Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಿಂದ ಭಾರತಕ್ಕೆ ಆಕ್ಸಿಜನ್​ ನೆರವು; ಇಂದು ದೆಹಲಿ ತಲುಪಲಿದೆ 5 ಟನ್​ ಆಮ್ಲಜನಕ ಸಾಂದ್ರಕಗಳನ್ನು ಹೊತ್ತ ಏರ್​ ಇಂಡಿಯಾ

ಈ ಹಿಂದೆ ಮೊದಲನೇ ಅಲೆಯಲ್ಲಿ ಕೊವಿಡ್​ ಸೋಂಕಿನಿಂದ ಕಂಗೆಟ್ಟಿದ್ದ ಅಮೆರಿಕಕ್ಕೆ ಭಾರತ ಸಹಾಯ ಮಾಡಿದೆ. ಈಗ ಭಾರತಕ್ಕೆ ಅಗತ್ಯವಿರುವ ನೆರವನ್ನು ನಾವು ನೀಡುತ್ತೇವೆ ಎಂದು ಜೋ ಬೈಡನ್ ಟ್ವೀಟ್ ಮಾಡಿದ್ದಾರೆ.

ಅಮೆರಿಕದಿಂದ ಭಾರತಕ್ಕೆ ಆಕ್ಸಿಜನ್​ ನೆರವು; ಇಂದು ದೆಹಲಿ ತಲುಪಲಿದೆ 5 ಟನ್​ ಆಮ್ಲಜನಕ ಸಾಂದ್ರಕಗಳನ್ನು ಹೊತ್ತ ಏರ್​ ಇಂಡಿಯಾ
ಅಮೆರಿಕ ಅಧ್ಯಕ್ಷ ಜೋ ಬೈಡನ್​ (ಸಂಗ್ರಹ ಚಿತ್ರ)
Follow us
Lakshmi Hegde
|

Updated on: Apr 26, 2021 | 1:17 PM

ವಾಷಿಂಗ್ಟನ್​ ಡಿಸಿ: ಆಕ್ಸಿಜನ್ ಅಭಾವದ ಸವಾಲಿನೊಂದಿಗೆ ಗುದ್ದಾಡುತ್ತಿರುವ ಭಾರತದ ಸಹಾಯಕ್ಕೆ ಅಮೆರಿಕ ನಿಂತಿದೆ. 5 ಟನ್​ಗಳಷ್ಟು ಆಮ್ಲಜನಕ ಸಾಂದ್ರಕಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ನ್ಯೂಯಾರ್ಕ್​ನಿಂದ ಭಾರತಕ್ಕೆ ಕಳಿಸಲಾಗಿದೆ. ಹಾಗೇ, ಭಾರತಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ ಮಾಡಲೂ ಅಮೆರಿಕ ಸಿದ್ಧವಿದೆ ಎಂದು ಅಧ್ಯಕ್ಷ ಜೋ ಬೈಡನ್​ ಹೇಳಿದ್ದಾರೆ.

ಈ ಹಿಂದೆ ಮೊದಲನೇ ಅಲೆಯಲ್ಲಿ ಕೊವಿಡ್​ ಸೋಂಕಿನಿಂದ ಕಂಗೆಟ್ಟಿದ್ದ ಅಮೆರಿಕಕ್ಕೆ ಭಾರತ ಸಹಾಯ ಮಾಡಿದೆ. ಈಗ ಭಾರತಕ್ಕೆ ಅಗತ್ಯವಿರುವ ನೆರವನ್ನು ನಾವು ನೀಡುತ್ತೇವೆ ಎಂದು ಜೋ ಬೈಡನ್ ಟ್ವೀಟ್ ಮಾಡಿದ್ದಾರೆ. ಏರ್​ ಇಂಡಿಯಾದ ಎ 102 ವಿಮಾನವು 5000 ಕೆಜಿ ಆಕ್ಸಿಜನ್ ಸಾಂದ್ರಕಗಳನ್ನು ನ್ಯೂಯಾರ್ಕ್​​ ಜಾನ್​ ಎಫ್​ ಕೆನಡಿ ವಿಮಾನನಿಲ್ದಾಣದಿಂದ ನವದೆಹಲಿಗೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ ತರಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಹಾಗೇ, ನಾಳೆ (ಏಪ್ರಿಲ್​ 27)ರಂದು ಇನ್ನೊಂದು ವಿಮಾನ ಆಮ್ಲಜನಕವನ್ನು ಹೊತ್ತು ಭಾರತಕ್ಕೆ ಬರಲಿದೆ. ಕಳೆದ ವರ್ಷ ಅಲ್ಲಿನ ಅಧ್ಯಕ್ಷರಾಗಿದ್ದ ಡೊನಾಲ್ಡ್ ಟ್ರಂಪ್​ ಮನವಿ ಮೇರೆಗೆ 50 ಮಿಲಿಯನ್​ಗಳಷ್ಟು ಹೈಡ್ರಾಕ್ಸಿಕ್ಲೊರೋಕ್ವಿನ್​ನ್ನು ಅಮೆರಿಕಕ್ಕೆ ಕಳಿಸಿತ್ತು. ಇದೀಗ ಆ ಸಹಾಯವನ್ನು ನೆನಪಿಸಿಕೊಂಡಿರುವ ಜೋ ಬೈಡನ್​ ತಾವು ಈಗ ಭಾರತಕ್ಕೆ ಸಹಾಯ ಮಾಡಲು ನಿರ್ಧರಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಅಮೆರಿಕ ಉಪಾಧ್ಯಕ್ಷ ಕಮಲಾ ಹ್ಯಾರಿಸ್​ ಕೂಡ ಭಾರತದೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿದ್ದಾರೆ. ಭಾರತಕ್ಕೆ ಅಗತ್ಯ ಇರುವ ಸಹಾಯ ನೀಡುವ ಜತೆ, ಅಲ್ಲಿನ ಜನರು, ಆರೋಗ್ಯ ಕಾರ್ಯಕರ್ತರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇವೆ ಎಂದೂ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Oxygen Shortage: ಹರ್ಯಾಣದ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಸಿಗದೆ 5 ರೋಗಿಗಳು ಸಾವು

ಮಂಗಳೂರಿನಲ್ಲಿ ಬೈಕ್​ಗೆ ಶ್ವಾನವನ್ನು ಕಟ್ಟಿಕೊಂಡು ಧರಧರ ಎಳೆದೊಯ್ದ ಕಿರಾತಕರು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್, ಓರ್ವ ಬಂಧನ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!