AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರದ ಉಗ್ರಾಣದಲ್ಲಿ ತುಂಬಿ ತುಳುಕಿದ ಭಕ್ತರು ತಂದ ಆಹಾರ ಧಾನ್ಯಗಳು, ಇದು ಭಕ್ತಿಯ ಪರಾಕಾಷ್ಠೆ

ರಾಮನ ಮೇಲಿನ ಭಕ್ತಿಯ ಪರಾಕಾಷ್ಠೆಯನ್ನು ಇದು ತಿಳಿಸುತ್ತದೆ. ರಾಮಮಂದಿರ ಟ್ರಸ್ಟ್​​ಗೆ ಇದೀಗ ಆಹಾರ ಧಾನ್ಯಗಳ ಸಂಗ್ರಹವೇ ದೊಡ್ಡ ಸವಾಲಾಗಿದೆ ಎಂದು ಹೇಳಿದೆ. ರಾಮಮಂದಿರಕ್ಕೆ ಪ್ರಸಾದ ರೂಪದಲ್ಲಿ ಬಂದಿರುವ ಈ ಹೊರಕಾಣಿಕೆಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ. ಈಗಾಗಲೇ ರಾಮಮಂದಿರದಲ್ಲಿ ನಿರ್ಮಾಣ ಮಾಡಿರುವ ಉಗ್ರಾಣದಲ್ಲಿ ಭಕ್ತರು ತಂದಿರುವ ಆಹಾರ ಧಾನ್ಯಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ

ರಾಮಮಂದಿರದ ಉಗ್ರಾಣದಲ್ಲಿ ತುಂಬಿ ತುಳುಕಿದ ಭಕ್ತರು ತಂದ ಆಹಾರ ಧಾನ್ಯಗಳು, ಇದು ಭಕ್ತಿಯ ಪರಾಕಾಷ್ಠೆ
ಅಕ್ಷಯ್​ ಪಲ್ಲಮಜಲು​​
|

Updated on:Jan 24, 2024 | 4:20 PM

Share

ಅಯೋಧ್ಯೆ, ಜ.24: ಅಯೋಧ್ಯೆಯ ರಾಮಮಂದಿದಲ್ಲಿ ರಾಮ ಲಲ್ಲಾ ವಿರಾಜಮಾನರಾಗಿದ್ದಾರೆ. ಲಕ್ಷಾಂತರ ಭಕ್ತರು ರಾಮಮಂದಿರದತ್ತ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಮಮಂದಿರಕ್ಕೆ ಅನೇಕ ಭಕ್ತರು ಭಕ್ತಿಪೂರ್ವಕವಾಗಿ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಕೆಲವರು ಚಿನ್ನ, ವಜ್ರ, ಇನ್ನು ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಇದರ ಜತೆಗೆ ಭಕ್ತರು ಆಹಾರ ಧಾನ್ಯಗಳನ್ನು ನೀಡಿದ್ದಾರೆ. ಆದರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದರು. ಇನ್ನು ಆಹಾರ ಧಾನ್ಯಗಳು ಬರುತ್ತಿದೆ. ಅದನ್ನು ಸಂಗ್ರಹ ಮಾಡಿಕೊಳ್ಳಲು ಸ್ಥಳವಿಲ್ಲ, ಅಷ್ಟೊಂದು ಆಹಾರ ಧಾನ್ಯಗಳು ಬಂದಿದೆ ಎಂದು ಹೇಳಲಾಗಿದೆ.

ರಾಮನ ಮೇಲಿನ ಭಕ್ತಿಯ ಪರಾಕಾಷ್ಠೆಯನ್ನು ಇದು ತಿಳಿಸುತ್ತದೆ. ರಾಮಮಂದಿರ ಟ್ರಸ್ಟ್​​ಗೆ ಇದೀಗ ಆಹಾರ ಧಾನ್ಯಗಳ ಸಂಗ್ರಹವೇ ದೊಡ್ಡ ಸವಾಲಾಗಿದೆ ಎಂದು ಹೇಳಿದೆ. ರಾಮಮಂದಿರಕ್ಕೆ ಪ್ರಸಾದ ರೂಪದಲ್ಲಿ ಬಂದಿರುವ ಈ ಹೊರಕಾಣಿಕೆಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ. ಈಗಾಗಲೇ ರಾಮಮಂದಿರದಲ್ಲಿ ನಿರ್ಮಾಣ ಮಾಡಿರುವ ಉಗ್ರಾಣದಲ್ಲಿ ಭಕ್ತರು ತಂದಿರುವ ಆಹಾರ ಧಾನ್ಯಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ, ಇನ್ನು ಕೆಲವು ಟ್ರಕ್​​​ಗಳು ಉಗ್ರಾಣ ಹೊರಗೆ ಆಹಾರ ಧ್ಯಾನಗಳನ್ನು ತುಂಬಿಕೊಂಡು ನಿಂತಿದೆ ಎಂದು ಹೇಳಲಾಗಿದೆ.

ಆಹಾರ ಧಾನ್ಯಗಳು ರಾಮಮಂದಿರದ ಉಗ್ರಾಣದಲ್ಲಿ ತುಂಬಿರುವ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ರಾಮನ ಮೇಲಿರುವ ಪ್ರೀತಿ , ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ. ಭಕ್ತರ ಈ ಸೇವೆಯಿಂದ ರಾಮ ಸಂತೃಪ್ತನಾಗಿದ್ದಾನೆ ಎಂದು ಹೇಳಾಗಿದೆ, ದೇಶದ ಮೂಲೆ ಮೂಲೆಗಳಿಂದ ಈ ಹೊರಕಾಣಿಕೆ ಬಂದಿದೆ. ಖಂಡಿತ ಇದು ರಾಮನಿಗೆ ಸಮರ್ಪಿತವಾಗಿದೆ ಎಂದು ಹೇಳಲಾಗಿದೆ. ಆಹಾರ ಧಾನ್ಯಗಳನ್ನು ದೇಶದ ಎಲ್ಲ ಭಕ್ತರಿಗೆ ನೀಡುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಾಮಮಂದಿರಕ್ಕೆ 3 ಲಕ್ಷ ಭಕ್ತರ ಆಗಮನ, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ: ಅರ್ಚಕರು

ಜನವರಿ 22ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯಾಗಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ. ಈ ಪುಣ್ಯ ಕ್ಷಣಕ್ಕೆ ಈಡಿ ಭಾರತವೇ ಸಾಕ್ಷಿಯಾಗಿತ್ತು. ಇದೀಗ ರಾಮಮಂದಿರಕ್ಕೆ ಲಕ್ಷಾಂತರ ರಾಮಭಕ್ತರು ಬರುತ್ತಿದ್ದಾರೆ.

Published On - 4:13 pm, Wed, 24 January 24

Follow Us
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್