AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತ: 5 ಸಾವು, ಬೆಂಗಳೂರಿನ ವಂಡರ್ ​ಲಾಗೆ ಬರುತ್ತಿದ್ದವರು ಸೇರಿದ್ದು ಮಸಣ

ಬೆಳಿಗ್ಗೆ 4 ಗಂಟೆ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರು ಈರೋಡ್ ಜಿಲ್ಲೆಯ ಭವಾನಿಯಿಂದ ಬೆಂಗಳೂರಿನ ವಂಡರ್ ​ಲಾಗೆ ಹೊರಟಿದ್ದರು. ಈ ವೇಳೆ ಪ್ಯಾಸೆಂಜರ್ ಇಳಿಸಲು ನಿಲ್ಲಿಸಿದ್ದ ಬಸ್ಸಿಗೆ ಪ್ರವಾಸಕ್ಕೆ ತೆರಳುತ್ತಿದ್ದ ಸ್ನೇಹಿತರ ಓಮ್ನಿ ಕಾರು ಡಿಕ್ಕಿ ಹೊಡೆದಿದೆ.

ಭೀಕರ ಅಪಘಾತ: 5 ಸಾವು, ಬೆಂಗಳೂರಿನ ವಂಡರ್ ​ಲಾಗೆ ಬರುತ್ತಿದ್ದವರು ಸೇರಿದ್ದು ಮಸಣ
ಅಪಘಾತದಲ್ಲಿ ನಜ್ಜುಗುಜ್ಜಾದ ಓಮ್ನಿ ಕಾರು
ಪೃಥ್ವಿಶಂಕರ
|

Updated on:Feb 01, 2021 | 12:51 PM

Share

ಬೆಂಗಳೂರು: ತಮಿಳುನಾಡಿನ ಈರೋಡ್​ ಜಿಲ್ಲೆಯ ಕಾವೇರಿಪಟ್ಟಣಂ ಬಳಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಿಗ್ಗೆ 4 ಗಂಟೆ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರು ಈರೋಡ್ ಜಿಲ್ಲೆಯ ಭವಾನಿಯಿಂದ ಬೆಂಗಳೂರಿನ ವಂಡರ್ ​ಲಾಗೆ ಹೊರಟಿದ್ದರು. ಈ ವೇಳೆ ರಸ್ತೆಯಲ್ಲಿ ನಿಲ್ಲಿಸಿದ್ದ ಬಸ್ಸಿಗೆ, ಪ್ರವಾಸಕ್ಕೆ ತೆರಳುತ್ತಿದ್ದ ಸ್ನೇಹಿತರ ಓಮ್ನಿ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ಸಿನಿಂದ ಇಳಿಯುತ್ತಿದ್ದ ಪ್ಯಾಸೆಂಜರ್ ಹಾಗೂ ಓಮ್ನಿಯಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವ್ಯಕ್ತಿಯೊಬ್ಬರು ರಸ್ತೆ ದಾಟಲು ಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ.. ಓಮ್ನಿಯಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಎಂಬುವರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್, ಓಮ್ನಿ ಚಾಲಕ ಹಾಗೂ ಬಸ್ ಪ್ಯಾಸೆಂಜರ್ ದೇವರಾಜು ಮೃತ ದುರ್ದೈವಿಗಳಾಗಿದ್ದಾರೆ. ವ್ಯಕ್ತಿಯೊಬ್ಬರು ರಸ್ತೆ ದಾಟಲು ಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ.

ರಸ್ತೆ ದಾಟುತ್ತಿದ್ದ ವ್ಯಕ್ತಿ ಎದುರಾದಾಗ ಬಸ್ಸಿನ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಹಿಂದಿನಿಂದ ಬಂದ ಓಮ್ನಿ, ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದು ಬಸ್ಸ್​ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಓಮ್ನಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಡುಕ ಡ್ರೈವರ್​ನ ಅವಾಂತರ: ಪಿಕಪ್ ವಾಹನ ಪಲ್ಟಿ, 9 ಜನರ ಸಾವು

Published On - 12:28 pm, Mon, 1 February 21

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!