AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಿಂದ ಭಾರತಕ್ಕೆ ಆಕ್ಸಿಜನ್​ ನೆರವು; ಇಂದು ದೆಹಲಿ ತಲುಪಲಿದೆ 5 ಟನ್​ ಆಮ್ಲಜನಕ ಸಾಂದ್ರಕಗಳನ್ನು ಹೊತ್ತ ಏರ್​ ಇಂಡಿಯಾ

ಈ ಹಿಂದೆ ಮೊದಲನೇ ಅಲೆಯಲ್ಲಿ ಕೊವಿಡ್​ ಸೋಂಕಿನಿಂದ ಕಂಗೆಟ್ಟಿದ್ದ ಅಮೆರಿಕಕ್ಕೆ ಭಾರತ ಸಹಾಯ ಮಾಡಿದೆ. ಈಗ ಭಾರತಕ್ಕೆ ಅಗತ್ಯವಿರುವ ನೆರವನ್ನು ನಾವು ನೀಡುತ್ತೇವೆ ಎಂದು ಜೋ ಬೈಡನ್ ಟ್ವೀಟ್ ಮಾಡಿದ್ದಾರೆ.

ಅಮೆರಿಕದಿಂದ ಭಾರತಕ್ಕೆ ಆಕ್ಸಿಜನ್​ ನೆರವು; ಇಂದು ದೆಹಲಿ ತಲುಪಲಿದೆ 5 ಟನ್​ ಆಮ್ಲಜನಕ ಸಾಂದ್ರಕಗಳನ್ನು ಹೊತ್ತ ಏರ್​ ಇಂಡಿಯಾ
ಅಮೆರಿಕ ಅಧ್ಯಕ್ಷ ಜೋ ಬೈಡನ್​ (ಸಂಗ್ರಹ ಚಿತ್ರ)
Lakshmi Hegde
|

Updated on: Apr 26, 2021 | 1:17 PM

Share

ವಾಷಿಂಗ್ಟನ್​ ಡಿಸಿ: ಆಕ್ಸಿಜನ್ ಅಭಾವದ ಸವಾಲಿನೊಂದಿಗೆ ಗುದ್ದಾಡುತ್ತಿರುವ ಭಾರತದ ಸಹಾಯಕ್ಕೆ ಅಮೆರಿಕ ನಿಂತಿದೆ. 5 ಟನ್​ಗಳಷ್ಟು ಆಮ್ಲಜನಕ ಸಾಂದ್ರಕಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ನ್ಯೂಯಾರ್ಕ್​ನಿಂದ ಭಾರತಕ್ಕೆ ಕಳಿಸಲಾಗಿದೆ. ಹಾಗೇ, ಭಾರತಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ ಮಾಡಲೂ ಅಮೆರಿಕ ಸಿದ್ಧವಿದೆ ಎಂದು ಅಧ್ಯಕ್ಷ ಜೋ ಬೈಡನ್​ ಹೇಳಿದ್ದಾರೆ.

ಈ ಹಿಂದೆ ಮೊದಲನೇ ಅಲೆಯಲ್ಲಿ ಕೊವಿಡ್​ ಸೋಂಕಿನಿಂದ ಕಂಗೆಟ್ಟಿದ್ದ ಅಮೆರಿಕಕ್ಕೆ ಭಾರತ ಸಹಾಯ ಮಾಡಿದೆ. ಈಗ ಭಾರತಕ್ಕೆ ಅಗತ್ಯವಿರುವ ನೆರವನ್ನು ನಾವು ನೀಡುತ್ತೇವೆ ಎಂದು ಜೋ ಬೈಡನ್ ಟ್ವೀಟ್ ಮಾಡಿದ್ದಾರೆ. ಏರ್​ ಇಂಡಿಯಾದ ಎ 102 ವಿಮಾನವು 5000 ಕೆಜಿ ಆಕ್ಸಿಜನ್ ಸಾಂದ್ರಕಗಳನ್ನು ನ್ಯೂಯಾರ್ಕ್​​ ಜಾನ್​ ಎಫ್​ ಕೆನಡಿ ವಿಮಾನನಿಲ್ದಾಣದಿಂದ ನವದೆಹಲಿಗೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ ತರಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಹಾಗೇ, ನಾಳೆ (ಏಪ್ರಿಲ್​ 27)ರಂದು ಇನ್ನೊಂದು ವಿಮಾನ ಆಮ್ಲಜನಕವನ್ನು ಹೊತ್ತು ಭಾರತಕ್ಕೆ ಬರಲಿದೆ. ಕಳೆದ ವರ್ಷ ಅಲ್ಲಿನ ಅಧ್ಯಕ್ಷರಾಗಿದ್ದ ಡೊನಾಲ್ಡ್ ಟ್ರಂಪ್​ ಮನವಿ ಮೇರೆಗೆ 50 ಮಿಲಿಯನ್​ಗಳಷ್ಟು ಹೈಡ್ರಾಕ್ಸಿಕ್ಲೊರೋಕ್ವಿನ್​ನ್ನು ಅಮೆರಿಕಕ್ಕೆ ಕಳಿಸಿತ್ತು. ಇದೀಗ ಆ ಸಹಾಯವನ್ನು ನೆನಪಿಸಿಕೊಂಡಿರುವ ಜೋ ಬೈಡನ್​ ತಾವು ಈಗ ಭಾರತಕ್ಕೆ ಸಹಾಯ ಮಾಡಲು ನಿರ್ಧರಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಅಮೆರಿಕ ಉಪಾಧ್ಯಕ್ಷ ಕಮಲಾ ಹ್ಯಾರಿಸ್​ ಕೂಡ ಭಾರತದೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿದ್ದಾರೆ. ಭಾರತಕ್ಕೆ ಅಗತ್ಯ ಇರುವ ಸಹಾಯ ನೀಡುವ ಜತೆ, ಅಲ್ಲಿನ ಜನರು, ಆರೋಗ್ಯ ಕಾರ್ಯಕರ್ತರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇವೆ ಎಂದೂ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Oxygen Shortage: ಹರ್ಯಾಣದ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಸಿಗದೆ 5 ರೋಗಿಗಳು ಸಾವು

ಮಂಗಳೂರಿನಲ್ಲಿ ಬೈಕ್​ಗೆ ಶ್ವಾನವನ್ನು ಕಟ್ಟಿಕೊಂಡು ಧರಧರ ಎಳೆದೊಯ್ದ ಕಿರಾತಕರು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್, ಓರ್ವ ಬಂಧನ

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!