AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu And Kashmir: ಜಮ್ಮುವಿನಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಮಂದಿಗೆ ಗಾಯಗೊಂಡಿದ್ದಾರೆ.

Jammu And Kashmir: ಜಮ್ಮುವಿನಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಮಂದಿಗೆ ಗಾಯ
ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 20 ಮಂದಿಗೆ ಗಾಯ
ಅಕ್ಷಯ್​ ಪಲ್ಲಮಜಲು​​
|

Updated on:Apr 14, 2023 | 5:27 PM

Share

ಉಧಂಪುರ: ಜಮ್ಮು ಮತ್ತು ಕಾಶ್ಮೀರ(Jammu And Kashmir) ಉಧಂಪುರದಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಜನರು ಗಾಯಗೊಂಡಿದ್ದಾರೆ. ಬೈಸಾಖಿ ಆಚರಣೆಯ ಸಂದರ್ಭದಲ್ಲಿ ಚೆನಾನಿ ಬ್ಲಾಕ್‌ನ ಬೈನ್ ಗ್ರಾಮದ ಬೇಣಿ ಸಂಗಮದಲ್ಲಿ ಈ ಘಟನೆ ವರದಿಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ವಿಭಾಗೀಯ ಆಯುಕ್ತ (ಜಮ್ಮು) ರಮೇಶ್ ಕುಮಾರ್, ಸೇತುವೆಯ ಮೇಲೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಓವರ್‌ಲೋಡ್‌ನಿಂದ ಸೇತುವೆ ಕುಸಿದಿದೆ. ಪೊಲೀಸರು ಮತ್ತು ಪರಿಹಾರ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

ಜಿಲ್ಲೆಯ ಬೈನ್ ಗ್ರಾಮದ ಬೇಣಿ ಸಂಗಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು ಮತ್ತು ಇತರ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿದೆ ಎಂದು ಎಸ್‌ಎಸ್‌ಪಿ ಉಧಂಪುರ ಡಾ.ವಿನೋದ್ ತಿಳಿಸಿದ್ದಾರೆ.

Published On - 3:45 pm, Fri, 14 April 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More