AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಐದು ಶಂಕಿತ ಉಗ್ರರ ಬಂಧನ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ, ತಪ್ಪಿದ ದುರಂತ

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ವಿಶೇಷ ಪೊಲೀಸ್​ ಪಡೆ ಶಖರ್​ಪುರ್​ಗೆ ತೆರಳಿತ್ತು . ಈ ವೇಳೆ ಕೊಠಡಿಯಲ್ಲಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಅವರನ್ನು ಬಂಧಿಸಲಾಗಿದೆ.

ದೆಹಲಿಯಲ್ಲಿ ಐದು ಶಂಕಿತ ಉಗ್ರರ ಬಂಧನ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ, ತಪ್ಪಿದ ದುರಂತ
ಸಾಂದರ್ಭಿಕ ಚಿತ್ರ
Skanda
|

Updated on:Dec 07, 2020 | 5:53 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ಐದು ಶಂಕಿತ ಉಗ್ರರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಮುಂದೆ ನಡೆಯಬಹುದಾಗಿದ್ದ ದೊಡ್ಡ ದುರಂತವನ್ನು ಆರಂಭದಲ್ಲೇ ನಾಶ ಮಾಡಿದ್ದಾರೆ.

ದೆಹಲಿಯ ಶಖರ್​ಪುರ್​ ಭಾಗದಲ್ಲಿ ಉಗ್ರರನ್ನು ಬಂಧಿಸಲಾಗಿದೆ. ಮೂರು ಉಗ್ರರು ಜಮ್ಮು-ಕಾಶ್ಮೀರ ಮೂಲದವರಾದರೆ ಇನ್ನಿಬ್ಬರು ಪಂಜಾಬ್​ನವರು ಎಂದು ತಿಳಿದು ಬಂದಿದೆ. ಆದರೆ, ಈ ಉಗ್ರರು ಯಾವ ಸಂಘಟನೆ ಜೊತೆ ಸಂಬಂಧ ಹೊಂದಿದ್ದರು ಎನ್ನುವ ವಿಚಾರ ಇನ್ನಷ್ಟೇ ಬಯಲಾಗಬೇಕಿದೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ವಿಶೇಷ ಪೊಲೀಸ್​ ಪಡೆ ಶಖರ್​ಪುರ್​ಗೆ ತೆರಳಿತ್ತು . ಈ ವೇಳೆ ಕೊಠಡಿಯಲ್ಲಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಅವರನ್ನು ಬಂಧಿಸಲಾಗಿದೆ. ಈ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಶೌರ್ಯಚಕ್ರ ಪ್ರಶಸ್ತಿ ವಿಜೇತನ ಹತ್ಯೆಯಲ್ಲಿ ಭಾಗಿ?:

ಶಬ್ಬಿರ್​ ಅಹ್ಮದ್, ಅಯುಬ್​ ಪಠಾಣ್​, ರಿಯಾಜ್​, ಗುರ್ಜೀತ್​ ಸಿಂಗ್​ ಹಾಗೂ ಸುಖದೀಪ್​ ಸಿಂಗ್​ ಬಂಧಿತರು. ಶೌರ್ಯಚಕ್ರ ಪ್ರಶಸ್ತಿ ವಿಜೇತ ಬಲ್ವಿಂದರ್​ ಸಿಂಗ್​ ಹತ್ಯೆ ಬಂಧಿತರಲ್ಲೊಬ್ಬನ ಕೈವಾಡ ಇತ್ತು ಎನ್ನಲಾಗಿದೆ.

20 ದಿನಗಳ ಹಿಂದೆ ದೆಹಲಿಯಲ್ಲಿ ನಡೆದಿತ್ತು ಬಂಧನ:

ಕಳೆದ 20 ದಿನಗಳ ಹಿಂದೆ ದೆಹಲಿಯಲ್ಲಿ ಜೈಷ್​​-ಎ- ಮೊಹಮದ್​ ಸಂಘಟನೆಯ ಇಬ್ಬರು ಉಗ್ರರರನ್ನು ಬಂಧಿಸಲಾಗಿತ್ತು. ಇದಾದ ಬೆನ್ನಲ್ಲೇ ಈಗ ಐದು ಉಗ್ರರರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಹತರಾದ ಉಗ್ರರು ಮಸೂದ್ ಅಜರ್ ಸಹೋದರನ ಸಂಪರ್ಕದಲ್ಲಿದ್ದರು ! Slain terrorists were in touch with Masood Azhar’s brother

Published On - 5:43 pm, Mon, 7 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ