AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್ ಆ್ಯಂಡ್​ ರನ್: 300 ಕೋಟಿ ರೂ. ಆಸ್ತಿಗಾಗಿ ಮಾವನ ಹತ್ಯೆಗೆ ಸುಪಾರಿ ಕೊಟ್ಟಿದ್ದ ಸೊಸೆ

ಮಾವನ ಕೊಲೆಗೆ ಸಂಚು ರೂಪಿಸಿದ್ದಕ್ಕಾಗಿ ಮಹಿಳಾ ನಗರ ಯೋಜನಾ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ನಾಗ್ಪುರ ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 300 ಕೋಟಿ ಮೌಲ್ಯದ ಆಸ್ತಿಯ ಮೇಲೆ ಅವರ ದೃಷ್ಟಿ ನೆಟ್ಟಿತ್ತು. ಮೇ 22 ರಂದು ಬಾಲಾಜಿ ನಗರದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಪುರುಷೋತ್ತಮ್ ಪುಟ್ಟೇವಾರ್ (82) ಸಾವನ್ನಪ್ಪಿದ್ದರು, ಆದರೆ ತನಿಖೆ ಮತ್ತು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳು ಕೊಲೆ ಪ್ರಕರಣ ಎಂದು ತಿಳಿದುಬಂದಿದೆ.

ಹಿಟ್ ಆ್ಯಂಡ್​ ರನ್: 300 ಕೋಟಿ ರೂ. ಆಸ್ತಿಗಾಗಿ ಮಾವನ ಹತ್ಯೆಗೆ ಸುಪಾರಿ ಕೊಟ್ಟಿದ್ದ ಸೊಸೆ
ಕ್ರೈಂImage Credit source: NDTV
ನಯನಾ ರಾಜೀವ್
|

Updated on: Jun 13, 2024 | 11:12 AM

Share

ನಾಗ್ಪುರದಲ್ಲಿ ನಡೆದ ಅಪಘಾತ(Accident)ವೊಂದರಲ್ಲಿ ವೃದ್ಧರೊಬ್ಬರು ಸಾವನ್ನಪ್ಪಿದ್ದರು. ಮೇಲ್ನೋಟಕ್ಕೆ ಇದು ಹಿಟ್​ ಆ್ಯಂಡ್​ ರನ್​ನಂತೆ ಕಂಡರೂ ಪೊಲೀಸರಿಗೆ ಒಳಗೊಳಗೇ ಅನುಮಾನ ಮೂಡಿತ್ತು. ಈ ಅಪಘಾತ ಕಾಕತಾಳೀಯವಲ್ಲ, ಯೋಜಿತ ಸಂಚು ಎಂಬುದು ಪೊಲೀಸರ ನಂಬಿಕೆಯಾಗಿತ್ತು, ಇದೀಗ ಬಂದಿರುವ ಮಾಹಿತಿ ಪ್ರಕಾರ ಅದು ಯೋಜಿತ ಕೊಲೆ ಆ ಕೊಲೆಗೆ ಸುಪಾರಿ ಕೊಟ್ಟವಳು ಮೃತ ವೃದ್ಧರ ಸೊಸೆ ಎಂಬುದು ತಿಳಿದುಬಂದಿದೆ.

ಅರ್ಚನಾ ಪುಟ್ಟೇವಾರ್ ಎಂಬಾಕೆ ತನ್ನ ಮಾವ ಪುರುಷೋತ್ತಮ್ ಪುಟ್ಟೇವಾರ್ ಮೇಲೆ ಹಲ್ಲೆ ನಡೆಸಲು ಜನರನ್ನು ನೇಮಿಸಿಕೊಂಡಿದ್ದಳು. ಇದಕ್ಕಾಗಿ ಸುಮಾರು ಒಂದು ಕೋಟಿ ರೂ. ಖರ್ಚು ಮಾಡಿದ್ದಳು. ಡಿಕ್ಕಿ ಹೊಡೆಸಲು ಹಳೆ ಕಾರನ್ನು ಖರೀದಿಸಲು ಆಕೆ ಆರೋಪಿಗೆ ಹಣ ಕೊಟ್ಟಿದ್ದಳು. ಇದರಿಂದ ಈ ಕೊಲೆ ಅಪಘಾತದಂತೆ ಕಂಡಿತ್ತು.

300 ಕೋಟಿ ರೂ. ಮೌಲ್ಯದ ಆಸ್ತಿ ದೋಚಲು ಮಹಿಳೆ ಇಷ್ಟೆಲ್ಲಾ ಮಾಡಿದ್ದಾಳೆ, ಈ ಪ್ರಕರಣದಲ್ಲಿ ಮಹಿಳೆಯ ಪತಿಯ ಕಾರು ಚಾಲಕ ಬಾಗ್ಡೆ ಸೇರಿದಂತೆ ಮತ್ತಿಬ್ಬರು ಭಾಗಿಯಾಗಿದ್ದಾರೆ. ಎಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಆರೋಪಿಗಳ ವಿರುದ್ಧ ಕೊಲೆ, ಮೋಟಾರು ವಾಹನ ಕಾಯ್ದೆ ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಿಂದ ಎರಡು ಕಾರು, ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ಓದಿ: ಮದ್ಯದ ನಶೆಯಲ್ಲಿ ಮಗನ ಬಾಯಿಗೆ ಪೇಪರ್​ ತುರುಕಿ ಕೊಲೆ ಮಾಡಿದ ತಂದೆ

ವಯೋವೃದ್ಧ ಪುರುಷೋತ್ತಮ ಪುಟ್ಟೇವಾರ್ ಅವರು ಪತ್ನಿ ಶಕುಂತಲಾ ಅವರನ್ನು ಭೇಟಿಯಾಗಲು ಆಸ್ಪತ್ರೆಗೆ ತೆರಳಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ವಾಪಸಾಗುತ್ತಿದ್ದಾಗ ಘಟನೆ ನಡೆದಿದೆ. ಆಕೆಯ ಮಗ ಮತ್ತು ಅರ್ಚನಾಳ ಪತಿ ಮನೀಶ್ ವೈದ್ಯರಾಗಿದ್ದಾರೆ.

ಅರ್ಚನಾ ನಗರ ಯೋಜನಾ ವಿಭಾಗದ ಅಧಿಕಾರಿಯೂ ಆಗಿದ್ದು, ಹಲವು ಅಕ್ರಮಗಳನ್ನು ನಡೆಸಿದ್ದಾರೆ. ಇದಲ್ಲದೇ ಅರ್ಚನಾ ತನ್ನ ಕೆಲಸವನ್ನು ಸರಿಯಾಗಿ ಮಾಡಿಲ್ಲ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅವರ ಕೆಲಸದಲ್ಲೂ ಹಲವು ಅಕ್ರಮಗಳು ಕಂಡುಬಂದಿವೆ. ಅವರ ವಿರುದ್ಧ ಹಲವು ದೂರುಗಳು ಬಂದಿದ್ದವು. ರಾಜಕೀಯ ವ್ಯಕ್ತಿಗಳೊಂದಿಗೆ ಆಕೆ ಸಂಪರ್ಕದಲ್ಲಿದ್ದ ಕಾರಣ ಯಾರೂ ಆಕೆಯ ವಿರುದ್ಧವಾಗಿ ಕ್ರಮ ಕೈಗೊಂಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್