AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್ ಆ್ಯಂಡ್​ ರನ್: 300 ಕೋಟಿ ರೂ. ಆಸ್ತಿಗಾಗಿ ಮಾವನ ಹತ್ಯೆಗೆ ಸುಪಾರಿ ಕೊಟ್ಟಿದ್ದ ಸೊಸೆ

ಮಾವನ ಕೊಲೆಗೆ ಸಂಚು ರೂಪಿಸಿದ್ದಕ್ಕಾಗಿ ಮಹಿಳಾ ನಗರ ಯೋಜನಾ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ನಾಗ್ಪುರ ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 300 ಕೋಟಿ ಮೌಲ್ಯದ ಆಸ್ತಿಯ ಮೇಲೆ ಅವರ ದೃಷ್ಟಿ ನೆಟ್ಟಿತ್ತು. ಮೇ 22 ರಂದು ಬಾಲಾಜಿ ನಗರದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಪುರುಷೋತ್ತಮ್ ಪುಟ್ಟೇವಾರ್ (82) ಸಾವನ್ನಪ್ಪಿದ್ದರು, ಆದರೆ ತನಿಖೆ ಮತ್ತು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳು ಕೊಲೆ ಪ್ರಕರಣ ಎಂದು ತಿಳಿದುಬಂದಿದೆ.

ಹಿಟ್ ಆ್ಯಂಡ್​ ರನ್: 300 ಕೋಟಿ ರೂ. ಆಸ್ತಿಗಾಗಿ ಮಾವನ ಹತ್ಯೆಗೆ ಸುಪಾರಿ ಕೊಟ್ಟಿದ್ದ ಸೊಸೆ
ಕ್ರೈಂImage Credit source: NDTV
ನಯನಾ ರಾಜೀವ್
|

Updated on: Jun 13, 2024 | 11:12 AM

Share

ನಾಗ್ಪುರದಲ್ಲಿ ನಡೆದ ಅಪಘಾತ(Accident)ವೊಂದರಲ್ಲಿ ವೃದ್ಧರೊಬ್ಬರು ಸಾವನ್ನಪ್ಪಿದ್ದರು. ಮೇಲ್ನೋಟಕ್ಕೆ ಇದು ಹಿಟ್​ ಆ್ಯಂಡ್​ ರನ್​ನಂತೆ ಕಂಡರೂ ಪೊಲೀಸರಿಗೆ ಒಳಗೊಳಗೇ ಅನುಮಾನ ಮೂಡಿತ್ತು. ಈ ಅಪಘಾತ ಕಾಕತಾಳೀಯವಲ್ಲ, ಯೋಜಿತ ಸಂಚು ಎಂಬುದು ಪೊಲೀಸರ ನಂಬಿಕೆಯಾಗಿತ್ತು, ಇದೀಗ ಬಂದಿರುವ ಮಾಹಿತಿ ಪ್ರಕಾರ ಅದು ಯೋಜಿತ ಕೊಲೆ ಆ ಕೊಲೆಗೆ ಸುಪಾರಿ ಕೊಟ್ಟವಳು ಮೃತ ವೃದ್ಧರ ಸೊಸೆ ಎಂಬುದು ತಿಳಿದುಬಂದಿದೆ.

ಅರ್ಚನಾ ಪುಟ್ಟೇವಾರ್ ಎಂಬಾಕೆ ತನ್ನ ಮಾವ ಪುರುಷೋತ್ತಮ್ ಪುಟ್ಟೇವಾರ್ ಮೇಲೆ ಹಲ್ಲೆ ನಡೆಸಲು ಜನರನ್ನು ನೇಮಿಸಿಕೊಂಡಿದ್ದಳು. ಇದಕ್ಕಾಗಿ ಸುಮಾರು ಒಂದು ಕೋಟಿ ರೂ. ಖರ್ಚು ಮಾಡಿದ್ದಳು. ಡಿಕ್ಕಿ ಹೊಡೆಸಲು ಹಳೆ ಕಾರನ್ನು ಖರೀದಿಸಲು ಆಕೆ ಆರೋಪಿಗೆ ಹಣ ಕೊಟ್ಟಿದ್ದಳು. ಇದರಿಂದ ಈ ಕೊಲೆ ಅಪಘಾತದಂತೆ ಕಂಡಿತ್ತು.

300 ಕೋಟಿ ರೂ. ಮೌಲ್ಯದ ಆಸ್ತಿ ದೋಚಲು ಮಹಿಳೆ ಇಷ್ಟೆಲ್ಲಾ ಮಾಡಿದ್ದಾಳೆ, ಈ ಪ್ರಕರಣದಲ್ಲಿ ಮಹಿಳೆಯ ಪತಿಯ ಕಾರು ಚಾಲಕ ಬಾಗ್ಡೆ ಸೇರಿದಂತೆ ಮತ್ತಿಬ್ಬರು ಭಾಗಿಯಾಗಿದ್ದಾರೆ. ಎಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಆರೋಪಿಗಳ ವಿರುದ್ಧ ಕೊಲೆ, ಮೋಟಾರು ವಾಹನ ಕಾಯ್ದೆ ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಿಂದ ಎರಡು ಕಾರು, ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ಓದಿ: ಮದ್ಯದ ನಶೆಯಲ್ಲಿ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿದ ತಂದೆ

ವಯೋವೃದ್ಧ ಪುರುಷೋತ್ತಮ ಪುಟ್ಟೇವಾರ್ ಅವರು ಪತ್ನಿ ಶಕುಂತಲಾ ಅವರನ್ನು ಭೇಟಿಯಾಗಲು ಆಸ್ಪತ್ರೆಗೆ ತೆರಳಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ವಾಪಸಾಗುತ್ತಿದ್ದಾಗ ಘಟನೆ ನಡೆದಿದೆ. ಆಕೆಯ ಮಗ ಮತ್ತು ಅರ್ಚನಾಳ ಪತಿ ಮನೀಶ್ ವೈದ್ಯರಾಗಿದ್ದಾರೆ.

ಅರ್ಚನಾ ನಗರ ಯೋಜನಾ ವಿಭಾಗದ ಅಧಿಕಾರಿಯೂ ಆಗಿದ್ದು, ಹಲವು ಅಕ್ರಮಗಳನ್ನು ನಡೆಸಿದ್ದಾರೆ. ಇದಲ್ಲದೇ ಅರ್ಚನಾ ತನ್ನ ಕೆಲಸವನ್ನು ಸರಿಯಾಗಿ ಮಾಡಿಲ್ಲ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅವರ ಕೆಲಸದಲ್ಲೂ ಹಲವು ಅಕ್ರಮಗಳು ಕಂಡುಬಂದಿವೆ. ಅವರ ವಿರುದ್ಧ ಹಲವು ದೂರುಗಳು ಬಂದಿದ್ದವು. ರಾಜಕೀಯ ವ್ಯಕ್ತಿಗಳೊಂದಿಗೆ ಆಕೆ ಸಂಪರ್ಕದಲ್ಲಿದ್ದ ಕಾರಣ ಯಾರೂ ಆಕೆಯ ವಿರುದ್ಧವಾಗಿ ಕ್ರಮ ಕೈಗೊಂಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ