AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ ಬೆಂಕಿಯಿಂದ ಹೊತ್ತಿ ಉರಿದ ಮನೆ; ಎಂಟು ತಿಂಗಳ ಮಗು ಸೇರಿ ಐವರ ದುರ್ಮರಣ, ಒಬ್ಬನಿಗೆ ಗಂಭೀರ ಗಾಯ

ಪ್ರತಾಪನ್​ ಅವರ ಹಿರಿಯ ಮಗ ನಿಹುಲ್​ಗೆ ಗಂಭೀರ ಗಾಯಗಳಾಗಿವೆ. ತಡರಾತ್ರಿ ಇವರ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿದ್ದಾರೆ.

ಮಧ್ಯರಾತ್ರಿ ಬೆಂಕಿಯಿಂದ ಹೊತ್ತಿ ಉರಿದ ಮನೆ; ಎಂಟು ತಿಂಗಳ ಮಗು ಸೇರಿ ಐವರ ದುರ್ಮರಣ, ಒಬ್ಬನಿಗೆ ಗಂಭೀರ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 08, 2022 | 8:53 AM

Share

ತಡರಾತ್ರಿ ಮನೆಯೊಂದಕ್ಕೆ ಬೆಂಕಿ ಬಿದ್ದು, ಒಟ್ಟು ಐದು ಮಂದಿ ಮೃತಪಟ್ಟ ದುರ್ಘಟನೆ ಕೇರಳದ ವರ್ಕಳ ಎಂಬಲ್ಲಿ ನಡೆದಿದೆ. ಇಲ್ಲಿನ ದಲವಾಪುರಂ ಎಂಬಲ್ಲಿದ್ದ ಮನೆಗೆ ನಿನ್ನೆ ತಡರಾತ್ರಿ 1.45ರ ಹೊತ್ತಿಗೆ ಬೆಂಕಿ ಹೊತ್ತಿದೆ.  ಮೃತರನ್ನು ಪ್ರತಾಪನ್​ (62), ಶೆರ್ಲಿ (53), ಅಭಿರಾಮಿ (25), ಅಖಿಲ್​ (29) ಮತ್ತು ರಿಯಾನ್​ ಎಂದು ಗುರುತಿಸಲಾಗಿದೆ. ಇದರಲ್ಲಿ ರಿಯಾನ್​ ಪುಟ್ಟ ಮಗು. ಅಭಿರಾಮಿಯ ಎಂಟು ತಿಂಗಳ ಪುತ್ರ. ಪ್ರತಾಪನ್​ ಅವರು ವರ್ಕಳದಲ್ಲಿ ತರಕಾರಿ ವ್ಯಾಪಾರಿಯಾಗಿದ್ದರು.

ಇವರಲ್ಲೀಗ ಪ್ರತಾಪನ್​ ಅವರ ಹಿರಿಯ ಮಗ ನಿಹುಲ್​ಗೆ ಗಂಭೀರ ಗಾಯಗಳಾಗಿವೆ. ತಡರಾತ್ರಿ ಇವರ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿದ್ದಾರೆ. ಈ ದುರಂತದಲ್ಲಿ ಐದು ಬೈಕ್​​ಗಳು ಧ್ವಂಸಗೊಂಡಿವೆ. ಮನೆಯಲ್ಲಿದ್ದ ಎಸಿ ಕೂಡ ಸಂಪೂರ್ಣವಾಗಿ ಹಾಳಾಗಿವೆ.  ಬೆಂಕಿ ಬೀಳಲು ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ. ವಿಧಿವಿಜ್ಞಾನ ತಜ್ಞರು ಸ್ಥಳ ಪರಿಶೀಲನೆ ನಡೆಸಿದ ಬಳಿಕ ತನಿಖೆ ಶುರು ಮಾಡಲಾಗುತ್ತದೆ ಎಂದು ಗ್ರಾಮಾಂತರ ಎಸ್​ಪಿ ದಿವ್ಯಾ ಗೋಪಿನಾಥ್​ ತಿಳಿಸಿದ್ದಾರೆ.

ಇದನ್ನೂ ಓದಿ: Women’s Day: ಮಹಿಳಾ ಪ್ರಧಾನ ಸಿನಿಮಾಗಳಿಗೆ ವಿಶೇಷ ಮನ್ನಣೆ ನೀಡಿರುವ ಕನ್ನಡ ಪ್ರೇಕ್ಷಕ; ಇಲ್ಲಿವೆ ಜನಮನ ಗೆದ್ದ ಚಿತ್ರಗಳು

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು