AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3C Formula: ಸುರಕ್ಷಿತ ಭಾರತಕ್ಕಾಗಿ ‘3C’ ಸೂತ್ರ, ಪರಸ್ಪರ ಸಹಕಾರದ ತತ್ವವನ್ನು ಪಾಲಿಸಿ: ಅಮಿತ್‌ ಶಾ

Amit Shah: ಸುರಕ್ಷಿತ ಭಾರತಕ್ಕಾಗಿ '3C' ಸೂತ್ರವನ್ನು ಮುಂದಿಟ್ಟಿರುವ ಅಮಿತ್ ಶಾ, ಜಂಟಿ ಪ್ರಯತ್ನಗಳ ಮಹತ್ವವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.ದೇಶದಲ್ಲಿ ಅಪರಾಧ ಮುಕ್ತ ಮತ್ತು ಸುರಕ್ಷಿತ ಭಾರತವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಕ್ರಮವನ್ನು ತರಲಾಗಿದೆ.

3C Formula: ಸುರಕ್ಷಿತ ಭಾರತಕ್ಕಾಗಿ '3C' ಸೂತ್ರ, ಪರಸ್ಪರ ಸಹಕಾರದ ತತ್ವವನ್ನು ಪಾಲಿಸಿ: ಅಮಿತ್‌ ಶಾ
Follow the '3C' formula, principle of mutual cooperation for a secure India: Amit Shah
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 27, 2022 | 6:40 PM

Share

ಸೂರಜ್‌ಕುಂಡ್: ದೇಶದಲ್ಲಿ ಅಪರಾಧ ಮುಕ್ತ ಮತ್ತು ಸುರಕ್ಷಿತ ಭಾರತವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ, ಕೇಂದ್ರ ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಗೃಹ ಇಲಾಖೆಗಳು ಪರಸ್ಪರ ಸಹಕಾರದ ತತ್ವವನ್ನು ಪಾಲಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿಪ್ರಾಯಪಟ್ಟಿದ್ದಾರೆ. ಸುರಕ್ಷಿತ ಭಾರತಕ್ಕಾಗಿ ‘3C’ ಸೂತ್ರವನ್ನು ಮುಂದಿಟ್ಟಿರುವ ಅಮಿತ್ ಶಾ, ಜಂಟಿ ಪ್ರಯತ್ನಗಳ ಮಹತ್ವವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ನಾವು ಸಮನ್ವಯ, ಸಹಕಾರ ಹಾಗೂ ಸಹಯೋಗಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು, ದೇಶದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟಬೇಕು. ಈ ಮೂಲಕ ಒಕ್ಕೂಟ ತತ್ವದ ಗುರಿಗಳನ್ನು ತಲುಪಲು ಪ್ರಯತ್ನಿಸಬೇಕು ಎಂದು ಅಮಿತ್‌ ಶಾ ಹೇಳಿದ್ದಾರೆ. ನಮ್ಮ ದೇಶದ ಸಂಪನ್ಮೂಲ ಕ್ರೂಢೀಕರಣ ಮತ್ತು ಏಕೀಕರಣ ಕೂಡ ನಮ್ಮ ಪ್ರಮುಖ ಗುರಿಯಾಗಿದೆ. ಇದರಲ್ಲಿ ನಾವು ಮಹತ್ವದ ಪಾತ್ರವನ್ನು ನಿರ್ವಹಿಸುತ್ತವೆ ಎಂದು ಅಮಿತ್‌ ಶಾ ಹೇಳಿದರು. ದೇಶದಲ್ಲಿರುವ ಎಲ್ಲಾ ಗೃಹ ಇಲಾಖೆಗಳೂ ಒಂದು ನಿರ್ದಿಷ್ಟ ಗುರಿಯೊಂದಿಗೆ ಒಟ್ಟಾಗಿ ಕೆಲಸ ಮಾಡುವುದು ಅತ್ಯಂತ ಮುಖ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ANI ಸುದ್ಧು ಸಂಸ್ಥೆ ವರದಿ ಮಾಡಿದೆ.

ನಮ್ಮ ದೇಶದಲ್ಲಿರುವ ಎನ್ಐಎಗೆ ವಿದೇಶಿ ಹಕ್ಕುಗಳನ್ನು ನೀಡಲಾಗಿದೆ. 2024ರ ವೇಳೆಗೆ ಪ್ರತಿ ರಾಜ್ಯದಲ್ಲೂ ಎನ್‌ಐಎ ಶಾಖೆಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಅಮಿತ್‌ ಶಾ ಇದೇ ವೇಳೆ ಮಾಹಿತಿ ನೀಡಿದರು. ಈ ಚಿಂತನ ಶಿಬಿರವು ಸೈಬರ್ ಅಪರಾಧಗಳು, ಮಾದಕ ದ್ರವ್ಯಗಳು, ಗಡಿಯಾಚೆಗಿನ ಭಯೋತ್ಪಾದನೆ, ದೇಶದ್ರೋಹ ಮತ್ತು ಇತರ ಸಾಮಾಜಿಕ ಪಿಡುಗುಗಳನ್ನು ಎದುರಿಸಲು ಜಂಟಿ ಯೋಜನೆಯನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಎಂದು ಅಮಿತ್‌ ಶಾ ಹೇಳಿದರು.

Published On - 6:39 pm, Thu, 27 October 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ