

ಬೆಂಗಳೂರು: ತಮಿಳುನಾಡಿನ ಈರೋಡ್​ ಜಿಲ್ಲೆಯ ಕಾವೇರಿಪಟ್ಟಣಂ ಬಳಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಿಗ್ಗೆ 4 ಗಂಟೆ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರು ಈರೋಡ್ ಜಿಲ್ಲೆಯ ಭವಾನಿಯಿಂದ ಬೆಂಗಳೂರಿನ ವಂಡರ್ ​ಲಾಗೆ ಹೊರಟಿದ್ದರು. ಈ ವೇಳೆ ರಸ್ತೆಯಲ್ಲಿ ನಿಲ್ಲಿಸಿದ್ದ ಬಸ್ಸಿಗೆ, ಪ್ರವಾಸಕ್ಕೆ ತೆರಳುತ್ತಿದ್ದ ಸ್ನೇಹಿತರ ಓಮ್ನಿ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ಸಿನಿಂದ ಇಳಿಯುತ್ತಿದ್ದ ಪ್ಯಾಸೆಂಜರ್ ಹಾಗೂ ಓಮ್ನಿಯಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವ್ಯಕ್ತಿಯೊಬ್ಬರು ರಸ್ತೆ ದಾಟಲು ಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ.. ಓಮ್ನಿಯಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಎಂಬುವರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್, ಓಮ್ನಿ ಚಾಲಕ ಹಾಗೂ ಬಸ್ ಪ್ಯಾಸೆಂಜರ್ ದೇವರಾಜು ಮೃತ ದುರ್ದೈವಿಗಳಾಗಿದ್ದಾರೆ. ವ್ಯಕ್ತಿಯೊಬ್ಬರು ರಸ್ತೆ ದಾಟಲು ಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ.

ರಸ್ತೆ ದಾಟುತ್ತಿದ್ದ ವ್ಯಕ್ತಿ ಎದುರಾದಾಗ ಬಸ್ಸಿನ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಹಿಂದಿನಿಂದ ಬಂದ ಓಮ್ನಿ, ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದು ಬಸ್ಸ್​ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಓಮ್ನಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಡುಕ ಡ್ರೈವರ್​ನ ಅವಾಂತರ: ಪಿಕಪ್ ವಾಹನ ಪಲ್ಟಿ, 9 ಜನರ ಸಾವು

Published On - 12:28 pm, Mon, 1 February 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ