AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jun 22, 2021 | 9:00 AM

ಶ್ರೀರಾಮಜನ್ಮಭೂಮಿ ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ರಾಮಮಂದಿರದ ದೇಣಿಗೆ ಹೆಸರಲ್ಲಿ ಜನರಿಂದ ಲಕ್ಷಾಂತರ ರೂಪಾಯಿ ಪಡೆಯುತ್ತಿದ್ದ ಐವರನ್ನು ಸೋಮವಾರ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ನೊಯ್ಡಾದ ಸೈಬರ್​ ಠಾಣೆ ಮತ್ತು ಲಖನೌ ಸೈಬರ್​ ಕ್ರೈಂ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮಂದಿರ ನಿರ್ಮಾಣ ಕಾರ್ಯ ಪ್ರಾರಂಭವಾದ ಬೆನ್ನಲ್ಲೇ ದೇಶಾದ್ಯಂತ ದೇಣಿಗೆ ಸಂಗ್ರಹವೂ ನಡೆಯುತ್ತಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಅಧಿಕೃತವಾಗಿಯೇ ದೇಣಿಗೆ ಸಂಗ್ರಹ ಮಾಡುತ್ತಿದೆ. ಅದನ್ನೇ ಬಂಡವಾಳವಾಗಿಸಿಕೊಂಡ ಈ ಆರೋಪಿಗಳು ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ಅಕ್ರಮವಾಗಿ ಹಣ ಸಂಗ್ರಹ ಮಾಡುತ್ತಿದ್ದರು. ವೆಬ್​​ಸೈಟ್​​ನಲ್ಲಿ ಬ್ಯಾಂಕ್​ ಅಕೌಂಟ್​ ನಂಬರ್​ ಕೂಡ ಹಾಕಿದ್ದರು. ಅದು ನಿಜವಾದ ವೆಬ್​​ಸೈಟ್​ ಎಂದೇ ನಂಬಿದ ಅನೇಕರು ಅಕೌಂಟ್​​ಗೆ ಹಣ ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು. ಇವರೆಲ್ಲರೂ ದೆಹಲಿಯ ನ್ಯೂ ಅಶೋಕ ನಗರದಲ್ಲಿ ವಾಸವಾಗಿದ್ದರು ಎಂದೂ ಹೇಳಿದ್ದಾರೆ. ಆರೋಪಿಗಳ ಬಳಿಯಿದ್ದ ಮೊಬೈಲ್​, ಲ್ಯಾಪ್​ಟಾಪ್​, 50 ಫೋಟೋ ಕಾಪಿಗಳು, ಆಧಾರ್​ ಕಾರ್ಡ್​ ಸೇರಿ ಮಹತ್ವದ ವಸ್ತುಗಳನ್ನೆಲ್ಲ ಪೊಲೀಸರು ವಶಪಡಿಸಿದ್ದಾರೆ.

ಇದನ್ನೂ ಓದಿ: ಹಾವೇರಿ ಮೂಲದ ನಿರ್ದೇಶಕನಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದ ಅತ್ಯುತ್ತಮ ಚಿತ್ರ 2021 ಪ್ರಶಸ್ತಿ (Five men were arrested for created illegal website in the name of the Ram Janmabhoomi Trust)

Published On - 8:59 am, Tue, 22 June 21

ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ