AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರದ ಉಗ್ರಾಣದಲ್ಲಿ ತುಂಬಿ ತುಳುಕಿದ ಭಕ್ತರು ತಂದ ಆಹಾರ ಧಾನ್ಯಗಳು, ಇದು ಭಕ್ತಿಯ ಪರಾಕಾಷ್ಠೆ

ರಾಮನ ಮೇಲಿನ ಭಕ್ತಿಯ ಪರಾಕಾಷ್ಠೆಯನ್ನು ಇದು ತಿಳಿಸುತ್ತದೆ. ರಾಮಮಂದಿರ ಟ್ರಸ್ಟ್​​ಗೆ ಇದೀಗ ಆಹಾರ ಧಾನ್ಯಗಳ ಸಂಗ್ರಹವೇ ದೊಡ್ಡ ಸವಾಲಾಗಿದೆ ಎಂದು ಹೇಳಿದೆ. ರಾಮಮಂದಿರಕ್ಕೆ ಪ್ರಸಾದ ರೂಪದಲ್ಲಿ ಬಂದಿರುವ ಈ ಹೊರಕಾಣಿಕೆಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ. ಈಗಾಗಲೇ ರಾಮಮಂದಿರದಲ್ಲಿ ನಿರ್ಮಾಣ ಮಾಡಿರುವ ಉಗ್ರಾಣದಲ್ಲಿ ಭಕ್ತರು ತಂದಿರುವ ಆಹಾರ ಧಾನ್ಯಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ

ರಾಮಮಂದಿರದ ಉಗ್ರಾಣದಲ್ಲಿ ತುಂಬಿ ತುಳುಕಿದ ಭಕ್ತರು ತಂದ ಆಹಾರ ಧಾನ್ಯಗಳು, ಇದು ಭಕ್ತಿಯ ಪರಾಕಾಷ್ಠೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jan 24, 2024 | 4:20 PM

ಅಯೋಧ್ಯೆ, ಜ.24: ಅಯೋಧ್ಯೆಯ ರಾಮಮಂದಿದಲ್ಲಿ ರಾಮ ಲಲ್ಲಾ ವಿರಾಜಮಾನರಾಗಿದ್ದಾರೆ. ಲಕ್ಷಾಂತರ ಭಕ್ತರು ರಾಮಮಂದಿರದತ್ತ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಮಮಂದಿರಕ್ಕೆ ಅನೇಕ ಭಕ್ತರು ಭಕ್ತಿಪೂರ್ವಕವಾಗಿ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಕೆಲವರು ಚಿನ್ನ, ವಜ್ರ, ಇನ್ನು ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಇದರ ಜತೆಗೆ ಭಕ್ತರು ಆಹಾರ ಧಾನ್ಯಗಳನ್ನು ನೀಡಿದ್ದಾರೆ. ಆದರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದರು. ಇನ್ನು ಆಹಾರ ಧಾನ್ಯಗಳು ಬರುತ್ತಿದೆ. ಅದನ್ನು ಸಂಗ್ರಹ ಮಾಡಿಕೊಳ್ಳಲು ಸ್ಥಳವಿಲ್ಲ, ಅಷ್ಟೊಂದು ಆಹಾರ ಧಾನ್ಯಗಳು ಬಂದಿದೆ ಎಂದು ಹೇಳಲಾಗಿದೆ.

ರಾಮನ ಮೇಲಿನ ಭಕ್ತಿಯ ಪರಾಕಾಷ್ಠೆಯನ್ನು ಇದು ತಿಳಿಸುತ್ತದೆ. ರಾಮಮಂದಿರ ಟ್ರಸ್ಟ್​​ಗೆ ಇದೀಗ ಆಹಾರ ಧಾನ್ಯಗಳ ಸಂಗ್ರಹವೇ ದೊಡ್ಡ ಸವಾಲಾಗಿದೆ ಎಂದು ಹೇಳಿದೆ. ರಾಮಮಂದಿರಕ್ಕೆ ಪ್ರಸಾದ ರೂಪದಲ್ಲಿ ಬಂದಿರುವ ಈ ಹೊರಕಾಣಿಕೆಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ. ಈಗಾಗಲೇ ರಾಮಮಂದಿರದಲ್ಲಿ ನಿರ್ಮಾಣ ಮಾಡಿರುವ ಉಗ್ರಾಣದಲ್ಲಿ ಭಕ್ತರು ತಂದಿರುವ ಆಹಾರ ಧಾನ್ಯಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ, ಇನ್ನು ಕೆಲವು ಟ್ರಕ್​​​ಗಳು ಉಗ್ರಾಣ ಹೊರಗೆ ಆಹಾರ ಧ್ಯಾನಗಳನ್ನು ತುಂಬಿಕೊಂಡು ನಿಂತಿದೆ ಎಂದು ಹೇಳಲಾಗಿದೆ.

ಆಹಾರ ಧಾನ್ಯಗಳು ರಾಮಮಂದಿರದ ಉಗ್ರಾಣದಲ್ಲಿ ತುಂಬಿರುವ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ರಾಮನ ಮೇಲಿರುವ ಪ್ರೀತಿ , ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ. ಭಕ್ತರ ಈ ಸೇವೆಯಿಂದ ರಾಮ ಸಂತೃಪ್ತನಾಗಿದ್ದಾನೆ ಎಂದು ಹೇಳಾಗಿದೆ, ದೇಶದ ಮೂಲೆ ಮೂಲೆಗಳಿಂದ ಈ ಹೊರಕಾಣಿಕೆ ಬಂದಿದೆ. ಖಂಡಿತ ಇದು ರಾಮನಿಗೆ ಸಮರ್ಪಿತವಾಗಿದೆ ಎಂದು ಹೇಳಲಾಗಿದೆ. ಆಹಾರ ಧಾನ್ಯಗಳನ್ನು ದೇಶದ ಎಲ್ಲ ಭಕ್ತರಿಗೆ ನೀಡುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಾಮಮಂದಿರಕ್ಕೆ 3 ಲಕ್ಷ ಭಕ್ತರ ಆಗಮನ, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ: ಅರ್ಚಕರು

ಜನವರಿ 22ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯಾಗಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ. ಈ ಪುಣ್ಯ ಕ್ಷಣಕ್ಕೆ ಈಡಿ ಭಾರತವೇ ಸಾಕ್ಷಿಯಾಗಿತ್ತು. ಇದೀಗ ರಾಮಮಂದಿರಕ್ಕೆ ಲಕ್ಷಾಂತರ ರಾಮಭಕ್ತರು ಬರುತ್ತಿದ್ದಾರೆ.

Published On - 4:13 pm, Wed, 24 January 24

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ