AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Rain: ಗುಜರಾತ್, ತೆಲಂಗಾಣದಲ್ಲಿ ಇಂದು ಭಾರಿ ಮಳೆ ನಿರೀಕ್ಷಿತ; ದೆಹಲಿಗೆ ತಂಪೆರೆಯಲಿದ್ದಾನೆ ವರುಣ

ಗುಜರಾತ್, ತೆಲಂಗಾಣದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದೆಹಲಿಯಲ್ಲೂ ವರಣು ತಂಪೆರೆಯಲಿದ್ದಾನೆ. ಗುಜರಾತ್‌ನ ದಕ್ಷಿಣ ಮತ್ತು ಕೇಂದ್ರ ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

India Rain: ಗುಜರಾತ್, ತೆಲಂಗಾಣದಲ್ಲಿ ಇಂದು ಭಾರಿ ಮಳೆ ನಿರೀಕ್ಷಿತ; ದೆಹಲಿಗೆ ತಂಪೆರೆಯಲಿದ್ದಾನೆ ವರುಣ
ಗುಜರಾಜ್ ಮಳೆ ಅವಾಂತರImage Credit source: ANI
TV9 Web
| Edited By: |

Updated on: Jul 12, 2022 | 7:44 AM

Share

ದೆಹಲಿ: ತೆಲಂಗಾಣದ ಭಾರಿ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಎಲ್ಲ ಸಚಿವರು, ಅಧಿಕಾರಿಗಳು ಮತ್ತು ಶಾಸಕರು ತಮ್ಮ ನಿಯೋಜಿತ ಸ್ಥಳದಲ್ಲಿಯೇ ಇದ್ದು ಜನರಿಗೆ ನೆರವಾಗಬೇಕು ಎಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಸೂಚಿಸಿದ್ದಾರೆ. ನಲ್ಗೊಂಡ, ಸೂರ್ಯಪೇಟೆ, ಮೆಹಬೂಬಾಬಾದ್, ಜಾನ್‌ಗಾವ್, ಯಾದಗಿರಿ ಮತ್ತು ಭುವನಗಿರಿ ಜಿಲ್ಲೆಗಳಲ್ಲಿ ಮಂಗಳವಾರ ಮುಂಜಾನೆಯಿಂದ ಮಳೆ ಜೋರಾಗಿದೆ. ಸಿದ್ದಿಪೇಟೆ, ಸಂಗಾರೆಡ್ಡಿ ಮತ್ತು ಮೇದಕ್ ಜಿಲ್ಲೆಗಳಲ್ಲಿ ಜುಲೈ 12ರಂದು ಬೆಳಿಗ್ಗೆ 8.30ರಿಂದ ತೀವ್ರ ಮತ್ತು ಅತಿ ತೀವ್ರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Karnataka Rain: ಕೊಡಗಿನಲ್ಲಿ ಭಾರಿ ಮಳೆ, ಶಾಲೆಗಳಿಗೆ ಇಂದು ರಜೆ, ಸಿಎಂ ಬೊಮ್ಮಾಯಿ ಜಿಲ್ಲೆಗೆ ದೌಡು

ದೆಹಲಿಯ ವಿವಿಧೆಡೆ ಸೋಮವಾರ ಮಳೆ ಸುರಿಯಿತು. ಕಳೆದ ಒಂದು ವಾರದಿಂದ ಬಿಸಿಲು ಮತ್ತು ಉಷ್ಣಾಂಶ ಹೆಚ್ಚಳದಿಂದ ಬೇಸತ್ತಿದ್ದ ಜನರಿಗೆ ಮಳೆಯಿಂದ ತುಸು ನೆಮ್ಮದಿ ದೊರೆಯಿತು. ಆದರೆ ಸಂಜೆಯ ಹೊತ್ತಿಗೆ ಮತ್ತೆ ಉಷ್ಣಾಂಶ ಹೆಚ್ಚಾಗಿ 27.1 ಡಿಗ್ರಿ ಸೆಲ್ಸಿಯಸ್ ಮುಟ್ಟಿತು. ಪ್ರತಿ ವರ್ಷ ಈ ಅವಧಿಯಲ್ಲಿ ದೆಹಲಿಯಲ್ಲಿ ದಾಖಲಾಗುವ ಸರಾಸರಿ ಉಷ್ಣಾಂಶ ಇದು. ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ ಶುಭ್ರ ಆಗಸ ಇರಲಿದ್ದು, ಚದುರಿದಂತೆ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶವು 36 ಡಿಗ್ರಿ ಸೆಲ್ಸಿಯಸ್ ಮುಟ್ಟುವ ಸಾಧ್ಯತೆಯಿದೆ.

ಇದನ್ನೂ ಓದಿ: Viral Video: ಮಳೆಯೊಂದಿಗೆ ಭೂಮಿಗೆ ಬಿದ್ದ ಮೀನುಗಳು! ಅಪರೂಪದ ಹವಾಮಾನ ವಿದ್ಯಮಾನಕ್ಕೆ ಸಾಕ್ಷಿಯಾದ ತೆಲಂಗಾಣ

ಗುಜರಾತ್‌ನ ದಕ್ಷಿಣ ಮತ್ತು ಕೇಂದ್ರ ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಂಗಳವಾರವೂ ಗುಜರಾತ್‌ನ ಡಾಂಗ್, ನವ್‌ಸಾರಿ, ವಲ್‌ಸದ್, ತಾಪಿ ಮತ್ತು ಸೂರತ್‌ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು. ಇದೇ ಪರಿಸ್ಥಿತಿ ಮುಂದಿನ ಐದು ದಿನಗಳವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಗುಜರಾತ್‌ನ ಹಲವು ಗ್ರಾಮಗಳು ಹೊರಜಗತ್ತಿನ ಸಂಪರ್ಕವನ್ನು ಸಂಪೂರ್ಣವಾಗಿ ಕಡಿದುಕೊಂಡಿವೆ. ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ಅನಾಹುತಗಳಿಂದ ಹಲವರು ಸಾವನ್ನಪ್ಪಿದ್ದಾರೆ. ಈವರೆಗೆ ಗುಜರಾತ್‌ನಲ್ಲಿ ಮಳೆಯಿಂದಾಗಿ 63 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಸಚಿವ ರಾಜೇಂದ್ರ ತ್ರಿವೇದಿ ಹೇಳಿದ್ದಾರೆ. ಹಠಾತ್ ಪ್ರವಾಹದಿಂದಾಗಿ ಸಮಸ್ಯೆ ಉಂಟಾಗಿದೆ. ಕೇವಲ ನಾಲ್ಕು ಗಂಟೆಗಳ ಅವಧಿಯಲ್ಲಿ 4 ಇಂಚು (101 ಮಿಮೀ) ಮಳೆಯಾಗಿದ್ದು ಇದಕ್ಕೆ ಮುಖ್ಯಕಾರಣ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಗುಜರಾತ್‌ನ ಜನರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:ಕ್ರೈಸ್ತ ಸಂಸ್ಥೆ, ಪಾದ್ರಿಗಳ ಮೇಲಿನ ದಾಳಿ ಆರೋಪ: ಜುಲೈ 15ರಂದು ಸುಪ್ರೀಂನಲ್ಲಿ ಅರ್ಜಿ ವಿಚಾರಣೆ

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ