AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು.

ಶ್ರೀರಾಮಮಂದಿರದ ಹೆಸರಲ್ಲಿ ವೆಬ್​​ಸೈಟ್​ ತೆರೆದು ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 22, 2021 | 9:00 AM

Share

ಶ್ರೀರಾಮಜನ್ಮಭೂಮಿ ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ರಾಮಮಂದಿರದ ದೇಣಿಗೆ ಹೆಸರಲ್ಲಿ ಜನರಿಂದ ಲಕ್ಷಾಂತರ ರೂಪಾಯಿ ಪಡೆಯುತ್ತಿದ್ದ ಐವರನ್ನು ಸೋಮವಾರ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ನೊಯ್ಡಾದ ಸೈಬರ್​ ಠಾಣೆ ಮತ್ತು ಲಖನೌ ಸೈಬರ್​ ಕ್ರೈಂ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮಂದಿರ ನಿರ್ಮಾಣ ಕಾರ್ಯ ಪ್ರಾರಂಭವಾದ ಬೆನ್ನಲ್ಲೇ ದೇಶಾದ್ಯಂತ ದೇಣಿಗೆ ಸಂಗ್ರಹವೂ ನಡೆಯುತ್ತಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಅಧಿಕೃತವಾಗಿಯೇ ದೇಣಿಗೆ ಸಂಗ್ರಹ ಮಾಡುತ್ತಿದೆ. ಅದನ್ನೇ ಬಂಡವಾಳವಾಗಿಸಿಕೊಂಡ ಈ ಆರೋಪಿಗಳು ಟ್ರಸ್ಟ್​ ಹೆಸರಲ್ಲಿ ನಕಲಿ ವೆಬ್​ಸೈಟ್​ ತೆರೆದು, ಅಕ್ರಮವಾಗಿ ಹಣ ಸಂಗ್ರಹ ಮಾಡುತ್ತಿದ್ದರು. ವೆಬ್​​ಸೈಟ್​​ನಲ್ಲಿ ಬ್ಯಾಂಕ್​ ಅಕೌಂಟ್​ ನಂಬರ್​ ಕೂಡ ಹಾಕಿದ್ದರು. ಅದು ನಿಜವಾದ ವೆಬ್​​ಸೈಟ್​ ಎಂದೇ ನಂಬಿದ ಅನೇಕರು ಅಕೌಂಟ್​​ಗೆ ಹಣ ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಶೀಶ್​ ಗುಪ್ತಾ, ನವೀನ್​ ಕುಮಾರ್​ ಸಿಂಗ್​, ಸುಮಿತ್​ ಕುಮಾರ್​, ಅಮಿತ್​ ಝಾ ಮತ್ತು ಸೂರಜ್​ ಗುಪ್ತಾ ಬಂಧಿತರಾಗಿದ್ದು, ಎಲ್ಲರೂ ಯುವಕರೇ ಆಗಿದ್ದಾರೆ. ಇವರಲ್ಲಿ ಮೂವರು ಅಮೇಠಿಯವರು ಮತ್ತು ಇಬ್ಬರು ಬಿಹಾರದ ಸೀತಾಮಾರ್ಹಿಯವರು. ಇವರೆಲ್ಲರೂ ದೆಹಲಿಯ ನ್ಯೂ ಅಶೋಕ ನಗರದಲ್ಲಿ ವಾಸವಾಗಿದ್ದರು ಎಂದೂ ಹೇಳಿದ್ದಾರೆ. ಆರೋಪಿಗಳ ಬಳಿಯಿದ್ದ ಮೊಬೈಲ್​, ಲ್ಯಾಪ್​ಟಾಪ್​, 50 ಫೋಟೋ ಕಾಪಿಗಳು, ಆಧಾರ್​ ಕಾರ್ಡ್​ ಸೇರಿ ಮಹತ್ವದ ವಸ್ತುಗಳನ್ನೆಲ್ಲ ಪೊಲೀಸರು ವಶಪಡಿಸಿದ್ದಾರೆ.

ಇದನ್ನೂ ಓದಿ: ಹಾವೇರಿ ಮೂಲದ ನಿರ್ದೇಶಕನಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದ ಅತ್ಯುತ್ತಮ ಚಿತ್ರ 2021 ಪ್ರಶಸ್ತಿ (Five men were arrested for created illegal website in the name of the Ram Janmabhoomi Trust)

Published On - 8:59 am, Tue, 22 June 21

Follow Us
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ