Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಬಾಲ್​ ದಂತಕಥೆ ಡಿಯಾಗೋ ಮರಡೋನಾ ಐಷಾರಾಮಿ ವಾಚ್​ ಕದ್ದ ಆರೋಪಿ ಅಸ್ಸಾಂನಲ್ಲಿ ಸೆರೆ

ಪುಟ್ಬಾಲ್​ ದಂತಕಥೆ ಡಿ ಗೋ ಮರಡೋನಾ ಅವರ ವಾಚ್​ ಕದ್ದ ಅರೋಪಿಯನ್ನು ಪೊಲೀಸರು ಅಸ್ಸಾಂನಲ್ಲಿ ಬಂಧಿಸಿದ್ದಾರೆ. ದುಬೈನಲ್ಲಿ ದಿವಂಗತ ಪುಟ್ಬಾಲ್​ ಆಟಗಾರ ಡಿ ಗೋ ಮರಡೋನಾ ಅವರ ವಿಲಾಸಿ ವಾಚ್​ ಕಳ್ಳತನವಾಗಿತ್ತು.

ಪುಟ್ಬಾಲ್​ ದಂತಕಥೆ ಡಿಯಾಗೋ ಮರಡೋನಾ ಐಷಾರಾಮಿ ವಾಚ್​ ಕದ್ದ ಆರೋಪಿ ಅಸ್ಸಾಂನಲ್ಲಿ ಸೆರೆ
ವಾಚ್​ ಕದ್ದ ಆರೋಪಿ
Follow us
TV9 Web
| Updated By: Pavitra Bhat Jigalemane

Updated on: Dec 11, 2021 | 5:23 PM

ಪುಟ್ಬಾಲ್​ ದಂತಕಥೆ ಡಿಯಾಗೋ ಮರಡೋನಾ ಅವರ ವಾಚ್​ ಕದ್ದ ಅರೋಪಿಯನ್ನು ಪೊಲೀಸರು ಅಸ್ಸಾಂನಲ್ಲಿ ಬಂಧಿಸಿದ್ದಾರೆ. ದುಬೈನಲ್ಲಿ ದಿವಂಗತ ಪುಟ್ಬಾಲ್​ ಆಟಗಾರ ಡಿ ಗೋ ಮರಡೋನಾ ಅವರ ವಿಲಾಸಿ ವಾಚ್​ ಕಳ್ಳತನವಾಗಿತ್ತು. ದುಬೈ ಪೊಲೀಸರ ನೆರವಿನಿಂದ ಆರೋಪಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ವಾಚ್ ಕದ್ದ ಆರೋಪಿಯನ್ನು ವಾಜೀದ್​ ಹುಸೇನ್​ ಎಂದು ಗುರುತಿಸಲಾಗಿದೆ. ದುಬೈನಲ್ಲಿ ಮರಡೋನಾ ವಸ್ತುಗಳನ್ನು ಸಂಗ್ರಹಿಸಿದ್ದ ಕಂಪನಿಯಿಂದ ಆರೋಪಿ ವಾಜಿದ್​ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಅಲ್ಲಿಂದ ವಾಚ್​ ಕದ್ದು ತಲೆಮರೆಸಿಕೊಂಡಿದ್ದ.

ಇದೀಗ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಅಸ್ಸಾಂನಲ್ಲಿ ಬಂಧಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ತಿಳಿಸಿದ್ದಾರೆ. ಅರ್ಜೆಂಟೆನಾ ಪುಟ್ಬಾಲ್​ ಆಟಗಾರ ಡಿ ಗೋ ಮರಡೋನಾಗೆ ಸೇರಿದ ಹೆರಿಟೇಜ್​ ಹ್ಯಬ್ಲೋಟ್​ ದುಬಾರಿ ವಾಚ್​ 20 ಲಕ್ಷ ಬೆಲೆಬಾಳುವಂತದ್ದು ಎಂದು ಹೇಳಲಾಗಿದೆ. ಅಲ್ಲದೆ​ ಆಟಗಾರ ಡಿಯಾಗೋ ಮರಡೋನಾಗೆ ಸೇರಿದ ವಸ್ತುಗಳನ್ನು ಅತ್ಯಂತ ಜೋಪಾನವಾಗಿ ದುಬೈನಲ್ಲಿ ಸಂಗ್ರಹಿಸಲಾಗುತ್ತಿದೆ. ಆದ್ದರಿಂದ ದುಬೈ ಪೊಲೀಸರು ಮುತುವರ್ಜಿ ವಹಿಸಿ ಆರೋಪಿಗಾಗಿ ಶೋಧಕಾರ್ಯ ಆರಂಭಿಸಿದ್ದರು. ಅರೋಪಿ ತಪ್ಪಿಸಿಕೊಂಡು ಅಸ್ಸಾನಲ್ಲಿ ನೆಲೆಸಿದ್ದಾನೆ ಎಂದು ತಿಳಿದ ಅಸ್ಸಾಂ ಪೊಲೀಸರು ಭಾರತೀಯ ಪೆಡರಲ್​ ಮೂಲಕ ದುಬೈ ಪೊಲೀಸರೊಂದಿಗೆ ಸಂಪರ್ಕ ಸಾಧಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ.

​ ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೆಂದ್ರೀಯ ಪೊಲೀಸರಿಂದ ಮಾಹಿತಿ ಪಡೆದ ಅಸ್ಸಾಂ ಪೊಲೀಸರು ಶನಿವಾರ ಬೆಳಗಿನ ಜಾವ ಆರೋಪಿಯ ಮನೆ ಇರುವ ಸಿವಾಸ್​ನಗರ ಬಳಿ ಆತನನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಮರಡೋನಾ ಬಗೆಗಿನ ವಸ್ತು ಸಂಗ್ರಹಿಸುತ್ತಿದ್ದ ಕಂಪನಿಯಲ್ಲಿ ಈತ ಸೆಕ್ಯರಿಟಿಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದ. ಕಳೆದ ಅಗಸ್ಟ್​ ತಿಂಗಳಿನಲ್ಲಿ ವಾಚ್​ ಕದ್ದು ಅಸ್ಸಾಂಗೆ ಬಂದು ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಅಂತಾರಾಷ್ಟ್ರೀಯ ಪೊಲೀಸರ ನೆರವಿನಿಂದ ಸೆರೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

ಡಿಯಾಗೋ ಮರಡೋನಾ ಅರ್ಜೆಂಟೆನಾದ ಖ್ಯಾತ ಪುಟ್ಬಾಲ್​ ಆಟಗಾರ. ಇವರನ್ನು ಅತ್ಯಂತ ಶ್ರೇಷ್ಠ ಪುಟ್ಬಾಲ್​ ಆಟಗಾರ ಎಂದು ಪರಿಗಣಿಸಲಾಗಿದೆ. ಇವರನ್ನು ಪುಟ್ಬಾಲ್​ ದಂತಕಥೆ ಎಂತಲೂ ಕರೆಯುತ್ತಾರೆ. 2020ರ ನವೆಂಬರ್​ 20ರಂದು ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಹೀಗಾಗಿ ಅವರು ಬಳಸುತ್ತಿದ್ದ ವಸ್ತುಗಳನ್ನು ಅರ್ಜೆಂಟೆನಾದ ಕಂಪನಿಯೊಂದು ಸಂಗ್ರಹಿಸುತ್ತಿದೆ.

ಇದನ್ನೂ ಓದಿ:

ಆತ್ಮಹತ್ಯೆಗೆ ಶರಣಾಗುವುದಾಗಿ ವಾಟ್ಸಾಪ್ ಗ್ರೂಪ್​ನಲ್ಲಿ ಪೋಸ್ಟ್! ತಪ್ಪು ನಿರ್ಧಾರ ಕೈಗೊಳ್ಳಬೇಡಿ ಎಂದು ಡಿವೈಎಸ್ಪಿ ಮೆಸೇಜ್

PM Narendra Modi: ಭಾರತದ ಪವಿತ್ರ ದೇಗುಲಗಳ ಜೀರ್ಣೋದ್ಧಾರದಲ್ಲಿ ಪ್ರಧಾನಿ ಮೋದಿಯವರದ್ದು ಪ್ರಮುಖ ಪಾತ್ರ; ಸಂಸ್ಕೃತಿ ರಕ್ಷಣೆಗೆ ಆದ್ಯತೆ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ