AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರದ ಉಗ್ರಾಣದಲ್ಲಿ ತುಂಬಿ ತುಳುಕಿದ ಭಕ್ತರು ತಂದ ಆಹಾರ ಧಾನ್ಯಗಳು, ಇದು ಭಕ್ತಿಯ ಪರಾಕಾಷ್ಠೆ

ರಾಮನ ಮೇಲಿನ ಭಕ್ತಿಯ ಪರಾಕಾಷ್ಠೆಯನ್ನು ಇದು ತಿಳಿಸುತ್ತದೆ. ರಾಮಮಂದಿರ ಟ್ರಸ್ಟ್​​ಗೆ ಇದೀಗ ಆಹಾರ ಧಾನ್ಯಗಳ ಸಂಗ್ರಹವೇ ದೊಡ್ಡ ಸವಾಲಾಗಿದೆ ಎಂದು ಹೇಳಿದೆ. ರಾಮಮಂದಿರಕ್ಕೆ ಪ್ರಸಾದ ರೂಪದಲ್ಲಿ ಬಂದಿರುವ ಈ ಹೊರಕಾಣಿಕೆಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ. ಈಗಾಗಲೇ ರಾಮಮಂದಿರದಲ್ಲಿ ನಿರ್ಮಾಣ ಮಾಡಿರುವ ಉಗ್ರಾಣದಲ್ಲಿ ಭಕ್ತರು ತಂದಿರುವ ಆಹಾರ ಧಾನ್ಯಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ

ರಾಮಮಂದಿರದ ಉಗ್ರಾಣದಲ್ಲಿ ತುಂಬಿ ತುಳುಕಿದ ಭಕ್ತರು ತಂದ ಆಹಾರ ಧಾನ್ಯಗಳು, ಇದು ಭಕ್ತಿಯ ಪರಾಕಾಷ್ಠೆ
ಅಕ್ಷಯ್​ ಪಲ್ಲಮಜಲು​​
|

Updated on:Jan 24, 2024 | 4:20 PM

Share

ಅಯೋಧ್ಯೆ, ಜ.24: ಅಯೋಧ್ಯೆಯ ರಾಮಮಂದಿದಲ್ಲಿ ರಾಮ ಲಲ್ಲಾ ವಿರಾಜಮಾನರಾಗಿದ್ದಾರೆ. ಲಕ್ಷಾಂತರ ಭಕ್ತರು ರಾಮಮಂದಿರದತ್ತ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಮಮಂದಿರಕ್ಕೆ ಅನೇಕ ಭಕ್ತರು ಭಕ್ತಿಪೂರ್ವಕವಾಗಿ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಕೆಲವರು ಚಿನ್ನ, ವಜ್ರ, ಇನ್ನು ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಇದರ ಜತೆಗೆ ಭಕ್ತರು ಆಹಾರ ಧಾನ್ಯಗಳನ್ನು ನೀಡಿದ್ದಾರೆ. ಆದರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದರು. ಇನ್ನು ಆಹಾರ ಧಾನ್ಯಗಳು ಬರುತ್ತಿದೆ. ಅದನ್ನು ಸಂಗ್ರಹ ಮಾಡಿಕೊಳ್ಳಲು ಸ್ಥಳವಿಲ್ಲ, ಅಷ್ಟೊಂದು ಆಹಾರ ಧಾನ್ಯಗಳು ಬಂದಿದೆ ಎಂದು ಹೇಳಲಾಗಿದೆ.

ರಾಮನ ಮೇಲಿನ ಭಕ್ತಿಯ ಪರಾಕಾಷ್ಠೆಯನ್ನು ಇದು ತಿಳಿಸುತ್ತದೆ. ರಾಮಮಂದಿರ ಟ್ರಸ್ಟ್​​ಗೆ ಇದೀಗ ಆಹಾರ ಧಾನ್ಯಗಳ ಸಂಗ್ರಹವೇ ದೊಡ್ಡ ಸವಾಲಾಗಿದೆ ಎಂದು ಹೇಳಿದೆ. ರಾಮಮಂದಿರಕ್ಕೆ ಪ್ರಸಾದ ರೂಪದಲ್ಲಿ ಬಂದಿರುವ ಈ ಹೊರಕಾಣಿಕೆಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ. ಈಗಾಗಲೇ ರಾಮಮಂದಿರದಲ್ಲಿ ನಿರ್ಮಾಣ ಮಾಡಿರುವ ಉಗ್ರಾಣದಲ್ಲಿ ಭಕ್ತರು ತಂದಿರುವ ಆಹಾರ ಧಾನ್ಯಗಳನ್ನು ಸಂಗ್ರಹ ಮಾಡಲು ಸ್ಥಳವಿಲ್ಲ, ಇನ್ನು ಕೆಲವು ಟ್ರಕ್​​​ಗಳು ಉಗ್ರಾಣ ಹೊರಗೆ ಆಹಾರ ಧ್ಯಾನಗಳನ್ನು ತುಂಬಿಕೊಂಡು ನಿಂತಿದೆ ಎಂದು ಹೇಳಲಾಗಿದೆ.

ಆಹಾರ ಧಾನ್ಯಗಳು ರಾಮಮಂದಿರದ ಉಗ್ರಾಣದಲ್ಲಿ ತುಂಬಿರುವ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ರಾಮನ ಮೇಲಿರುವ ಪ್ರೀತಿ , ವಿಶ್ವಾಸ, ನಂಬಿಕೆಗೆ ಇದು ಸಾಕ್ಷಿಯಾಗಿದೆ. ಭಕ್ತರ ಈ ಸೇವೆಯಿಂದ ರಾಮ ಸಂತೃಪ್ತನಾಗಿದ್ದಾನೆ ಎಂದು ಹೇಳಾಗಿದೆ, ದೇಶದ ಮೂಲೆ ಮೂಲೆಗಳಿಂದ ಈ ಹೊರಕಾಣಿಕೆ ಬಂದಿದೆ. ಖಂಡಿತ ಇದು ರಾಮನಿಗೆ ಸಮರ್ಪಿತವಾಗಿದೆ ಎಂದು ಹೇಳಲಾಗಿದೆ. ಆಹಾರ ಧಾನ್ಯಗಳನ್ನು ದೇಶದ ಎಲ್ಲ ಭಕ್ತರಿಗೆ ನೀಡುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಾಮಮಂದಿರಕ್ಕೆ 3 ಲಕ್ಷ ಭಕ್ತರ ಆಗಮನ, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ: ಅರ್ಚಕರು

ಜನವರಿ 22ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯಾಗಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ. ಈ ಪುಣ್ಯ ಕ್ಷಣಕ್ಕೆ ಈಡಿ ಭಾರತವೇ ಸಾಕ್ಷಿಯಾಗಿತ್ತು. ಇದೀಗ ರಾಮಮಂದಿರಕ್ಕೆ ಲಕ್ಷಾಂತರ ರಾಮಭಕ್ತರು ಬರುತ್ತಿದ್ದಾರೆ.

Published On - 4:13 pm, Wed, 24 January 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ