Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಿಂ ಪ್ರವಾಹ; 8 ಸೇನಾ ಸಿಬ್ಬಂದಿಗಳ ಮೃತದೇಹ ಪತ್ತೆಯಾಗಿದೆ: ರಾಜನಾಥ್ ಸಿಂಗ್

Flash floods in Sikkim: ಸಿಕ್ಕಿಂನಲ್ಲಿ ಹಿಮನದಿ ಸರೋವರ ಒಡೆದು ಇತ್ತೀಚೆಗೆ ಉಂಟಾದ ಪ್ರವಾಹದಲ್ಲಿ ಎಂಟು ಸೇನಾ ಸಿಬ್ಬಂದಿ ಸೇರಿದಂತೆ ಅಮೂಲ್ಯ ಜೀವಗಳ  ನಷ್ಟದಿಂದ ತೀವ್ರ ನೋವಾಗಿದೆ. ಕಾಣೆಯಾದ 23 ಸೈನಿಕರಲ್ಲಿ ಒಬ್ಬರನ್ನು ರಕ್ಷಿಸಲಾಯಿತು. ಎಂಟು ವೀರ ಸೈನಿಕರ ಮೃತದೇಹಗಳು ಸಿಕ್ಕಿವೆ. ಅವರ ತ್ಯಾಗ, ದೇಶ ಸೇವೆ ಮರೆಯಲಾಗದು ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಸಿಕ್ಕಿಂ ಪ್ರವಾಹ; 8 ಸೇನಾ ಸಿಬ್ಬಂದಿಗಳ ಮೃತದೇಹ ಪತ್ತೆಯಾಗಿದೆ: ರಾಜನಾಥ್ ಸಿಂಗ್
ಸಿಕ್ಕಿಂ ಪ್ರವಾಹ Image Credit source: PTI File
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 07, 2023 | 9:05 PM

ದೆಹಲಿ ಅಕ್ಟೋಬರ್ 07: ಸಿಕ್ಕಿಂನಲ್ಲಿ ಹಠಾತ್ ಪ್ರವಾಹದ ನಂತರ ನಾಪತ್ತೆಯಾಗಿದ್ದ ಸೈನಿಕರ ಗುಂಪಿನ ಭಾಗವಾಗಿದ್ದ ಎಂಟು ಸೇನಾ ಸಿಬ್ಬಂದಿಯ ಮೃತದೇಹ ಪತ್ತೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ. ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಬುಧವಾರ ಭಾರಿ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅದೇ ದಿನ ಒಬ್ಬ ಯೋಧನನ್ನು ರಕ್ಷಿಸಲಾಗಿತ್ತು

ಹಠಾತ್ ಪ್ರವಾಹದಲ್ಲಿ ಎಂಟು ಸೇನಾ ಸಿಬ್ಬಂದಿ ಸೇರಿದಂತೆ ಅಮೂಲ್ಯ ಜೀವಗಳ ದುರಂತದ ನಷ್ಟದಿಂದ ನನಗೆ ತೀವ್ರ ನೋವಾಗಿದೆ. ಉಳಿದ 14 ಯೋಧರು ಮತ್ತು ನಾಪತ್ತೆಯಾಗಿರುವ ನಾಗರಿಕರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

“ಸಿಕ್ಕಿಂನಲ್ಲಿ ಹಿಮನದಿ ಸರೋವರ ಒಡೆದು ಇತ್ತೀಚೆಗೆ ಉಂಟಾದ ಪ್ರವಾಹದಲ್ಲಿ ಎಂಟು ಸೇನಾ ಸಿಬ್ಬಂದಿ ಸೇರಿದಂತೆ ಅಮೂಲ್ಯ ಜೀವಗಳ  ನಷ್ಟದಿಂದ ತೀವ್ರ ನೋವಾಗಿದೆ. ಕಾಣೆಯಾದ 23 ಸೈನಿಕರಲ್ಲಿ ಒಬ್ಬರನ್ನು ರಕ್ಷಿಸಲಾಯಿತು. ಎಂಟು ವೀರ ಸೈನಿಕರ ಮೃತದೇಹಗಳು ಸಿಕ್ಕಿವೆ. ಅವರ ತ್ಯಾಗ, ದೇಶ ಸೇವೆ ಮರೆಯಲಾಗದು. ಉಳಿದ 14 ಸೈನಿಕರು ಮತ್ತು ಕಾಣೆಯಾದ ನಾಗರಿಕರನ್ನು ರಕ್ಷಿಸಲು ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

ಇದನ್ನೂ ಓದಿಸಿಕ್ಕಿಂನಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 56ಕ್ಕೆ ಏರಿಕೆ, ನಾಪತ್ತೆಯಾದ 142 ಜನ

ಹಠಾತ್ ಪ್ರವಾಹವು 25,000 ಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. 1,200 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿ. ಸಿಕ್ಕಿಂನಲ್ಲಿ 13 ಸೇತುವೆಗಳು ಕೊಚ್ಚಿಹೋಗಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ