AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರ ಎಚ್ಚರಿಕೆಯ ಬೆನ್ನಲ್ಲೇ ಸನ್ನಿ ಲಿಯೋನ್​​ನ ಮಧುಬನ್ ಹಾಡಿನ ಸಾಹಿತ್ಯ ಬದಲಿಸಲು ನಿರ್ಧಾರ

"ಕೆಲವು ವಿಧರ್ಮಿಗಳು ನಿರಂತರವಾಗಿ ಹಿಂದೂ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ. 'ಮಧುಬನ್ ಮೇ ರಾಧಿಕಾ ನಾಚೆ' ವಿಡಿಯೊ ಅಂತಹ ಒಂದು ಖಂಡನೀಯ ಪ್ರಯತ್ನವಾಗಿದೆ. ನಾನು ಸನ್ನಿ ಲಿಯೋನ್ ಜಿ, ಶರೀಬ್ ಮತ್ತು ತೋಶಿ ಜಿ ಅವರಿಗೆ ಅರ್ಥಮಾಡಿಕೊಳ್ಳಲು ಎಚ್ಚರಿಕೆ ನೀಡುತ್ತಿದ್ದೇನೆ.

ಸಚಿವರ ಎಚ್ಚರಿಕೆಯ ಬೆನ್ನಲ್ಲೇ ಸನ್ನಿ ಲಿಯೋನ್​​ನ ಮಧುಬನ್ ಹಾಡಿನ ಸಾಹಿತ್ಯ ಬದಲಿಸಲು ನಿರ್ಧಾರ
ಸನ್ನಿ ಲಿಯೋನ್
TV9 Web
| Edited By: |

Updated on:Dec 26, 2021 | 8:18 PM

Share

ದೆಹಲಿ: ಮಧ್ಯಪ್ರದೇಶದ (Madhya Pradesh) ಗೃಹ ಸಚಿವ ನರೋತ್ತಮ್ ಮಿಶ್ರಾ(Narottam Mishra) ಅವರು ಸನ್ನಿ ಲಿಯೋನ್  (Sunny Leone)ಮತ್ತು ಇತ್ತೀಚೆಗೆ ಬಿಡುಗಡೆಯಾದ ಮ್ಯೂಸಿಕ್ ವಿಡಿಯೊ ಮಧುಬನ್‌ನ (Madhuban)ಗಾಯಕರಿಗೆ ಎಚ್ಚರಿಕೆ ನೀಡಿದ ನಂತರ, ಕಂಪನಿಯು ಸಾಹಿತ್ಯವನ್ನು ಬದಲಾಯಿಸಲಿದೆ ಎಂದು ಸಂಗೀತ ಕಂಪನಿ ಸರೆಗಮ(Saregama) ಭಾನುವಾರ ತಿಳಿಸಿದೆ. “ಇತ್ತೀಚಿನ ಪ್ರತಿಕ್ರಿಯೆಯ ಬೆಳಕಿನಲ್ಲಿ ಮತ್ತು ನಮ್ಮ ದೇಶವಾಸಿಗಳ ಭಾವನೆಗಳನ್ನು ಗೌರವಿಸಿ, ನಾವು ಮಧುಬನ್ ಹಾಡಿನ ಸಾಹಿತ್ಯ ಮತ್ತು ಹೆಸರನ್ನು ಬದಲಾಯಿಸುತ್ತೇವೆ” ಎಂದು ಸಂಗೀತ ಸಂಸ್ಥೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಮುಂದಿನ 3 ದಿನಗಳಲ್ಲಿ ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ ಹಳೆಯ ಹಾಡನ್ನು ಬದಲಾಯಿಸಿ ಹೊಸ ಹಾಡು ಅಪ್ಲೋಡ್ ಮಾಡಲಾಗುತ್ತದೆ” ಎಂದು ಸರೆಗಮ ಹೇಳಿದೆ. ಡಿಸೈನರ್ ಸಬ್ಯಸಾಚಿ ಮುಖರ್ಜಿ ಅವರ ಮಂಗಳಸೂತ್ರ ಜಾಹೀರಾತನ್ನು ಹಿಂತೆಗೆದುಕೊಳ್ಳುವಂತೆ ಮಾಡಿದ ನರೋತ್ತಮ್ ಮಿಶ್ರಾ ಅವರು ಸನ್ನಿ ಲಿಯೋನ್ ಮತ್ತು ಸಂಗೀತ ವಿಡಿಯೊದ ಗಾಯಕರಿಗೆ ಕ್ಷಮೆಯಾಚಿಸುವಂತೆ ಮತ್ತು ಮೂರು ದಿನಗಳಲ್ಲಿ ವಿಡಿಯೊವನ್ನು ಹಿಂತೆಗೆದುಕೊಳ್ಳುವಂತೆ ಎಚ್ಚರಿಸಿದ್ದಾರೆ. ಇದನ್ನು ಮಾಡಲು ವಿಫಲವಾದರೆ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದ್ದರು. ಎಚ್ಚರಿಕೆಯ ಬೆನ್ನಲ್ಲೇ ಪ್ರತಿಕ್ರಿಯಿಸಿದ ಕಂಪನಿ ವಿಡಿಯೊವನ್ನು ಬದಲಾಯಿಸಲಾಗುವುದು ಎಂದು ಹೇಳಿದೆ. ಸಚಿವರ ಬೆದರಿಕೆಯನ್ನು ಉಲ್ಲೇಖಿಸದೆ ಇತ್ತೀಚಿನ ಪ್ರತಿಕ್ರಿಯೆಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕಂಪನಿ ಹೇಳಿದೆ.

“ಕೆಲವು ವಿಧರ್ಮಿಗಳು ನಿರಂತರವಾಗಿ ಹಿಂದೂ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ. ‘ಮಧುಬನ್ ಮೇ ರಾಧಿಕಾ ನಾಚೆ’ ವಿಡಿಯೊ ಅಂತಹ ಒಂದು ಖಂಡನೀಯ ಪ್ರಯತ್ನವಾಗಿದೆ. ನಾನು ಸನ್ನಿ ಲಿಯೋನ್ ಜಿ, ಶರೀಬ್ ಮತ್ತು ತೋಶಿ ಜಿ ಅವರಿಗೆ ಅರ್ಥಮಾಡಿಕೊಳ್ಳಲು ಎಚ್ಚರಿಕೆ ನೀಡುತ್ತಿದ್ದೇನೆ. ಅವರು ಮೂರು ದಿನಗಳಲ್ಲಿ ಕ್ಷಮೆಯಾಚಿಸಿದ ನಂತರ ಹಾಡನ್ನು ತೆಗೆದುಹಾಕದಿದ್ದರೆ ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ಈ ಹಾಡಿನಲ್ಲಿ 1960 ರ ಚಲನಚಿತ್ರ ಕೊಹಿನೂರ್‌ನ ಹಾಡಿನ ಕೆಲವು ಪದಗಳನ್ನು ಬಳಸಲಾಗಿದೆ. ಇದನ್ನು ಮೊಹಮ್ಮದ್ ರಫಿ ಹಾಡಿದ್ದರು.

ನರೋತ್ತಮ್ ಮಿಶ್ರಾಗಿಂತ ಮೊದಲು ಮಥುರಾ ಮೂಲದ ಅರ್ಚಕರು ಅವರು ವಿಡಿಯೊ ಆಕ್ಷೇಪಾರ್ಹವೆಂದು ಕಂಡುಕೊಂಡರು ಮತ್ತು ವಿಡಿಯೊ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ನ್ಯಾಯಾಲಯಕ್ಕೆ ಹೋಗುವುದಾಗಿ ಹೇಳಿದರು. ಅಖಿಲ ಭಾರತೀಯ ತೀರ್ಥ ಪುರೋಹಿತ್ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಮಹೇಶ್ ಪಾಠಕ್ ಅವರು ವಿಡಿಯೊದ ಮೂಲಕ ಸನ್ನಿ ಲಿಯೋನ್ ಹಾಡನ್ನು “ಅವಹೇಳನಕಾರಿ ರೀತಿಯಲ್ಲಿ” ಪ್ರಸ್ತುತಪಡಿಸುವ ಮೂಲಕ ಬ್ರಿಜ್‌ಭೂಮಿಯ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:  Sunny Leone: ಸನ್ನಿ ಲಿಯೋನ್ ಹೊಸ ಹಾಡಿನಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಅಪಮಾನ?; ನೆಟ್ಟಿಗರ ತೀವ್ರ ವಿರೋಧ

Published On - 8:16 pm, Sun, 26 December 21

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್