AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಿಂದ ಭಾರತಕ್ಕೆ ಆಕ್ಸಿಜನ್​ ನೆರವು; ಇಂದು ದೆಹಲಿ ತಲುಪಲಿದೆ 5 ಟನ್​ ಆಮ್ಲಜನಕ ಸಾಂದ್ರಕಗಳನ್ನು ಹೊತ್ತ ಏರ್​ ಇಂಡಿಯಾ

ಈ ಹಿಂದೆ ಮೊದಲನೇ ಅಲೆಯಲ್ಲಿ ಕೊವಿಡ್​ ಸೋಂಕಿನಿಂದ ಕಂಗೆಟ್ಟಿದ್ದ ಅಮೆರಿಕಕ್ಕೆ ಭಾರತ ಸಹಾಯ ಮಾಡಿದೆ. ಈಗ ಭಾರತಕ್ಕೆ ಅಗತ್ಯವಿರುವ ನೆರವನ್ನು ನಾವು ನೀಡುತ್ತೇವೆ ಎಂದು ಜೋ ಬೈಡನ್ ಟ್ವೀಟ್ ಮಾಡಿದ್ದಾರೆ.

ಅಮೆರಿಕದಿಂದ ಭಾರತಕ್ಕೆ ಆಕ್ಸಿಜನ್​ ನೆರವು; ಇಂದು ದೆಹಲಿ ತಲುಪಲಿದೆ 5 ಟನ್​ ಆಮ್ಲಜನಕ ಸಾಂದ್ರಕಗಳನ್ನು ಹೊತ್ತ ಏರ್​ ಇಂಡಿಯಾ
ಅಮೆರಿಕ ಅಧ್ಯಕ್ಷ ಜೋ ಬೈಡನ್​ (ಸಂಗ್ರಹ ಚಿತ್ರ)
Lakshmi Hegde
|

Updated on: Apr 26, 2021 | 1:17 PM

Share

ವಾಷಿಂಗ್ಟನ್​ ಡಿಸಿ: ಆಕ್ಸಿಜನ್ ಅಭಾವದ ಸವಾಲಿನೊಂದಿಗೆ ಗುದ್ದಾಡುತ್ತಿರುವ ಭಾರತದ ಸಹಾಯಕ್ಕೆ ಅಮೆರಿಕ ನಿಂತಿದೆ. 5 ಟನ್​ಗಳಷ್ಟು ಆಮ್ಲಜನಕ ಸಾಂದ್ರಕಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ನ್ಯೂಯಾರ್ಕ್​ನಿಂದ ಭಾರತಕ್ಕೆ ಕಳಿಸಲಾಗಿದೆ. ಹಾಗೇ, ಭಾರತಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ ಮಾಡಲೂ ಅಮೆರಿಕ ಸಿದ್ಧವಿದೆ ಎಂದು ಅಧ್ಯಕ್ಷ ಜೋ ಬೈಡನ್​ ಹೇಳಿದ್ದಾರೆ.

ಈ ಹಿಂದೆ ಮೊದಲನೇ ಅಲೆಯಲ್ಲಿ ಕೊವಿಡ್​ ಸೋಂಕಿನಿಂದ ಕಂಗೆಟ್ಟಿದ್ದ ಅಮೆರಿಕಕ್ಕೆ ಭಾರತ ಸಹಾಯ ಮಾಡಿದೆ. ಈಗ ಭಾರತಕ್ಕೆ ಅಗತ್ಯವಿರುವ ನೆರವನ್ನು ನಾವು ನೀಡುತ್ತೇವೆ ಎಂದು ಜೋ ಬೈಡನ್ ಟ್ವೀಟ್ ಮಾಡಿದ್ದಾರೆ. ಏರ್​ ಇಂಡಿಯಾದ ಎ 102 ವಿಮಾನವು 5000 ಕೆಜಿ ಆಕ್ಸಿಜನ್ ಸಾಂದ್ರಕಗಳನ್ನು ನ್ಯೂಯಾರ್ಕ್​​ ಜಾನ್​ ಎಫ್​ ಕೆನಡಿ ವಿಮಾನನಿಲ್ದಾಣದಿಂದ ನವದೆಹಲಿಗೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ ತರಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಹಾಗೇ, ನಾಳೆ (ಏಪ್ರಿಲ್​ 27)ರಂದು ಇನ್ನೊಂದು ವಿಮಾನ ಆಮ್ಲಜನಕವನ್ನು ಹೊತ್ತು ಭಾರತಕ್ಕೆ ಬರಲಿದೆ. ಕಳೆದ ವರ್ಷ ಅಲ್ಲಿನ ಅಧ್ಯಕ್ಷರಾಗಿದ್ದ ಡೊನಾಲ್ಡ್ ಟ್ರಂಪ್​ ಮನವಿ ಮೇರೆಗೆ 50 ಮಿಲಿಯನ್​ಗಳಷ್ಟು ಹೈಡ್ರಾಕ್ಸಿಕ್ಲೊರೋಕ್ವಿನ್​ನ್ನು ಅಮೆರಿಕಕ್ಕೆ ಕಳಿಸಿತ್ತು. ಇದೀಗ ಆ ಸಹಾಯವನ್ನು ನೆನಪಿಸಿಕೊಂಡಿರುವ ಜೋ ಬೈಡನ್​ ತಾವು ಈಗ ಭಾರತಕ್ಕೆ ಸಹಾಯ ಮಾಡಲು ನಿರ್ಧರಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಅಮೆರಿಕ ಉಪಾಧ್ಯಕ್ಷ ಕಮಲಾ ಹ್ಯಾರಿಸ್​ ಕೂಡ ಭಾರತದೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿದ್ದಾರೆ. ಭಾರತಕ್ಕೆ ಅಗತ್ಯ ಇರುವ ಸಹಾಯ ನೀಡುವ ಜತೆ, ಅಲ್ಲಿನ ಜನರು, ಆರೋಗ್ಯ ಕಾರ್ಯಕರ್ತರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇವೆ ಎಂದೂ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Oxygen Shortage: ಹರ್ಯಾಣದ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಸಿಗದೆ 5 ರೋಗಿಗಳು ಸಾವು

ಮಂಗಳೂರಿನಲ್ಲಿ ಬೈಕ್​ಗೆ ಶ್ವಾನವನ್ನು ಕಟ್ಟಿಕೊಂಡು ಧರಧರ ಎಳೆದೊಯ್ದ ಕಿರಾತಕರು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್, ಓರ್ವ ಬಂಧನ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ