AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on:Jun 22, 2021 | 9:00 AM

Share

ಶ್ರೀರಾಮಜನ್ಮಭೂಮಿ ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ರಾಮಮಂದಿರದ ದೇಣಿಗೆ ಹೆಸರಲ್ಲಿ ಜನರಿಂದ ಲಕ್ಷಾಂತರ ರೂಪಾಯಿ ಪಡೆಯುತ್ತಿದ್ದ ಐವರನ್ನು ಸೋಮವಾರ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ನೊಯ್ಡಾದ ಸೈಬರ್​ ಠಾಣೆ ಮತ್ತು ಲಖನೌ ಸೈಬರ್​ ಕ್ರೈಂ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮಂದಿರ ನಿರ್ಮಾಣ ಕಾರ್ಯ ಪ್ರಾರಂಭವಾದ ಬೆನ್ನಲ್ಲೇ ದೇಶಾದ್ಯಂತ ದೇಣಿಗೆ ಸಂಗ್ರಹವೂ ನಡೆಯುತ್ತಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಅಧಿಕೃತವಾಗಿಯೇ ದೇಣಿಗೆ ಸಂಗ್ರಹ ಮಾಡುತ್ತಿದೆ. ಅದನ್ನೇ ಬಂಡವಾಳವಾಗಿಸಿಕೊಂಡ ಈ ಆರೋಪಿಗಳು ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ಅಕ್ರಮವಾಗಿ ಹಣ ಸಂಗ್ರಹ ಮಾಡುತ್ತಿದ್ದರು. ವೆಬ್​​ಸೈಟ್​​ನಲ್ಲಿ ಬ್ಯಾಂಕ್​ ಅಕೌಂಟ್​ ನಂಬರ್​ ಕೂಡ ಹಾಕಿದ್ದರು. ಅದು ನಿಜವಾದ ವೆಬ್​​ಸೈಟ್​ ಎಂದೇ ನಂಬಿದ ಅನೇಕರು ಅಕೌಂಟ್​​ಗೆ ಹಣ ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು. ಇವರೆಲ್ಲರೂ ದೆಹಲಿಯ ನ್ಯೂ ಅಶೋಕ ನಗರದಲ್ಲಿ ವಾಸವಾಗಿದ್ದರು ಎಂದೂ ಹೇಳಿದ್ದಾರೆ. ಆರೋಪಿಗಳ ಬಳಿಯಿದ್ದ ಮೊಬೈಲ್​, ಲ್ಯಾಪ್​ಟಾಪ್​, 50 ಫೋಟೋ ಕಾಪಿಗಳು, ಆಧಾರ್​ ಕಾರ್ಡ್​ ಸೇರಿ ಮಹತ್ವದ ವಸ್ತುಗಳನ್ನೆಲ್ಲ ಪೊಲೀಸರು ವಶಪಡಿಸಿದ್ದಾರೆ.

ಇದನ್ನೂ ಓದಿ: ಹಾವೇರಿ ಮೂಲದ ನಿರ್ದೇಶಕನಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದ ಅತ್ಯುತ್ತಮ ಚಿತ್ರ 2021 ಪ್ರಶಸ್ತಿ (Five men were arrested for created illegal website in the name of the Ram Janmabhoomi Trust)

Published On - 8:59 am, Tue, 22 June 21

Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ