AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಿಂದ ಭಾರತಕ್ಕೆ ಆಕ್ಸಿಜನ್​ ನೆರವು; ಇಂದು ದೆಹಲಿ ತಲುಪಲಿದೆ 5 ಟನ್​ ಆಮ್ಲಜನಕ ಸಾಂದ್ರಕಗಳನ್ನು ಹೊತ್ತ ಏರ್​ ಇಂಡಿಯಾ

ಈ ಹಿಂದೆ ಮೊದಲನೇ ಅಲೆಯಲ್ಲಿ ಕೊವಿಡ್​ ಸೋಂಕಿನಿಂದ ಕಂಗೆಟ್ಟಿದ್ದ ಅಮೆರಿಕಕ್ಕೆ ಭಾರತ ಸಹಾಯ ಮಾಡಿದೆ. ಈಗ ಭಾರತಕ್ಕೆ ಅಗತ್ಯವಿರುವ ನೆರವನ್ನು ನಾವು ನೀಡುತ್ತೇವೆ ಎಂದು ಜೋ ಬೈಡನ್ ಟ್ವೀಟ್ ಮಾಡಿದ್ದಾರೆ.

ಅಮೆರಿಕದಿಂದ ಭಾರತಕ್ಕೆ ಆಕ್ಸಿಜನ್​ ನೆರವು; ಇಂದು ದೆಹಲಿ ತಲುಪಲಿದೆ 5 ಟನ್​ ಆಮ್ಲಜನಕ ಸಾಂದ್ರಕಗಳನ್ನು ಹೊತ್ತ ಏರ್​ ಇಂಡಿಯಾ
ಅಮೆರಿಕ ಅಧ್ಯಕ್ಷ ಜೋ ಬೈಡನ್​ (ಸಂಗ್ರಹ ಚಿತ್ರ)
Lakshmi Hegde
|

Updated on: Apr 26, 2021 | 1:17 PM

Share

ವಾಷಿಂಗ್ಟನ್​ ಡಿಸಿ: ಆಕ್ಸಿಜನ್ ಅಭಾವದ ಸವಾಲಿನೊಂದಿಗೆ ಗುದ್ದಾಡುತ್ತಿರುವ ಭಾರತದ ಸಹಾಯಕ್ಕೆ ಅಮೆರಿಕ ನಿಂತಿದೆ. 5 ಟನ್​ಗಳಷ್ಟು ಆಮ್ಲಜನಕ ಸಾಂದ್ರಕಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ನ್ಯೂಯಾರ್ಕ್​ನಿಂದ ಭಾರತಕ್ಕೆ ಕಳಿಸಲಾಗಿದೆ. ಹಾಗೇ, ಭಾರತಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ ಮಾಡಲೂ ಅಮೆರಿಕ ಸಿದ್ಧವಿದೆ ಎಂದು ಅಧ್ಯಕ್ಷ ಜೋ ಬೈಡನ್​ ಹೇಳಿದ್ದಾರೆ.

ಈ ಹಿಂದೆ ಮೊದಲನೇ ಅಲೆಯಲ್ಲಿ ಕೊವಿಡ್​ ಸೋಂಕಿನಿಂದ ಕಂಗೆಟ್ಟಿದ್ದ ಅಮೆರಿಕಕ್ಕೆ ಭಾರತ ಸಹಾಯ ಮಾಡಿದೆ. ಈಗ ಭಾರತಕ್ಕೆ ಅಗತ್ಯವಿರುವ ನೆರವನ್ನು ನಾವು ನೀಡುತ್ತೇವೆ ಎಂದು ಜೋ ಬೈಡನ್ ಟ್ವೀಟ್ ಮಾಡಿದ್ದಾರೆ. ಏರ್​ ಇಂಡಿಯಾದ ಎ 102 ವಿಮಾನವು 5000 ಕೆಜಿ ಆಕ್ಸಿಜನ್ ಸಾಂದ್ರಕಗಳನ್ನು ನ್ಯೂಯಾರ್ಕ್​​ ಜಾನ್​ ಎಫ್​ ಕೆನಡಿ ವಿಮಾನನಿಲ್ದಾಣದಿಂದ ನವದೆಹಲಿಗೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ ತರಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಹಾಗೇ, ನಾಳೆ (ಏಪ್ರಿಲ್​ 27)ರಂದು ಇನ್ನೊಂದು ವಿಮಾನ ಆಮ್ಲಜನಕವನ್ನು ಹೊತ್ತು ಭಾರತಕ್ಕೆ ಬರಲಿದೆ. ಕಳೆದ ವರ್ಷ ಅಲ್ಲಿನ ಅಧ್ಯಕ್ಷರಾಗಿದ್ದ ಡೊನಾಲ್ಡ್ ಟ್ರಂಪ್​ ಮನವಿ ಮೇರೆಗೆ 50 ಮಿಲಿಯನ್​ಗಳಷ್ಟು ಹೈಡ್ರಾಕ್ಸಿಕ್ಲೊರೋಕ್ವಿನ್​ನ್ನು ಅಮೆರಿಕಕ್ಕೆ ಕಳಿಸಿತ್ತು. ಇದೀಗ ಆ ಸಹಾಯವನ್ನು ನೆನಪಿಸಿಕೊಂಡಿರುವ ಜೋ ಬೈಡನ್​ ತಾವು ಈಗ ಭಾರತಕ್ಕೆ ಸಹಾಯ ಮಾಡಲು ನಿರ್ಧರಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಅಮೆರಿಕ ಉಪಾಧ್ಯಕ್ಷ ಕಮಲಾ ಹ್ಯಾರಿಸ್​ ಕೂಡ ಭಾರತದೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿದ್ದಾರೆ. ಭಾರತಕ್ಕೆ ಅಗತ್ಯ ಇರುವ ಸಹಾಯ ನೀಡುವ ಜತೆ, ಅಲ್ಲಿನ ಜನರು, ಆರೋಗ್ಯ ಕಾರ್ಯಕರ್ತರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇವೆ ಎಂದೂ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Oxygen Shortage: ಹರ್ಯಾಣದ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಸಿಗದೆ 5 ರೋಗಿಗಳು ಸಾವು

ಮಂಗಳೂರಿನಲ್ಲಿ ಬೈಕ್​ಗೆ ಶ್ವಾನವನ್ನು ಕಟ್ಟಿಕೊಂಡು ಧರಧರ ಎಳೆದೊಯ್ದ ಕಿರಾತಕರು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್, ಓರ್ವ ಬಂಧನ

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು