AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ರೈಲು; 5 ಮಂದಿ ಸಾವು

ಶಹಜಾನ್​ಪುರ: ಉತ್ತರ ಪ್ರದೇಶದ ಶಹಜಾನ್​ಪುರದಲ್ಲಿ ರೈಲು ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 5ಮಂದಿ ಮೃತಪಟ್ಟಿದ್ದಾರೆ. ಇನ್ನೋರ್ವ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಘಟನೆ ನಡೆದಿದ್ದು ಶಹಜಾನ್​ಪುರದ ಮ್ಯಾನ್​ ಲೆವೆಲ್​ ಕ್ರಾಸಿಂಗ್​ ಬಳಿ. ಅಂದರೆ ವಾಹನ ಸಂಚಾರ ರಸ್ತೆ ಮತ್ತು ರೈಲ್ವೆ ಹಳಿ ಕೂಡುವಲ್ಲಿ ಒಂದು ಗೇಟ್ ಇಡಲಾಗುತ್ತದೆ. ರೈಲು ಬರುವ ಹೊತ್ತಿಗೆ ಈ ಗೇಟ್​ನ್ನು ಮುಚ್ಚಬೇಕು. ಆದರೆ ಶಹಜಾನ್​ಪುರದ ಈ ಕ್ರಾಸಿಂಗ್ ಬಳಿ ಗೇಟ್​ ತೆರೆದೇ ಇದ್ದ ಕಾರಣ ಈ ಅವಘಡ ನಡೆದಿದೆ. ರೈಲ್ವೆ ಮ್ಯಾನೆಲ್​ ಕ್ರಾಸಿಂಗ್​ […]

ಉತ್ತರ ಪ್ರದೇಶದಲ್ಲಿ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ರೈಲು; 5 ಮಂದಿ ಸಾವು
ರೈಲು ಡಿಕ್ಕಿಯಾಗಿ ನುಜ್ಜುಗುಜ್ಜಾದ ಟ್ರಕ್​
Lakshmi Hegde
|

Updated on: Apr 22, 2021 | 11:53 AM

Share

ಶಹಜಾನ್​ಪುರ: ಉತ್ತರ ಪ್ರದೇಶದ ಶಹಜಾನ್​ಪುರದಲ್ಲಿ ರೈಲು ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 5ಮಂದಿ ಮೃತಪಟ್ಟಿದ್ದಾರೆ. ಇನ್ನೋರ್ವ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಘಟನೆ ನಡೆದಿದ್ದು ಶಹಜಾನ್​ಪುರದ ಮ್ಯಾನ್​ ಲೆವೆಲ್​ ಕ್ರಾಸಿಂಗ್​ ಬಳಿ. ಅಂದರೆ ವಾಹನ ಸಂಚಾರ ರಸ್ತೆ ಮತ್ತು ರೈಲ್ವೆ ಹಳಿ ಕೂಡುವಲ್ಲಿ ಒಂದು ಗೇಟ್ ಇಡಲಾಗುತ್ತದೆ. ರೈಲು ಬರುವ ಹೊತ್ತಿಗೆ ಈ ಗೇಟ್​ನ್ನು ಮುಚ್ಚಬೇಕು. ಆದರೆ ಶಹಜಾನ್​ಪುರದ ಈ ಕ್ರಾಸಿಂಗ್ ಬಳಿ ಗೇಟ್​ ತೆರೆದೇ ಇದ್ದ ಕಾರಣ ಈ ಅವಘಡ ನಡೆದಿದೆ.

ರೈಲ್ವೆ ಮ್ಯಾನೆಲ್​ ಕ್ರಾಸಿಂಗ್​ ಬಳಿ ವಾಹನಗಳಿಗೆ ಡಿಕ್ಕಿ ಹೊಡೆದ ಲಖನೌ-ಚಂಡಿಗಢ್​ ಸೂಪರ್ ಪಾಸ್ಟ್​ ರೈಲು ನಂತರ ಹಳಿ ತಪ್ಪಿದೆ. ಇದರಿಂದಾಗಿ ಎರಡೂ ದಿಕ್ಕಿನಿಂದಲೂ ರೈಲು ಸಂಚಾರಕ್ಕೆ ತೊಡಕಾಗಿತ್ತು ಎಂದು ಸ್ಥಳೀಯ ಗ್ರಾಮಾಂತರ ಎಸ್​ಪಿ ಸಂಜೀವ್​ ಬಾಜ್​ಪೇಯಿ ತಿಳಿಸಿದ್ದಾರೆ.

ಮೀರಾನ್​​ಪುರ ಕತ್ರಾ ರೈಲ್ವೆ ಸ್ಟೇಶನ್​​ ದಾಟಿದ ರೈಲು ಮಾರ್ಗದಲ್ಲಿ ಸಿಗುವ ಮ್ಯಾನೆಲ್​ ಕ್ರಾಸ್​​ನಲ್ಲಿ ಎರಡು ಟ್ರಕ್​, ಒಂದು ಕಾರು ಮತ್ತು ಒಂದು ಬೈಕ್​​ಗೆ ಡಿಕ್ಕಿ ಹೊಡೆದಿದೆ. ಮೃತಪಟ್ಟ ಐವರಲ್ಲಿ ಮೂವರು ಒಂದೇ ಕುಟುಂಬದವರು. ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ರೈಲು ಬರುವ ಸಮಯವಾದರೂ ಗೇಟ್​ ಯಾಕೆ ತೆರೆದಿತ್ತು ಎಂಬ ಬಗ್ಗೆ ತನಿಖೆ ನಡೆಸುವುದಾಗಿ ಎಸ್​ಪಿ ಹೇಳಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು, ರೈಲ್ವೆ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಸ್ಥಳದಲ್ಲಿದ್ದಾರೆ. ರೈಲ್ವೆ ಇಲಾಖೆಯ ಇಂಜಿನಿಯರ್​ಗಳು ಧಾವಿಸಿದ್ದಾರೆ. ಅಲ್ಲಿ ಹಾಳಾಗಿರುವ ಹಳಿ ದುರಸ್ತಿ ಕಾರ್ಯ ನಡೆಯುತ್ತಿದೆ. ಎಲ್ಲವೂ ಸರಿ ಆಗಿ, ರೈಲುಗಳು ಸಂಚರಿಸಲು ಇನ್ನೂ ಮೂರ್ನಾಲ್ಕು ತಾಸಾದರೂ ಬೇಕು ಎಂದು ಜಿಲ್ಲಾಧಿಕಾರಿ ವಿಕ್ರಮ್ ಸಿಂಗ್​ ತಿಳಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದು, ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಎಷ್ಟು ಪ್ರಯತ್ನಿಸಿದರೂ ತಾಯಿಯನ್ನು ಉಳಿಸಿಕೊಳ್ಳಲಾಗಲಿಲ್ಲ, ಆ್ಯಂಬುಲೆನ್ಸ್ ತಬ್ಬಿ ಕಣ್ಣೀರು ಹಾಕಿದ ಪೊಲೀಸ್ ಸಿಬ್ಬಂದಿ

ಮೊಹಮದ್ ನಲಪಾಡ್ ಅಂಡ್​ ಗ್ಯಾಂಗ್ ನನಗೆ ಹಿಂಸಿಸುತ್ತಿದ್ದಾರೆ- ಹೈಗ್ರೌಂಡ್ಸ್​ ಠಾಣೆಯಲ್ಲಿ 3 ಪುಟಗಳ ದೂರು ದಾಖಲು

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?