AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಐದು ಶಂಕಿತ ಉಗ್ರರ ಬಂಧನ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ, ತಪ್ಪಿದ ದುರಂತ

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ವಿಶೇಷ ಪೊಲೀಸ್​ ಪಡೆ ಶಖರ್​ಪುರ್​ಗೆ ತೆರಳಿತ್ತು . ಈ ವೇಳೆ ಕೊಠಡಿಯಲ್ಲಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಅವರನ್ನು ಬಂಧಿಸಲಾಗಿದೆ.

ದೆಹಲಿಯಲ್ಲಿ ಐದು ಶಂಕಿತ ಉಗ್ರರ ಬಂಧನ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ, ತಪ್ಪಿದ ದುರಂತ
ಸಾಂದರ್ಭಿಕ ಚಿತ್ರ
Skanda
|

Updated on:Dec 07, 2020 | 5:53 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ಐದು ಶಂಕಿತ ಉಗ್ರರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಮುಂದೆ ನಡೆಯಬಹುದಾಗಿದ್ದ ದೊಡ್ಡ ದುರಂತವನ್ನು ಆರಂಭದಲ್ಲೇ ನಾಶ ಮಾಡಿದ್ದಾರೆ.

ದೆಹಲಿಯ ಶಖರ್​ಪುರ್​ ಭಾಗದಲ್ಲಿ ಉಗ್ರರನ್ನು ಬಂಧಿಸಲಾಗಿದೆ. ಮೂರು ಉಗ್ರರು ಜಮ್ಮು-ಕಾಶ್ಮೀರ ಮೂಲದವರಾದರೆ ಇನ್ನಿಬ್ಬರು ಪಂಜಾಬ್​ನವರು ಎಂದು ತಿಳಿದು ಬಂದಿದೆ. ಆದರೆ, ಈ ಉಗ್ರರು ಯಾವ ಸಂಘಟನೆ ಜೊತೆ ಸಂಬಂಧ ಹೊಂದಿದ್ದರು ಎನ್ನುವ ವಿಚಾರ ಇನ್ನಷ್ಟೇ ಬಯಲಾಗಬೇಕಿದೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ವಿಶೇಷ ಪೊಲೀಸ್​ ಪಡೆ ಶಖರ್​ಪುರ್​ಗೆ ತೆರಳಿತ್ತು . ಈ ವೇಳೆ ಕೊಠಡಿಯಲ್ಲಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಅವರನ್ನು ಬಂಧಿಸಲಾಗಿದೆ. ಈ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಶೌರ್ಯಚಕ್ರ ಪ್ರಶಸ್ತಿ ವಿಜೇತನ ಹತ್ಯೆಯಲ್ಲಿ ಭಾಗಿ?:

ಶಬ್ಬಿರ್​ ಅಹ್ಮದ್, ಅಯುಬ್​ ಪಠಾಣ್​, ರಿಯಾಜ್​, ಗುರ್ಜೀತ್​ ಸಿಂಗ್​ ಹಾಗೂ ಸುಖದೀಪ್​ ಸಿಂಗ್​ ಬಂಧಿತರು. ಶೌರ್ಯಚಕ್ರ ಪ್ರಶಸ್ತಿ ವಿಜೇತ ಬಲ್ವಿಂದರ್​ ಸಿಂಗ್​ ಹತ್ಯೆ ಬಂಧಿತರಲ್ಲೊಬ್ಬನ ಕೈವಾಡ ಇತ್ತು ಎನ್ನಲಾಗಿದೆ.

20 ದಿನಗಳ ಹಿಂದೆ ದೆಹಲಿಯಲ್ಲಿ ನಡೆದಿತ್ತು ಬಂಧನ:

ಕಳೆದ 20 ದಿನಗಳ ಹಿಂದೆ ದೆಹಲಿಯಲ್ಲಿ ಜೈಷ್​​-ಎ- ಮೊಹಮದ್​ ಸಂಘಟನೆಯ ಇಬ್ಬರು ಉಗ್ರರರನ್ನು ಬಂಧಿಸಲಾಗಿತ್ತು. ಇದಾದ ಬೆನ್ನಲ್ಲೇ ಈಗ ಐದು ಉಗ್ರರರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಹತರಾದ ಉಗ್ರರು ಮಸೂದ್ ಅಜರ್ ಸಹೋದರನ ಸಂಪರ್ಕದಲ್ಲಿದ್ದರು ! Slain terrorists were in touch with Masood Azhar’s brother

Published On - 5:43 pm, Mon, 7 December 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ