AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಮಣ್ಣಿನ ದಿಬ್ಬ ಕುಸಿದು 5 ಮಂದಿ ಸಾವು; ತನಿಖೆ ಕೈಗೆತ್ತಿಕೊಂಡ ಪೊಲೀಸ್​

ಕೆಲಸ ನಡೆಯುತ್ತಿದ್ದ ಸ್ಥಳದಲ್ಲಿ ಮಣ್ಣಿನ ದಿಬ್ಬ ಕುಸಿದು, ಜನರ ಮೈಮೇಲೆ ಬಿದ್ದಿದೆ. ಮಣ್ಣಿನಡಿ ಸಿಲುಕಿದ್ದ ಅವರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಹೋಗುವುದರೊಳಗೆ ಜೀವ ಹೋಗಿದೆ.

ರಾಜಸ್ಥಾನದಲ್ಲಿ ಮಣ್ಣಿನ ದಿಬ್ಬ ಕುಸಿದು 5 ಮಂದಿ ಸಾವು; ತನಿಖೆ ಕೈಗೆತ್ತಿಕೊಂಡ ಪೊಲೀಸ್​
ಮಣ್ಣು ಕುಸಿತದ ಸ್ಥಳ
TV9 Web
| Edited By: |

Updated on:Aug 21, 2021 | 9:45 AM

Share

ನೀರಿನ ಟ್ಯಾಂಕ್​​ ನಿರ್ಮಾಣವಾಗುತ್ತಿದ್ದ ಸ್ಥಳದಲ್ಲಿ ಮಣ್ಣಿನ ದಿಬ್ಬ ಕುಸಿದು (soil mound collapses) ಮಗು ಸೇರಿ ಒಟ್ಟು ಐವರು ಮೃತಪಟ್ಟ ಘಟನೆ ರಾಜಸ್ಥಾನ (Rajasthan)ದ ಜಾಲೋರ್​​ನಲ್ಲಿ ನಡೆದಿದೆ. ಪ್ರಸ್ತುತ ನಿರ್ಮಾಣ ತಾಣದಲ್ಲಿ ಕೆಲಸಗಾರರು ನೀರಿನ ಟ್ಯಾಂಕ್​​ನ್ನು ಅಗೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅಲ್ಲಿಗೆ ವಿಪತ್ತು ಪ್ರತಿಕ್ರಿಯಾ ತಂಡವೊಂದು ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ. ಹಾಗೇ, ಈ ಮಣ್ಣಿನ ದಿಬ್ಬ ಕುಸಿತದ ವಿಷಯವನ್ನು ಸುಮ್ಮನೆ ಬಿಡಲಾಗುವುದಿಲ್ಲ. ತನಿಖೆ ನಡೆಸಲಾಗುವುದು ಎಂದು ಜಾಲೋರ್​​ನ ಡಿಎಸ್​ಪಿ ಹಿಮ್ಮತ್​ ಚರಣ್​ ತಿಳಿಸಿದ್ದಾರೆ. 

ಕೆಲಸ ನಡೆಯುತ್ತಿದ್ದ ಸ್ಥಳದಲ್ಲಿ ಮಣ್ಣಿನ ದಿಬ್ಬ ಕುಸಿದು, ಜನರ ಮೈಮೇಲೆ ಬಿದ್ದಿದೆ. ಮಣ್ಣಿನಡಿ ಸಿಲುಕಿದ್ದ ಅವರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಹೋಗುವುದರೊಳಗೆ ಜೀವ ಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಾಲೋರ್​​ ಅವಘಡದಲ್ಲಿ ಮೃತಪಟ್ಟವರಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ಗೆಹ್ಲೋಟ್​,  ನೀರಿನ ಟ್ಯಾಂಕ್​ ನಿರ್ಮಾಣವಾಗುತ್ತಿದ್ದ ಜಾಲೋರ್​​ನಲ್ಲಿ ಮಣ್ಣಿನ ದಿಬ್ಬ ಕುಸಿದು ಹೆಣ್ಣು ಮಗು ಸೇರಿ ಐವರು ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಮರಳಿದ ಭಾರತೀಯ ರಾಯಭಾರ ಕಚೇರಿ ಭದ್ರತಾ ಸಿಬ್ಬಂದಿ; ಬಾಗಲಕೋಟೆ ಮೂಲದ ಐಟಿಬಿಪಿ ಕಮಾಂಡೊ ಮನೆಯಲ್ಲಿ ಕಡಿಮೆಯಾಗದ ಆತಂಕ

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

(Five people, including a child, killed as soil mound collapses)

Published On - 9:31 am, Sat, 21 August 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ