AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 22, 2021 | 9:00 AM

Share

ಶ್ರೀರಾಮಜನ್ಮಭೂಮಿ ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ರಾಮಮಂದಿರದ ದೇಣಿಗೆ ಹೆಸರಲ್ಲಿ ಜನರಿಂದ ಲಕ್ಷಾಂತರ ರೂಪಾಯಿ ಪಡೆಯುತ್ತಿದ್ದ ಐವರನ್ನು ಸೋಮವಾರ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ನೊಯ್ಡಾದ ಸೈಬರ್​ ಠಾಣೆ ಮತ್ತು ಲಖನೌ ಸೈಬರ್​ ಕ್ರೈಂ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮಂದಿರ ನಿರ್ಮಾಣ ಕಾರ್ಯ ಪ್ರಾರಂಭವಾದ ಬೆನ್ನಲ್ಲೇ ದೇಶಾದ್ಯಂತ ದೇಣಿಗೆ ಸಂಗ್ರಹವೂ ನಡೆಯುತ್ತಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಅಧಿಕೃತವಾಗಿಯೇ ದೇಣಿಗೆ ಸಂಗ್ರಹ ಮಾಡುತ್ತಿದೆ. ಅದನ್ನೇ ಬಂಡವಾಳವಾಗಿಸಿಕೊಂಡ ಈ ಆರೋಪಿಗಳು ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ಅಕ್ರಮವಾಗಿ ಹಣ ಸಂಗ್ರಹ ಮಾಡುತ್ತಿದ್ದರು. ವೆಬ್​​ಸೈಟ್​​ನಲ್ಲಿ ಬ್ಯಾಂಕ್​ ಅಕೌಂಟ್​ ನಂಬರ್​ ಕೂಡ ಹಾಕಿದ್ದರು. ಅದು ನಿಜವಾದ ವೆಬ್​​ಸೈಟ್​ ಎಂದೇ ನಂಬಿದ ಅನೇಕರು ಅಕೌಂಟ್​​ಗೆ ಹಣ ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು. ಇವರೆಲ್ಲರೂ ದೆಹಲಿಯ ನ್ಯೂ ಅಶೋಕ ನಗರದಲ್ಲಿ ವಾಸವಾಗಿದ್ದರು ಎಂದೂ ಹೇಳಿದ್ದಾರೆ. ಆರೋಪಿಗಳ ಬಳಿಯಿದ್ದ ಮೊಬೈಲ್​, ಲ್ಯಾಪ್​ಟಾಪ್​, 50 ಫೋಟೋ ಕಾಪಿಗಳು, ಆಧಾರ್​ ಕಾರ್ಡ್​ ಸೇರಿ ಮಹತ್ವದ ವಸ್ತುಗಳನ್ನೆಲ್ಲ ಪೊಲೀಸರು ವಶಪಡಿಸಿದ್ದಾರೆ.

ಇದನ್ನೂ ಓದಿ: ಹಾವೇರಿ ಮೂಲದ ನಿರ್ದೇಶಕನಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದ ಅತ್ಯುತ್ತಮ ಚಿತ್ರ 2021 ಪ್ರಶಸ್ತಿ (Five men were arrested for created illegal website in the name of the Ram Janmabhoomi Trust)

Published On - 8:59 am, Tue, 22 June 21

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!