AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3C Formula: ಸುರಕ್ಷಿತ ಭಾರತಕ್ಕಾಗಿ ‘3C’ ಸೂತ್ರ, ಪರಸ್ಪರ ಸಹಕಾರದ ತತ್ವವನ್ನು ಪಾಲಿಸಿ: ಅಮಿತ್‌ ಶಾ

Amit Shah: ಸುರಕ್ಷಿತ ಭಾರತಕ್ಕಾಗಿ '3C' ಸೂತ್ರವನ್ನು ಮುಂದಿಟ್ಟಿರುವ ಅಮಿತ್ ಶಾ, ಜಂಟಿ ಪ್ರಯತ್ನಗಳ ಮಹತ್ವವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.ದೇಶದಲ್ಲಿ ಅಪರಾಧ ಮುಕ್ತ ಮತ್ತು ಸುರಕ್ಷಿತ ಭಾರತವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಕ್ರಮವನ್ನು ತರಲಾಗಿದೆ.

3C Formula: ಸುರಕ್ಷಿತ ಭಾರತಕ್ಕಾಗಿ '3C' ಸೂತ್ರ, ಪರಸ್ಪರ ಸಹಕಾರದ ತತ್ವವನ್ನು ಪಾಲಿಸಿ: ಅಮಿತ್‌ ಶಾ
Follow the '3C' formula, principle of mutual cooperation for a secure India: Amit Shah
TV9 Web
| Edited By: |

Updated on:Oct 27, 2022 | 6:40 PM

Share

ಸೂರಜ್‌ಕುಂಡ್: ದೇಶದಲ್ಲಿ ಅಪರಾಧ ಮುಕ್ತ ಮತ್ತು ಸುರಕ್ಷಿತ ಭಾರತವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ, ಕೇಂದ್ರ ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಗೃಹ ಇಲಾಖೆಗಳು ಪರಸ್ಪರ ಸಹಕಾರದ ತತ್ವವನ್ನು ಪಾಲಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿಪ್ರಾಯಪಟ್ಟಿದ್ದಾರೆ. ಸುರಕ್ಷಿತ ಭಾರತಕ್ಕಾಗಿ ‘3C’ ಸೂತ್ರವನ್ನು ಮುಂದಿಟ್ಟಿರುವ ಅಮಿತ್ ಶಾ, ಜಂಟಿ ಪ್ರಯತ್ನಗಳ ಮಹತ್ವವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ನಾವು ಸಮನ್ವಯ, ಸಹಕಾರ ಹಾಗೂ ಸಹಯೋಗಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು, ದೇಶದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟಬೇಕು. ಈ ಮೂಲಕ ಒಕ್ಕೂಟ ತತ್ವದ ಗುರಿಗಳನ್ನು ತಲುಪಲು ಪ್ರಯತ್ನಿಸಬೇಕು ಎಂದು ಅಮಿತ್‌ ಶಾ ಹೇಳಿದ್ದಾರೆ. ನಮ್ಮ ದೇಶದ ಸಂಪನ್ಮೂಲ ಕ್ರೂಢೀಕರಣ ಮತ್ತು ಏಕೀಕರಣ ಕೂಡ ನಮ್ಮ ಪ್ರಮುಖ ಗುರಿಯಾಗಿದೆ. ಇದರಲ್ಲಿ ನಾವು ಮಹತ್ವದ ಪಾತ್ರವನ್ನು ನಿರ್ವಹಿಸುತ್ತವೆ ಎಂದು ಅಮಿತ್‌ ಶಾ ಹೇಳಿದರು. ದೇಶದಲ್ಲಿರುವ ಎಲ್ಲಾ ಗೃಹ ಇಲಾಖೆಗಳೂ ಒಂದು ನಿರ್ದಿಷ್ಟ ಗುರಿಯೊಂದಿಗೆ ಒಟ್ಟಾಗಿ ಕೆಲಸ ಮಾಡುವುದು ಅತ್ಯಂತ ಮುಖ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ANI ಸುದ್ಧು ಸಂಸ್ಥೆ ವರದಿ ಮಾಡಿದೆ.

ನಮ್ಮ ದೇಶದಲ್ಲಿರುವ ಎನ್ಐಎಗೆ ವಿದೇಶಿ ಹಕ್ಕುಗಳನ್ನು ನೀಡಲಾಗಿದೆ. 2024ರ ವೇಳೆಗೆ ಪ್ರತಿ ರಾಜ್ಯದಲ್ಲೂ ಎನ್‌ಐಎ ಶಾಖೆಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಅಮಿತ್‌ ಶಾ ಇದೇ ವೇಳೆ ಮಾಹಿತಿ ನೀಡಿದರು. ಈ ಚಿಂತನ ಶಿಬಿರವು ಸೈಬರ್ ಅಪರಾಧಗಳು, ಮಾದಕ ದ್ರವ್ಯಗಳು, ಗಡಿಯಾಚೆಗಿನ ಭಯೋತ್ಪಾದನೆ, ದೇಶದ್ರೋಹ ಮತ್ತು ಇತರ ಸಾಮಾಜಿಕ ಪಿಡುಗುಗಳನ್ನು ಎದುರಿಸಲು ಜಂಟಿ ಯೋಜನೆಯನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಎಂದು ಅಮಿತ್‌ ಶಾ ಹೇಳಿದರು.

Published On - 6:39 pm, Thu, 27 October 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?