AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 22, 2021 | 9:00 AM

Share

ಶ್ರೀರಾಮಜನ್ಮಭೂಮಿ ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ರಾಮಮಂದಿರದ ದೇಣಿಗೆ ಹೆಸರಲ್ಲಿ ಜನರಿಂದ ಲಕ್ಷಾಂತರ ರೂಪಾಯಿ ಪಡೆಯುತ್ತಿದ್ದ ಐವರನ್ನು ಸೋಮವಾರ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ನೊಯ್ಡಾದ ಸೈಬರ್​ ಠಾಣೆ ಮತ್ತು ಲಖನೌ ಸೈಬರ್​ ಕ್ರೈಂ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮಂದಿರ ನಿರ್ಮಾಣ ಕಾರ್ಯ ಪ್ರಾರಂಭವಾದ ಬೆನ್ನಲ್ಲೇ ದೇಶಾದ್ಯಂತ ದೇಣಿಗೆ ಸಂಗ್ರಹವೂ ನಡೆಯುತ್ತಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಅಧಿಕೃತವಾಗಿಯೇ ದೇಣಿಗೆ ಸಂಗ್ರಹ ಮಾಡುತ್ತಿದೆ. ಅದನ್ನೇ ಬಂಡವಾಳವಾಗಿಸಿಕೊಂಡ ಈ ಆರೋಪಿಗಳು ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ಅಕ್ರಮವಾಗಿ ಹಣ ಸಂಗ್ರಹ ಮಾಡುತ್ತಿದ್ದರು. ವೆಬ್​​ಸೈಟ್​​ನಲ್ಲಿ ಬ್ಯಾಂಕ್​ ಅಕೌಂಟ್​ ನಂಬರ್​ ಕೂಡ ಹಾಕಿದ್ದರು. ಅದು ನಿಜವಾದ ವೆಬ್​​ಸೈಟ್​ ಎಂದೇ ನಂಬಿದ ಅನೇಕರು ಅಕೌಂಟ್​​ಗೆ ಹಣ ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು. ಇವರೆಲ್ಲರೂ ದೆಹಲಿಯ ನ್ಯೂ ಅಶೋಕ ನಗರದಲ್ಲಿ ವಾಸವಾಗಿದ್ದರು ಎಂದೂ ಹೇಳಿದ್ದಾರೆ. ಆರೋಪಿಗಳ ಬಳಿಯಿದ್ದ ಮೊಬೈಲ್​, ಲ್ಯಾಪ್​ಟಾಪ್​, 50 ಫೋಟೋ ಕಾಪಿಗಳು, ಆಧಾರ್​ ಕಾರ್ಡ್​ ಸೇರಿ ಮಹತ್ವದ ವಸ್ತುಗಳನ್ನೆಲ್ಲ ಪೊಲೀಸರು ವಶಪಡಿಸಿದ್ದಾರೆ.

ಇದನ್ನೂ ಓದಿ: ಹಾವೇರಿ ಮೂಲದ ನಿರ್ದೇಶಕನಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದ ಅತ್ಯುತ್ತಮ ಚಿತ್ರ 2021 ಪ್ರಶಸ್ತಿ (Five men were arrested for created illegal website in the name of the Ram Janmabhoomi Trust)

Published On - 8:59 am, Tue, 22 June 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ