ಸಚಿವರ ಎಚ್ಚರಿಕೆಯ ಬೆನ್ನಲ್ಲೇ ಸನ್ನಿ ಲಿಯೋನ್​​ನ ಮಧುಬನ್ ಹಾಡಿನ ಸಾಹಿತ್ಯ ಬದಲಿಸಲು ನಿರ್ಧಾರ

"ಕೆಲವು ವಿಧರ್ಮಿಗಳು ನಿರಂತರವಾಗಿ ಹಿಂದೂ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ. 'ಮಧುಬನ್ ಮೇ ರಾಧಿಕಾ ನಾಚೆ' ವಿಡಿಯೊ ಅಂತಹ ಒಂದು ಖಂಡನೀಯ ಪ್ರಯತ್ನವಾಗಿದೆ. ನಾನು ಸನ್ನಿ ಲಿಯೋನ್ ಜಿ, ಶರೀಬ್ ಮತ್ತು ತೋಶಿ ಜಿ ಅವರಿಗೆ ಅರ್ಥಮಾಡಿಕೊಳ್ಳಲು ಎಚ್ಚರಿಕೆ ನೀಡುತ್ತಿದ್ದೇನೆ.

ಸಚಿವರ ಎಚ್ಚರಿಕೆಯ ಬೆನ್ನಲ್ಲೇ ಸನ್ನಿ ಲಿಯೋನ್​​ನ ಮಧುಬನ್ ಹಾಡಿನ ಸಾಹಿತ್ಯ ಬದಲಿಸಲು ನಿರ್ಧಾರ
ಸನ್ನಿ ಲಿಯೋನ್
Follow us
| Edited By: Rashmi Kallakatta

Updated on:Dec 26, 2021 | 8:18 PM

ದೆಹಲಿ: ಮಧ್ಯಪ್ರದೇಶದ (Madhya Pradesh) ಗೃಹ ಸಚಿವ ನರೋತ್ತಮ್ ಮಿಶ್ರಾ(Narottam Mishra) ಅವರು ಸನ್ನಿ ಲಿಯೋನ್  (Sunny Leone)ಮತ್ತು ಇತ್ತೀಚೆಗೆ ಬಿಡುಗಡೆಯಾದ ಮ್ಯೂಸಿಕ್ ವಿಡಿಯೊ ಮಧುಬನ್‌ನ (Madhuban)ಗಾಯಕರಿಗೆ ಎಚ್ಚರಿಕೆ ನೀಡಿದ ನಂತರ, ಕಂಪನಿಯು ಸಾಹಿತ್ಯವನ್ನು ಬದಲಾಯಿಸಲಿದೆ ಎಂದು ಸಂಗೀತ ಕಂಪನಿ ಸರೆಗಮ(Saregama) ಭಾನುವಾರ ತಿಳಿಸಿದೆ. “ಇತ್ತೀಚಿನ ಪ್ರತಿಕ್ರಿಯೆಯ ಬೆಳಕಿನಲ್ಲಿ ಮತ್ತು ನಮ್ಮ ದೇಶವಾಸಿಗಳ ಭಾವನೆಗಳನ್ನು ಗೌರವಿಸಿ, ನಾವು ಮಧುಬನ್ ಹಾಡಿನ ಸಾಹಿತ್ಯ ಮತ್ತು ಹೆಸರನ್ನು ಬದಲಾಯಿಸುತ್ತೇವೆ” ಎಂದು ಸಂಗೀತ ಸಂಸ್ಥೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಮುಂದಿನ 3 ದಿನಗಳಲ್ಲಿ ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ ಹಳೆಯ ಹಾಡನ್ನು ಬದಲಾಯಿಸಿ ಹೊಸ ಹಾಡು ಅಪ್ಲೋಡ್ ಮಾಡಲಾಗುತ್ತದೆ” ಎಂದು ಸರೆಗಮ ಹೇಳಿದೆ. ಡಿಸೈನರ್ ಸಬ್ಯಸಾಚಿ ಮುಖರ್ಜಿ ಅವರ ಮಂಗಳಸೂತ್ರ ಜಾಹೀರಾತನ್ನು ಹಿಂತೆಗೆದುಕೊಳ್ಳುವಂತೆ ಮಾಡಿದ ನರೋತ್ತಮ್ ಮಿಶ್ರಾ ಅವರು ಸನ್ನಿ ಲಿಯೋನ್ ಮತ್ತು ಸಂಗೀತ ವಿಡಿಯೊದ ಗಾಯಕರಿಗೆ ಕ್ಷಮೆಯಾಚಿಸುವಂತೆ ಮತ್ತು ಮೂರು ದಿನಗಳಲ್ಲಿ ವಿಡಿಯೊವನ್ನು ಹಿಂತೆಗೆದುಕೊಳ್ಳುವಂತೆ ಎಚ್ಚರಿಸಿದ್ದಾರೆ. ಇದನ್ನು ಮಾಡಲು ವಿಫಲವಾದರೆ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದ್ದರು. ಎಚ್ಚರಿಕೆಯ ಬೆನ್ನಲ್ಲೇ ಪ್ರತಿಕ್ರಿಯಿಸಿದ ಕಂಪನಿ ವಿಡಿಯೊವನ್ನು ಬದಲಾಯಿಸಲಾಗುವುದು ಎಂದು ಹೇಳಿದೆ. ಸಚಿವರ ಬೆದರಿಕೆಯನ್ನು ಉಲ್ಲೇಖಿಸದೆ ಇತ್ತೀಚಿನ ಪ್ರತಿಕ್ರಿಯೆಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕಂಪನಿ ಹೇಳಿದೆ.

“ಕೆಲವು ವಿಧರ್ಮಿಗಳು ನಿರಂತರವಾಗಿ ಹಿಂದೂ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ. ‘ಮಧುಬನ್ ಮೇ ರಾಧಿಕಾ ನಾಚೆ’ ವಿಡಿಯೊ ಅಂತಹ ಒಂದು ಖಂಡನೀಯ ಪ್ರಯತ್ನವಾಗಿದೆ. ನಾನು ಸನ್ನಿ ಲಿಯೋನ್ ಜಿ, ಶರೀಬ್ ಮತ್ತು ತೋಶಿ ಜಿ ಅವರಿಗೆ ಅರ್ಥಮಾಡಿಕೊಳ್ಳಲು ಎಚ್ಚರಿಕೆ ನೀಡುತ್ತಿದ್ದೇನೆ. ಅವರು ಮೂರು ದಿನಗಳಲ್ಲಿ ಕ್ಷಮೆಯಾಚಿಸಿದ ನಂತರ ಹಾಡನ್ನು ತೆಗೆದುಹಾಕದಿದ್ದರೆ ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ಈ ಹಾಡಿನಲ್ಲಿ 1960 ರ ಚಲನಚಿತ್ರ ಕೊಹಿನೂರ್‌ನ ಹಾಡಿನ ಕೆಲವು ಪದಗಳನ್ನು ಬಳಸಲಾಗಿದೆ. ಇದನ್ನು ಮೊಹಮ್ಮದ್ ರಫಿ ಹಾಡಿದ್ದರು.

ನರೋತ್ತಮ್ ಮಿಶ್ರಾಗಿಂತ ಮೊದಲು ಮಥುರಾ ಮೂಲದ ಅರ್ಚಕರು ಅವರು ವಿಡಿಯೊ ಆಕ್ಷೇಪಾರ್ಹವೆಂದು ಕಂಡುಕೊಂಡರು ಮತ್ತು ವಿಡಿಯೊ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ನ್ಯಾಯಾಲಯಕ್ಕೆ ಹೋಗುವುದಾಗಿ ಹೇಳಿದರು. ಅಖಿಲ ಭಾರತೀಯ ತೀರ್ಥ ಪುರೋಹಿತ್ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಮಹೇಶ್ ಪಾಠಕ್ ಅವರು ವಿಡಿಯೊದ ಮೂಲಕ ಸನ್ನಿ ಲಿಯೋನ್ ಹಾಡನ್ನು “ಅವಹೇಳನಕಾರಿ ರೀತಿಯಲ್ಲಿ” ಪ್ರಸ್ತುತಪಡಿಸುವ ಮೂಲಕ ಬ್ರಿಜ್‌ಭೂಮಿಯ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:  Sunny Leone: ಸನ್ನಿ ಲಿಯೋನ್ ಹೊಸ ಹಾಡಿನಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಅಪಮಾನ?; ನೆಟ್ಟಿಗರ ತೀವ್ರ ವಿರೋಧ

Published On - 8:16 pm, Sun, 26 December 21

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ