AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳನ್ನ ಸಾಯಿಸಿ ದಂಪತಿ ಆತ್ಮಹತ್ಯೆ.. ಕೈ ಸಾಲಕ್ಕೆ ಬಲಿಯಾದವು ಅಮಾಯಕ ಐದು ಜೀವಗಳು

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ, ಪತ್ನಿ, ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಸಾಲದ ಶೂಲ ಹೆಚ್ಚಿದ್ದೇ ಇದಕ್ಕೆ ಕಾರಣ ಅಂತಾ ತಿಳಿದು ಬಂದಿದೆ.

ಮಕ್ಕಳನ್ನ ಸಾಯಿಸಿ ದಂಪತಿ ಆತ್ಮಹತ್ಯೆ.. ಕೈ ಸಾಲಕ್ಕೆ ಬಲಿಯಾದವು ಅಮಾಯಕ ಐದು ಜೀವಗಳು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Dec 15, 2020 | 12:30 PM

Share

ಕೈ ಸಾಲ ಹೆಚ್ಚಾಗಿ ಸಾಲ ತೀರಿಸಲಾಗದೆ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ವಳವನೂರು ಬಳಿಯ ಪಡುಪಾಳೆಯಂ ದಂಪತಿ ಮೋಹನ್ ಮತ್ತು ವಿಮಲೇಶ್ವರಿ ಸೇರಿ 8 ವರ್ಷದ ರಾಜಶ್ರೀ, 5 ವರ್ಷದ ನಿತ್ಯಶ್ರೀ ಮತ್ತು 4 ವರ್ಷದ ಶಿವಪಾಲ ಅನ್ನೋ ಮೂರು ಮುದ್ದಾದ ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುದ್ದಾದ ಮೂರು ಮಕ್ಕಳೊಂದಿಗೆ ಈ ತುಂಬು ಕುಟುಂಬ ಆನಂದವಾಗಿತ್ತು. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿತ್ತು. ಮೋಹನ್ ಸಹ ಬಡಗಿ ಕೆಲಸ ಮಾಡಿಕೊಂಡು ಹಾಯಾಗಿ ಇದ್ರು. ಆದ್ರೆ, ಯಾವಾಗ ತಮ್ಮ ವ್ಯಾಪಾರವನ್ನ ವಿಸ್ತರಿಸಲು ಸಾಲ ಪಡೆದ್ರೋ.. ಅಲ್ಲಿಂದ ಈ ಸುಂದರ ಕುಟುಂಬಕ್ಕೆ ಕೇಡುಗಾಲ ಆರಂಭವಾಯ್ತು.

ಕೈ ಸಾಲಕ್ಕೆ ಬಲಿಯಾದವು ತಮಿಳುನಾಡಿನ ಐದು ಜೀವಗಳು! 37 ವರ್ಷದ ಮೋಹನ್​ಗೆ ಕೈ ಸಾಲ ಕೊಟ್ಟಿದ್ದವರು ಪದೇಪದೆ ಮನೆ ಬಳಿ ಬಂದು ಗಲಾಟೆ ಮಾಡ್ತಿದ್ರಂತೆ. ಅಲ್ದೆ, ಸರಿಯಾದ ಸಮಯಕ್ಕೆ ಬಡ್ಡಿ ಕೂಡ ಕಟ್ಟುತ್ತಿಲ್ಲ. ನಮ್ಮ ಸಾಲ ಶೀಘ್ರವೇ ವಾಪಸ್ ಕೊಡಿ ಅಂತಾ ಮನೆ ಬಳಿ ಬಂದು ಗಲಾಟೆ ಮಾಡಿದ್ರಂತೆ. ಇದ್ರಿಂದ ಮನನೊಂದ ಮೋಹನ್ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ರು.

ತಾವು ಸತ್ತ ಬಳಿಕ ಸಾಲಗಾರರು ಮನೆ ಬಳಿ ಬಂದು ಗಲಾಟೆ ಮಾಡ್ತಾರೆ ಅನ್ನೋ ಕಾರಣಕ್ಕೆ ಹೆಂಡತಿ, ಮಕ್ಕಳನ್ನ ಜೊತೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ, ನೇಣಿಗೆ ಶರಣಾಗಿದ್ದಾರೆ. ನಿನ್ನೆ ಬೆಳಗ್ಗೆ ಎಷ್ಟು ಹೊತ್ತಾದ್ರೂ. ಇವರ ಮನೆ ಬಾಗಿಲು ತೆಗೆದಿಲ್ಲ. ಇದ್ರಿಂದ ಅನುಮಾನಗೊಂಡ ನೆರೆಹೊರೆಯವರು ಬಾಗಿಲು ಒಡೆದು ನೋಡಿದಾಗ, ಈ ಘಟನೆ ಬೆಳಕಿಗೆ ಬಂದಿದೆ.

ಕೂಡಲೇ ನೆರೆಹೊರೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಶವಗಳನ್ನ ಇಳಿಸಿ, ವಿಲ್ಲುಪುರಂ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಮೃತ ವಿಮಲೇಶ್ವರಿ ಕುಟುಂಬಸ್ಥರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು, ಕೈ ಸಾಲ ಕೊಟ್ಟಿದ್ದವರ ಹುಡುಕಾಟ ನಡೆಸಿದ್ದಾರೆ. ಒಟ್ನಲ್ಲಿ ಕೈ ಸಾಲ ಎಂಬ ಸಾಲದ ಶೂಲಕ್ಕೆ ಐವರ ತುಂಬು ಕುಟುಂಬ ಬಲಿಯಾಗಿದ್ದು ಮಾತ್ರ ವಿಪರ್ಯಾಸ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್