AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಗೆ ಬಂದಿಳಿದ ಫ್ರಾನ್ಸ್​ ವಶದಲ್ಲಿದ್ದ ಭಾರತೀಯ ಪ್ರಯಾಣಿಕರಿದ್ದ ವಿಮಾನ

ಮಾನವ ಕಳ್ಳಸಾಗಣೆ (Human trafficking) ಆರೋಪದ ಮೇಲೆ ಪ್ಯಾರಿಸ್ (Paris) ವಶದಲ್ಲಿದ್ದ ಸುಮಾರು 270 ಭಾರತೀಯ ಪ್ರಯಾಣಿಕರೊಂದಿಗೆ ಬಂಧನಕ್ಕೊಳಗಾಗಿದ್ದ ವಿಮಾನ ಮುಂಬೈಗೆ ಬಂದಿಳಿದಿದೆ. ಮಾನವ ಕಳ್ಳಸಾಗಣೆ ಶಂಕೆಯ ಮೇರೆಗೆ ಪ್ಯಾರಿಸ್ ಸಮೀಪದ ವತ್ರಿ ವಿಮಾನ ನಿಲ್ದಾಣದಲ್ಲಿ ನಾಲ್ಕು ದಿನಗಳ ಕಾಲ ನಿಲ್ಲಿಸಲಾಗಿದ್ದ ವಿಮಾನ ಕೊನೆಗೂ ಮಂಗಳವಾರ ಮುಂಜಾನೆ ಮುಂಬೈ ತಲುಪಿದೆ.

ಮುಂಬೈಗೆ ಬಂದಿಳಿದ ಫ್ರಾನ್ಸ್​ ವಶದಲ್ಲಿದ್ದ ಭಾರತೀಯ ಪ್ರಯಾಣಿಕರಿದ್ದ ವಿಮಾನ
ವಿಮಾನImage Credit source: NDTV
ನಯನಾ ರಾಜೀವ್
|

Updated on: Dec 26, 2023 | 7:52 AM

Share

ಮಾನವ ಕಳ್ಳಸಾಗಣೆ (Human trafficking) ಆರೋಪದ ಮೇಲೆ ಪ್ಯಾರಿಸ್ (Paris) ವಶದಲ್ಲಿದ್ದ ಸುಮಾರು 270 ಭಾರತೀಯ ಪ್ರಯಾಣಿಕರೊಂದಿಗೆ ಬಂಧನಕ್ಕೊಳಗಾಗಿದ್ದ ವಿಮಾನ ಮುಂಬೈಗೆ ಬಂದಿಳಿದಿದೆ. ಮಾನವ ಕಳ್ಳಸಾಗಣೆ ಶಂಕೆಯ ಮೇರೆಗೆ ಪ್ಯಾರಿಸ್ ಸಮೀಪದ ವತ್ರಿ ವಿಮಾನ ನಿಲ್ದಾಣದಲ್ಲಿ ನಾಲ್ಕು ದಿನಗಳ ಕಾಲ ನಿಲ್ಲಿಸಲಾಗಿದ್ದ ವಿಮಾನ ಕೊನೆಗೂ ಮಂಗಳವಾರ ಮುಂಜಾನೆ ಮುಂಬೈ ತಲುಪಿದೆ.

ಈ ಮೊದಲು ಈ ವಿಮಾನವು ಸೋಮವಾರ ಮಧ್ಯಾಹ್ನ 2:20 ಕ್ಕೆ ಮುಂಬೈ ತಲುಪಬೇಕಾಗಿತ್ತು, ಆದರೆ ಅದು ತಡವಾಯಿತು. ವಿಮಾನದಲ್ಲಿದ್ದ 50 ಪ್ರಯಾಣಿಕರು ಫ್ರಾನ್ಸ್‌ನಲ್ಲಿ ಆಶ್ರಯಕ್ಕಾಗಿ ಅರ್ಜಿ ಸಲ್ಲಿಸಿದ ಕಾರಣ ಹಿಂತಿರುಗಲು ಬಯಸುವುದಿಲ್ಲ ಎಂದು ಹೇಳಲಾಗಿದೆ. ನಂತರ ಕೆಲವು ಪ್ರಯಾಣಿಕರನ್ನು ಬಿಟ್ಟು ವಿಮಾನ ಮುಂಬೈಗೆ ಹೊರಟಿತು. ಆದರೆ, ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ರೊಮೇನಿಯಾದ ಲೆಜೆಂಡ್ ಏರ್‌ಲೈನ್ಸ್‌ನ ಈ ವಿಮಾನವು 303 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು, ಅವರಲ್ಲಿ ಹೆಚ್ಚಿನವರು ಭಾರತೀಯರು. ವಿಮಾನವು ದುಬೈನಿಂದ ನಿಕರಾಗುವಾಗೆ ಹೊರಟು ತೈಲ ತುಂಬಲು ಫ್ರಾನ್ಸ್‌ನ ವತ್ರಿ ವಿಮಾನ ನಿಲ್ದಾಣದಲ್ಲಿ ಗುರುವಾರ ಬಂದಿಳಿದಿತ್ತು. ಈ ಸಮಯದಲ್ಲಿ, ಮಾನವ ಕಳ್ಳಸಾಗಣೆಯ ಬಲಿಪಶುಗಳನ್ನು ಅದರಲ್ಲಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿಯನ್ನು ಫ್ರೆಂಚ್ ಅಧಿಕಾರಿಗಳಿಗೆ ಬಂದಿತ್ತು.

ಮಂಗಳವಾರ ಬೆಳಗ್ಗೆ ಭಾರತಕ್ಕೆ ತಲುಪಲಿದೆ ಫ್ರಾನ್ಸ್ ವಶದಲ್ಲಿದ್ದ ಭಾರತೀಯ ಪ್ರಯಾಣಿಕರ ವಿಮಾನ

ಆದ್ದರಿಂದ ವಿಮಾನವನ್ನು ಟೇಕ್ ಆಫ್ ಮಾಡುವುದನ್ನು ತಡೆಹಿಡಿಯಲಾಯಿತು. ವಿಚಾರಣೆ ನಡೆಸಿದ ಬಳಿಕ ಫ್ರೆಂಚ್ ಅಧಿಕಾರಿಗಳು ಈ A340 ವಿಮಾನಕ್ಕೆ ಪ್ರಯಾಣವನ್ನು ಪುನರಾರಂಭಿಸಲು ಅನುಮತಿ ನೀಡಿದರು.

ಕೆಲವು ಪ್ರಯಾಣಿಕರು ಮಧ್ಯ ಅಮೆರಿಕದ ನಿಕರಾಗುವಾಗೆ ತಮ್ಮ ಪ್ರಯಾಣವನ್ನು ಮುಂದುವರಿಸಲು ಬಯಸಿದ್ದಾರೆ ಎಂದು ಫ್ರೆಂಚ್ ಮಾಧ್ಯಮವು ಸೋಮವಾರ ವರದಿ ಮಾಡಿದೆ.

ವಿಮಾನ ನಿಲ್ದಾಣದಲ್ಲಿಯೇ ಎಲ್ಲಾ ಜನರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಮಾಡಿತ್ತು. ಮಕ್ಕಳ ಶಿಕ್ಷಣಕ್ಕಾಗಿ ಶಿಕ್ಷಕರನ್ನು ನೇಮಿಸಲಾಗಿತ್ತು. ವಿಮಾನವನ್ನು ನಿರ್ವಹಿಸುವ ಖಾಸಗಿ ಜೆಟ್‌ನ ಸಿಬ್ಬಂದಿ ಸದಸ್ಯರನ್ನು ಫ್ರಾನ್ಸ್ ಕೂಡ ವಿಚಾರಣೆ ನಡೆಸಿತ್ತು. ಇದಾದ ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ