Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಂಡ್ ಜಿಹಾದ್​ಗೆ ಬಗ್ಗದ ಕಾಸರಗೋಡಿನ ದಂತ ವೈದ್ಯನನ್ನು ಯುವತಿ ಮುಂದಿಟ್ಟು ಬ್ಲ್ಯಾಕ್ ಮೇಲ್, ಮುಸ್ಲಿಂ ಲೀಗ್ ಮುಖಂಡ ಸೇರಿ ಐವರು ವಶಕ್ಕೆ

ಯುವತಿ ಮುಂದಿಟ್ಟು ಲಕ್ಷ ಲಕ್ಷ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಲಾಗಿದೆ ಎನ್ನಲಾಗುತ್ತಿದೆ. ಲ್ಯಾಂಡ್ ಜಿಹಾದ್ ಗೆ ಬಗ್ಗದ ದಂತ ವೈದ್ಯನಿಗೆ ಯುವತಿ ಮುಂದಿಟ್ಟು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಮುಸ್ಲಿಂ ಲೀಗ್ ಮುಖಂಡ ಸೇರಿ ಐವರನ್ನು ಬದಿಯಡ್ಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲ್ಯಾಂಡ್ ಜಿಹಾದ್​ಗೆ ಬಗ್ಗದ ಕಾಸರಗೋಡಿನ ದಂತ ವೈದ್ಯನನ್ನು ಯುವತಿ ಮುಂದಿಟ್ಟು ಬ್ಲ್ಯಾಕ್ ಮೇಲ್, ಮುಸ್ಲಿಂ ಲೀಗ್ ಮುಖಂಡ ಸೇರಿ ಐವರು ವಶಕ್ಕೆ
ಬದಿಯಡ್ಕ ಪೊಲೀಸ್ ಠಾಣೆ
Follow us
TV9 Web
| Updated By: ಆಯೇಷಾ ಬಾನು

Updated on: Nov 12, 2022 | 9:55 AM

ಕಾಸರಗೋಡು: ಕೇರಳದ ಕಾಸರಗೋಡಿನ ವೈದ್ಯನ ಸಾವಿನ ಹಿಂದೆ ಲ್ಯಾಂಡ್ ಜಿಹಾದ್, ಬ್ಲ್ಯಾಕ್ ಮೇಲ್ ಸದ್ದು ಕೇಳಿ ಬರುತ್ತಿದೆ. ಹೀಗಾಗಿ ಮುಸ್ಲಿಂ ಲ್ಯಾಂಡ್ ಜಿಹಾದ್​ಗೆ ಗಡಿನಾಡ ದಂತ ವೈದ್ಯ ಬಲಿಯಾದ್ರಾ ಎಂಬ ಪ್ರಶ್ನೆ ಎಂದ್ದಿದೆ. ಪ್ರಖ್ಯಾತ ದಂತ ವೈದ್ಯನ ಸಾವಿನ ಬಗ್ಗೆ ವಿಹೆಚ್​ಪಿ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಕೇಸ್​ ಸಂಬಂಧ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ‌ಗಡಿ ಭಾಗದ ಕೇರಳದ ಕಾಸರಗೋಡು ‌ಜಿಲ್ಲೆಯ ಬದಿಯಡ್ಕದಲ್ಲಿ ಕಳೆದ 30 ವರ್ಷಗಳಿಂದ ದಂತ ವೈದ್ಯರಾಗಿದ್ದ ಡಾ.ಕೃಷ್ಣಮೂರ್ತಿ ಅವರು ನವೆಂಬರ್ 8 ರಂದು ನಾಪತ್ತೆಯಾಗಿದ್ದರು. ಬಳಿಕ ನ.10ರಂದು ಉಡುಪಿ ಜಿಲ್ಲೆ ಕುಂದಾಪುರದ ಹಟ್ಟಿಯಂಗಡಿ ಬಳಿಯ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ರು. ಕಳೆದ ಆರು ತಿಂಗಳಿನಿಂದ ಜಾಗದ ವಿಚಾರದಲ್ಲಿ ಡಾ.ಕೃಷ್ಣಮೂರ್ತಿ ಅವರು ಲ್ಯಾಂಡ್ ಮಾಫಿಯಾದಲ್ಲಿ ಸಿಲುಕಿಕೊಂಡಿದ್ದರು. ಜಾಗ ಖರೀದಿ ವಿಚಾರದಲ್ಲಿ ಡಾ.ಕೃಷ್ಣಮೂರ್ತಿಗೆ ಸ್ಥಳೀಯ ಕೆಲ ಮುಸ್ಲಿಮರು ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಡಾ.ಕೃಷ್ಣಮೂರ್ತಿ, ನ.8ರಂದು ಬದಿಯಡ್ಕದ ಕ್ಲಿನಿಕ್ ಗೆ ಬಂದಿದ್ದರು. ಈ ವೇಳೆ ಕ್ಲಿನಿಕ್ ಗೆ ಬಂದಿದ್ದ ಮುಸ್ಲಿಂ ಯುವತಿ ಜೊತೆ ಅನುಚಿತ ವರ್ತನೆ ಮಾಡಿರುವ ಆರೋಪ ಕೇಳಿ ಬಂದಿದ್ದು ತಂಡವೊಂದು ಕೃಷ್ಣಮೂರ್ತಿಗೆ ಬೆದರಿಕೆ ಒಡ್ಡಿ ಹಲ್ಲೆಗೆ ಮುಂದಾಗಿದೆ. ಆ ಘಟನೆ ‌ಬಳಿಕ ಡಾ.ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಸದ್ಯ ಈಗ ಮುಸ್ಲಿಂ ಯುವತಿ ಮೂಲಕ ವೈದ್ಯರನ್ನ ಬ್ಲಾಕ್ ಮೇಲ್ ಮಾಡಿದ್ರಾ? ಬ್ಲ್ಯಾಕ್ ಮೇಲ್ ಗೆ ಬೆದರಿ ಡಾ.ಕೃಷ್ಣಮೂರ್ತಿ ಆತ್ಮಹತ್ಯೆ ಮಾಡಿಕೊಂಡರಾ? ಎಂಬ ಮಾತು ಕೇಳಿ ಬಂದಿದೆ. ಯುವತಿ ಮುಂದಿಟ್ಟು ಲಕ್ಷ ಲಕ್ಷ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಲಾಗಿದೆ ಎನ್ನಲಾಗುತ್ತಿದೆ. ಲ್ಯಾಂಡ್ ಜಿಹಾದ್ ಗೆ ಬಗ್ಗದ ದಂತ ವೈದ್ಯನಿಗೆ ಯುವತಿ ಮುಂದಿಟ್ಟು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಮುಸ್ಲಿಂ ಲೀಗ್ ಮುಖಂಡ ಸೇರಿ ಐವರನ್ನು ಬದಿಯಡ್ಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಡಿಕೆ ವ್ಯಾಪಾರಿ ಹಾಗೂ ಮುಸ್ಲಿಂ ಲೀಗ್ ಕುಂಬ್ಡಾಜೆ ಪಂಚಾಯತ್ ಕಾರ್ಯದರ್ಶಿ ಅಲಿ ತುಪ್ಪಕಲ್ಲು, ಮುಸ್ಲಿಂ ಲೀಗ್ ಬದಿಯಡ್ಕ ಪಂಚಾಯತ್ ಪದಾಧಿಕಾರಿ ಮುಹಮ್ಮದ್ ಹನೀಫ ಯಾನೆ ಅನ್ವರ್, ಕುಂಬ್ಡಾಜೆ ನಿವಾಸಿ ಅಶ್ರಫ್, ಅನ್ನಡ್ಕ ನಿವಾಸಿ ಮುಹಮ್ಮದ್ ಶಿಯಾಬುದ್ದೀನ್, ವಿದ್ಯಾಗಿರಿ ನಿವಾಸಿ ಉಮರುಲ್ ಫಾರೂಕ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್