AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kulgam Encounter: ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನೆಯಿಂದ ಐವರು ಉಗ್ರರ ಎನ್​ಕೌಂಟರ್

ಇಂದು ಒಟ್ಟು 5 ಉಗ್ರರನ್ನು ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಾರತೀಯ ಸೇನೆಯಿಂದ ಎನ್​ಕೌಂಟರ್ ನಡೆಸಿ, ಹತ್ಯೆ ಮಾಡಲಾಗಿದೆ. ಪೊಂಬೈ ಮತ್ತು ಗೋಪಾಲ್​ಪುರ ಈ ಎರಡೂ ಗ್ರಾಮಗಳಲ್ಲಿ ಇನ್ನೂ ಭಾರತೀಯ ಸೇನೆಯಿಂದ ಕಾರ್ಯಾಚರಣೆ ಮುಂದುವರೆದಿದೆ

Kulgam Encounter: ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನೆಯಿಂದ ಐವರು ಉಗ್ರರ ಎನ್​ಕೌಂಟರ್
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 17, 2021 | 6:37 PM

Share

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎರಡು ಎನ್​ಕೌಂಟರ್​ಗಳಲ್ಲಿ ಐವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಇಂದು ಸಂಜೆ ಕುಲ್ಗಾಂ ಜಿಲ್ಲೆಯ ಪೊಂಬೈ ಮತ್ತು ಗೋಪಾಲ್​ಪುರದಲ್ಲಿ ನಡೆದ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಕಾಶ್ಮೀರದ ಪೊಲೀಸರು, ಸಿಆರ್​ಪಿಎಫ್, ಭಾರತೀಯ ಸೇನೆ ಜಂಟಿಯಾಗಿ ಎನ್​ಕೌಂಟರ್ ಕಾರ್ಯಾಚರಣೆ ನಡೆಸಿವೆ.

ಇಂದು ಒಟ್ಟು 5 ಉಗ್ರರನ್ನು ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಾರತೀಯ ಸೇನೆಯಿಂದ ಎನ್​ಕೌಂಟರ್ ನಡೆಸಿ, ಹತ್ಯೆ ಮಾಡಲಾಗಿದೆ. ಪೊಂಬೈ ಮತ್ತು ಗೋಪಾಲ್​ಪುರ ಈ ಎರಡೂ ಗ್ರಾಮಗಳಲ್ಲಿ ಇನ್ನೂ ಭಾರತೀಯ ಸೇನೆಯಿಂದ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ. ವರದಿಯ ಪ್ರಕಾರ, ನಿಷೇಧಿತ ಭಯೋತ್ಪಾದಕ ಸಂಘಟನೆ ಟಿಆರ್‌ಎಫ್‌ನ ಭಯೋತ್ಪಾದಕ ಕಮಾಂಡರ್ ಅಫಾಕ್ ಸಿಕಂದರ್ ಗೋಪಾಲ್‌ಪೋರಾದಲ್ಲಿ ಎನ್​ಕೌಂಟರ್​ಗೆ ಬಲಿಯಾಗಿದ್ದಾರೆ.

ಮಂಗಳವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೈದರ್‌ಪೋರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮತ್ತು ಅವನ ಸಹಚರನನ್ನು ಹತ್ಯೆ ಮಾಡಲಾಗಿತ್ತು. ಇರ ಜೊತೆಗೆ ಪುಲ್ವಾಮಾ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ನಾಕಾ ತಪಾಸಣೆಯಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕ ಸಹಚರರಾದ ಅಮೀರ್ ಬಶೀರ್ ಮತ್ತು ಮುಖ್ತಾರ್ ಭಟ್ ಅವರನ್ನು ಬಂಧಿಸಿದ್ದರಿಂದ ದೊಡ್ಡ ದುರಂತವನ್ನು ತಪ್ಪಿಸಲಾಯಿತು. ಹುಡುಕಾಟದ ಸಮಯದಲ್ಲಿ ಅವರಿಂದ ಬಳಸಲು ಸಿದ್ಧವಾಗಿರುವ 2 ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೊದಲು ಪೊಂಬೈ ಗ್ರಾಮದಲ್ಲಿ ಎನ್​ಕೌಂಟರ್ ನಡೆಸಿ ಮೂವರು ಉಗ್ರರನ್ನು ಕೊಲ್ಲಲಾಯಿತು. ಅದಾದ ಕೆಲವೇ ಗಂಟೆಗಳಲ್ಲಿ ಗೋಪಾಲ್​ಪುರದಲ್ಲಿ ಎನ್​ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಯಿತು.

ಇದನ್ನೂ ಓದಿ: ಜಮ್ಮು ಕಾಶ್ಮೀರ: ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾದ ಇಬ್ಬರು ಉದ್ಯಮಿಗಳಿಗೂ ಇತ್ತು ಭಯೋತ್ಪಾದಕರೊಂದಿಗೆ ನಂಟು; ತನಿಖೆಗೆ ಆಗ್ರಹಿಸಿದ ಮುಫ್ತಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?