AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ ಬೆಂಕಿಯಿಂದ ಹೊತ್ತಿ ಉರಿದ ಮನೆ; ಎಂಟು ತಿಂಗಳ ಮಗು ಸೇರಿ ಐವರ ದುರ್ಮರಣ, ಒಬ್ಬನಿಗೆ ಗಂಭೀರ ಗಾಯ

ಪ್ರತಾಪನ್​ ಅವರ ಹಿರಿಯ ಮಗ ನಿಹುಲ್​ಗೆ ಗಂಭೀರ ಗಾಯಗಳಾಗಿವೆ. ತಡರಾತ್ರಿ ಇವರ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿದ್ದಾರೆ.

ಮಧ್ಯರಾತ್ರಿ ಬೆಂಕಿಯಿಂದ ಹೊತ್ತಿ ಉರಿದ ಮನೆ; ಎಂಟು ತಿಂಗಳ ಮಗು ಸೇರಿ ಐವರ ದುರ್ಮರಣ, ಒಬ್ಬನಿಗೆ ಗಂಭೀರ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 08, 2022 | 8:53 AM

Share

ತಡರಾತ್ರಿ ಮನೆಯೊಂದಕ್ಕೆ ಬೆಂಕಿ ಬಿದ್ದು, ಒಟ್ಟು ಐದು ಮಂದಿ ಮೃತಪಟ್ಟ ದುರ್ಘಟನೆ ಕೇರಳದ ವರ್ಕಳ ಎಂಬಲ್ಲಿ ನಡೆದಿದೆ. ಇಲ್ಲಿನ ದಲವಾಪುರಂ ಎಂಬಲ್ಲಿದ್ದ ಮನೆಗೆ ನಿನ್ನೆ ತಡರಾತ್ರಿ 1.45ರ ಹೊತ್ತಿಗೆ ಬೆಂಕಿ ಹೊತ್ತಿದೆ.  ಮೃತರನ್ನು ಪ್ರತಾಪನ್​ (62), ಶೆರ್ಲಿ (53), ಅಭಿರಾಮಿ (25), ಅಖಿಲ್​ (29) ಮತ್ತು ರಿಯಾನ್​ ಎಂದು ಗುರುತಿಸಲಾಗಿದೆ. ಇದರಲ್ಲಿ ರಿಯಾನ್​ ಪುಟ್ಟ ಮಗು. ಅಭಿರಾಮಿಯ ಎಂಟು ತಿಂಗಳ ಪುತ್ರ. ಪ್ರತಾಪನ್​ ಅವರು ವರ್ಕಳದಲ್ಲಿ ತರಕಾರಿ ವ್ಯಾಪಾರಿಯಾಗಿದ್ದರು.

ಇವರಲ್ಲೀಗ ಪ್ರತಾಪನ್​ ಅವರ ಹಿರಿಯ ಮಗ ನಿಹುಲ್​ಗೆ ಗಂಭೀರ ಗಾಯಗಳಾಗಿವೆ. ತಡರಾತ್ರಿ ಇವರ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿದ್ದಾರೆ. ಈ ದುರಂತದಲ್ಲಿ ಐದು ಬೈಕ್​​ಗಳು ಧ್ವಂಸಗೊಂಡಿವೆ. ಮನೆಯಲ್ಲಿದ್ದ ಎಸಿ ಕೂಡ ಸಂಪೂರ್ಣವಾಗಿ ಹಾಳಾಗಿವೆ.  ಬೆಂಕಿ ಬೀಳಲು ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ. ವಿಧಿವಿಜ್ಞಾನ ತಜ್ಞರು ಸ್ಥಳ ಪರಿಶೀಲನೆ ನಡೆಸಿದ ಬಳಿಕ ತನಿಖೆ ಶುರು ಮಾಡಲಾಗುತ್ತದೆ ಎಂದು ಗ್ರಾಮಾಂತರ ಎಸ್​ಪಿ ದಿವ್ಯಾ ಗೋಪಿನಾಥ್​ ತಿಳಿಸಿದ್ದಾರೆ.

ಇದನ್ನೂ ಓದಿ: Women’s Day: ಮಹಿಳಾ ಪ್ರಧಾನ ಸಿನಿಮಾಗಳಿಗೆ ವಿಶೇಷ ಮನ್ನಣೆ ನೀಡಿರುವ ಕನ್ನಡ ಪ್ರೇಕ್ಷಕ; ಇಲ್ಲಿವೆ ಜನಮನ ಗೆದ್ದ ಚಿತ್ರಗಳು

Follow Us
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ