AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 22, 2021 | 9:00 AM

Share

ಶ್ರೀರಾಮಜನ್ಮಭೂಮಿ ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ರಾಮಮಂದಿರದ ದೇಣಿಗೆ ಹೆಸರಲ್ಲಿ ಜನರಿಂದ ಲಕ್ಷಾಂತರ ರೂಪಾಯಿ ಪಡೆಯುತ್ತಿದ್ದ ಐವರನ್ನು ಸೋಮವಾರ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ನೊಯ್ಡಾದ ಸೈಬರ್​ ಠಾಣೆ ಮತ್ತು ಲಖನೌ ಸೈಬರ್​ ಕ್ರೈಂ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮಂದಿರ ನಿರ್ಮಾಣ ಕಾರ್ಯ ಪ್ರಾರಂಭವಾದ ಬೆನ್ನಲ್ಲೇ ದೇಶಾದ್ಯಂತ ದೇಣಿಗೆ ಸಂಗ್ರಹವೂ ನಡೆಯುತ್ತಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಅಧಿಕೃತವಾಗಿಯೇ ದೇಣಿಗೆ ಸಂಗ್ರಹ ಮಾಡುತ್ತಿದೆ. ಅದನ್ನೇ ಬಂಡವಾಳವಾಗಿಸಿಕೊಂಡ ಈ ಆರೋಪಿಗಳು ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ಅಕ್ರಮವಾಗಿ ಹಣ ಸಂಗ್ರಹ ಮಾಡುತ್ತಿದ್ದರು. ವೆಬ್​​ಸೈಟ್​​ನಲ್ಲಿ ಬ್ಯಾಂಕ್​ ಅಕೌಂಟ್​ ನಂಬರ್​ ಕೂಡ ಹಾಕಿದ್ದರು. ಅದು ನಿಜವಾದ ವೆಬ್​​ಸೈಟ್​ ಎಂದೇ ನಂಬಿದ ಅನೇಕರು ಅಕೌಂಟ್​​ಗೆ ಹಣ ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು. ಇವರೆಲ್ಲರೂ ದೆಹಲಿಯ ನ್ಯೂ ಅಶೋಕ ನಗರದಲ್ಲಿ ವಾಸವಾಗಿದ್ದರು ಎಂದೂ ಹೇಳಿದ್ದಾರೆ. ಆರೋಪಿಗಳ ಬಳಿಯಿದ್ದ ಮೊಬೈಲ್​, ಲ್ಯಾಪ್​ಟಾಪ್​, 50 ಫೋಟೋ ಕಾಪಿಗಳು, ಆಧಾರ್​ ಕಾರ್ಡ್​ ಸೇರಿ ಮಹತ್ವದ ವಸ್ತುಗಳನ್ನೆಲ್ಲ ಪೊಲೀಸರು ವಶಪಡಿಸಿದ್ದಾರೆ.

ಇದನ್ನೂ ಓದಿ: ಹಾವೇರಿ ಮೂಲದ ನಿರ್ದೇಶಕನಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದ ಅತ್ಯುತ್ತಮ ಚಿತ್ರ 2021 ಪ್ರಶಸ್ತಿ (Five men were arrested for created illegal website in the name of the Ram Janmabhoomi Trust)

Published On - 8:59 am, Tue, 22 June 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು