ದೆಹಲಿ-ಮೀರತ್​ ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ; ಐವರು ದುರ್ಮರಣ

ಈ ಕಾರು ಉತ್ತರಾಖಂಡ್​ನ ಹರಿದ್ವಾರದಿಂದ ವಾಪಸ್​ ಗಾಜಿಯಾಬಾದ್​ಗೆ ಬರುತ್ತಿತ್ತು. ಆದರೆ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಏಳು ಮಂದಿಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೆಹಲಿ-ಮೀರತ್​ ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ; ಐವರು ದುರ್ಮರಣ
ಸಾಂಕೇತಿಕ ಚಿತ್ರ
Follow us
| Updated By: Lakshmi Hegde

Updated on: Sep 07, 2021 | 10:21 AM

ಕಾರು-ಟ್ರಕ್​ ಡಿಕ್ಕಿ (Road Accident)ಯಾಗಿ ಐವರು ಮೃತಪಟ್ಟ ದುರ್ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ ಜಿಲ್ಲೆಯ ದೆಹಲಿ-ಮೀರತ್​ ರಸ್ತೆ (Delhi-Meerut Expressway)ಯಲ್ಲಿ ಇಂದು ಮುಂಜಾನೆ ನಡೆದಿದೆ. ಕಾರಿನಲ್ಲಿ ಎರಡು ಜೋಡಿ (ಎರಡು ದಂಪತಿಗಳು), ಮೂವರು ಮಕ್ಕಳು ಪ್ರಯಾಣ ಮಾಡುತ್ತಿದ್ದರು. ಅದರಲ್ಲೀಗ ಇಬ್ಬರು ಮಕ್ಕಳು ಮಾತ್ರ ಉಳಿದುಕೊಂಡಿದ್ದು, ಉಳಿದವರೆಲ್ಲ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಕಾರು ಉತ್ತರಾಖಂಡ್​ನ ಹರಿದ್ವಾರದಿಂದ ವಾಪಸ್​ ಗಾಜಿಯಾಬಾದ್​ಗೆ ಬರುತ್ತಿತ್ತು. ಆದರೆ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ದೆಹಲಿ ಮೀರತ್​ ಎಕ್ಸ್​ಪ್ರೆಸ್ ವೇಯಲ್ಲಿ ವಾಹನ ಸಂಚಾರ ಈ ವರ್ಷದ ಏಪ್ರಿಲ್​ ತಿಂಗಳಿನಿಂದ ಪ್ರಾರಂಭವಾಗಿದೆ. ಹಾಗಂತ ಇನ್ನೂ ಅಧಿಕೃತವಾಗಿ ಅದರ ಉದ್ಘಾಟನೆ ಆಗಲಿಲ್ಲ. ಇದು ದೆಹಲಿಯಿಂದ ಉತ್ತರಪ್ರದೇಶದ ಮೀರತ್​ನ್ನು, ಗಾಜಿಯಾಬಾದ್​ನ ದಾಸ್ನಾ ಮಾರ್ಗದಲ್ಲಿ ಸಂಪರ್ಕಿಸುತ್ತದೆ.

ಮೌ ಎಂಬಲ್ಲಿ ಭೀಕರ ಅಪಘಾತವಾಗಿತ್ತು ಕೆಲವೇ ದಿನಗಳ ಹಿಂದೆ ಉತ್ತರ ಪ್ರದೇಶದ ಮೌನಲ್ಲಿ ಇಂಥದ್ದೇ ಒಂದು ಭೀಕರ ಅಪಘಾತ ಉಂಟಾಗಿತ್ತು. ಏಳು ಮಂದಿಯಿಂದ ಕಾರು ಪಲ್ಟಿಯಾಗಿ ಕಣಿವೆಯಲ್ಲಿ ಸಿಲುಕಿ ನಾಲ್ವರು ಮಕ್ಕಳು ಸೇರಿ ಒಟ್ಟು ಐದು ಮಂದಿ ಮೃತಪಟ್ಟಿದ್ದರು.  ಈ ದುರ್ಘಟನೆ ನಡೆದದ್ದು ಸೋನಬರ್ಸಾ ಗ್ರಾಮದ ಬಳಿಯಾಗಿದ್ದು, ಇಬ್ಬರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ:  ಇಡಿ ಅಧಿಕಾರಿಗಳಿಂದ 8 ತಾಸು ವಿಚಾರಣೆ; ಒಂದಕ್ಕೂ ಸರಿಯಾಗಿ ಉತ್ತರಿಸದ ಟಿಎಂಸಿ ಸಂಸದ ಅಭಿಷೇಕ್​ ಬ್ಯಾನರ್ಜಿ

ಸ್ವಂತ ತಮ್ಮನನ್ನೇ ಬೆಳೆಸಲಿಲ್ಲ ಆಮಿರ್​ ಖಾನ್​; ನಟನೆ ಬರಲ್ಲ ಅಂತ ಬೈಯಿಸಿಕೊಂಡಿದ್ದ ಫೈಸಲ್​ ಖಾನ್​​ ಬಿಚ್ಚಿಟ್ಟ ರಹಸ್ಯ

(Five people including a child died In Uttarpradesh after car collide with Truck)

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?