AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಿಂ ಪ್ರವಾಹ; 8 ಸೇನಾ ಸಿಬ್ಬಂದಿಗಳ ಮೃತದೇಹ ಪತ್ತೆಯಾಗಿದೆ: ರಾಜನಾಥ್ ಸಿಂಗ್

Flash floods in Sikkim: ಸಿಕ್ಕಿಂನಲ್ಲಿ ಹಿಮನದಿ ಸರೋವರ ಒಡೆದು ಇತ್ತೀಚೆಗೆ ಉಂಟಾದ ಪ್ರವಾಹದಲ್ಲಿ ಎಂಟು ಸೇನಾ ಸಿಬ್ಬಂದಿ ಸೇರಿದಂತೆ ಅಮೂಲ್ಯ ಜೀವಗಳ  ನಷ್ಟದಿಂದ ತೀವ್ರ ನೋವಾಗಿದೆ. ಕಾಣೆಯಾದ 23 ಸೈನಿಕರಲ್ಲಿ ಒಬ್ಬರನ್ನು ರಕ್ಷಿಸಲಾಯಿತು. ಎಂಟು ವೀರ ಸೈನಿಕರ ಮೃತದೇಹಗಳು ಸಿಕ್ಕಿವೆ. ಅವರ ತ್ಯಾಗ, ದೇಶ ಸೇವೆ ಮರೆಯಲಾಗದು ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಸಿಕ್ಕಿಂ ಪ್ರವಾಹ; 8 ಸೇನಾ ಸಿಬ್ಬಂದಿಗಳ ಮೃತದೇಹ ಪತ್ತೆಯಾಗಿದೆ: ರಾಜನಾಥ್ ಸಿಂಗ್
ಸಿಕ್ಕಿಂ ಪ್ರವಾಹ Image Credit source: PTI File
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 07, 2023 | 9:05 PM

Share

ದೆಹಲಿ ಅಕ್ಟೋಬರ್ 07: ಸಿಕ್ಕಿಂನಲ್ಲಿ ಹಠಾತ್ ಪ್ರವಾಹದ ನಂತರ ನಾಪತ್ತೆಯಾಗಿದ್ದ ಸೈನಿಕರ ಗುಂಪಿನ ಭಾಗವಾಗಿದ್ದ ಎಂಟು ಸೇನಾ ಸಿಬ್ಬಂದಿಯ ಮೃತದೇಹ ಪತ್ತೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ. ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಬುಧವಾರ ಭಾರಿ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅದೇ ದಿನ ಒಬ್ಬ ಯೋಧನನ್ನು ರಕ್ಷಿಸಲಾಗಿತ್ತು

ಹಠಾತ್ ಪ್ರವಾಹದಲ್ಲಿ ಎಂಟು ಸೇನಾ ಸಿಬ್ಬಂದಿ ಸೇರಿದಂತೆ ಅಮೂಲ್ಯ ಜೀವಗಳ ದುರಂತದ ನಷ್ಟದಿಂದ ನನಗೆ ತೀವ್ರ ನೋವಾಗಿದೆ. ಉಳಿದ 14 ಯೋಧರು ಮತ್ತು ನಾಪತ್ತೆಯಾಗಿರುವ ನಾಗರಿಕರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

“ಸಿಕ್ಕಿಂನಲ್ಲಿ ಹಿಮನದಿ ಸರೋವರ ಒಡೆದು ಇತ್ತೀಚೆಗೆ ಉಂಟಾದ ಪ್ರವಾಹದಲ್ಲಿ ಎಂಟು ಸೇನಾ ಸಿಬ್ಬಂದಿ ಸೇರಿದಂತೆ ಅಮೂಲ್ಯ ಜೀವಗಳ  ನಷ್ಟದಿಂದ ತೀವ್ರ ನೋವಾಗಿದೆ. ಕಾಣೆಯಾದ 23 ಸೈನಿಕರಲ್ಲಿ ಒಬ್ಬರನ್ನು ರಕ್ಷಿಸಲಾಯಿತು. ಎಂಟು ವೀರ ಸೈನಿಕರ ಮೃತದೇಹಗಳು ಸಿಕ್ಕಿವೆ. ಅವರ ತ್ಯಾಗ, ದೇಶ ಸೇವೆ ಮರೆಯಲಾಗದು. ಉಳಿದ 14 ಸೈನಿಕರು ಮತ್ತು ಕಾಣೆಯಾದ ನಾಗರಿಕರನ್ನು ರಕ್ಷಿಸಲು ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

ಇದನ್ನೂ ಓದಿಸಿಕ್ಕಿಂನಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 56ಕ್ಕೆ ಏರಿಕೆ, ನಾಪತ್ತೆಯಾದ 142 ಜನ

ಹಠಾತ್ ಪ್ರವಾಹವು 25,000 ಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. 1,200 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿ. ಸಿಕ್ಕಿಂನಲ್ಲಿ 13 ಸೇತುವೆಗಳು ಕೊಚ್ಚಿಹೋಗಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ