AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ಲು ಶಿಕ್ಷೆಗೆ ಒಳಗಾಗಿರುವ ಶೇಖ್ ಹಸೀನಾ ಭಾರತದಲ್ಲಿ ಎಷ್ಟು ದಿನ ಇರಬಹುದು? ಸರ್ಕಾರದ ಉತ್ತರ ಇಲ್ಲಿದೆ

ಭಾರತ ಸರ್ಕಾರವು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ನವದೆಹಲಿಯ ಲುಟಿಯೆನ್ಸ್ ಬಂಗಲೆ ವಲಯದಲ್ಲಿ ಸುರಕ್ಷಿತ ಮನೆಯಲ್ಲಿ ವಾಸಿಸುತ್ತಿದ್ದಾರೆ. 78 ವರ್ಷದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಹಿರಿಯ ಸಂಸದರು ಮತ್ತು ಉನ್ನತ ಅಧಿಕಾರಿಗಳಿಗೆ ನೀಡಲಾಗುವ ರೀತಿಯದ್ದೇ ಬಂಗಲೆಯನ್ನು ನೀಡಲಾಗಿದೆ. ಆದರೆ, ಬಾಂಗ್ಲಾದೇಶದ ನ್ಯಾಯಾಲಯ ಶೇಖ್ ಹಸೀನಾ ಅವರಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ. ಹೀಗಾಗಿ ಅವರು ಇನ್ನೂ ಎಷ್ಟು ದಿನ ಭಾರತದಲ್ಲಿ ಉಳಿಯಲು ಅವಕಾಶವಿದೆ ಎಂಬುದರ ಮಾಹಿತಿ ಇಲ್ಲಿದೆ.

ಗಲ್ಲು ಶಿಕ್ಷೆಗೆ ಒಳಗಾಗಿರುವ ಶೇಖ್ ಹಸೀನಾ ಭಾರತದಲ್ಲಿ ಎಷ್ಟು ದಿನ ಇರಬಹುದು? ಸರ್ಕಾರದ ಉತ್ತರ ಇಲ್ಲಿದೆ
Sheikh Hasina With Modi
ಸುಷ್ಮಾ ಚಕ್ರೆ
|

Updated on: Dec 06, 2025 | 6:53 PM

Share

ನವದೆಹಲಿ, ಡಿಸೆಂಬರ್ 6: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಡಾಕಾದ ನ್ಯಾಯಮಂಡಳಿ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ಕಳೆದ ವರ್ಷದಿಂದ ಶೇಖ್ ಹಸೀನಾ (Sheikh Hasina) ದೆಹಲಿಯಲ್ಲಿ ಆಶ್ರಯ ಪಡೆದಿದ್ದಾರೆ. ಮರಣದಂಡನೆ ಶಿಕ್ಷೆಗೆ ಒಳಗಾಗಿರುವುದರಿಂದ ಅವರು ಭಾರತದಲ್ಲಿಯೇ ಇನ್ನೂ ಎಷ್ಟು ಸಮಯ ವಾಸ್ತವ್ಯ ಹೂಡಬಹುದು ಎಂಬುದರ ಬಗ್ಗೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಹಿತಿ ನೀಡಿದ್ದಾರೆ. ಶೆಕ್ ಹಸೀನಾ ಭಾರತವನ್ನು ತೊರೆಯುವುದು ಅಥವಾ ಇಲ್ಲೇ ಇರುವುದು ಅವರ ವೈಯಕ್ತಿಕ ನಿರ್ಧಾರ. ಅವರು ಎಷ್ಟು ಸಮಯ ಬೇಕಾದರೂ ಇಲ್ಲಿಯೇ ಇರಬಹುದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಭಾರತವು ಶೇಖ್ ಹಸೀನಾಗೆ ಬಯಸಿದಷ್ಟು ಕಾಲ ಇರಲು ಅವಕಾಶ ನೀಡುತ್ತದೆಯೇ? ಎಂದು ಕೇಳಿದಾಗ ಉತ್ತರಿಸಿರುವ ಸಚಿವ ಜೈಶಂಕರ್, ಅವರು ಒಂದು ನಿರ್ದಿಷ್ಟ ಸನ್ನಿವೇಶದಲ್ಲಿ ಇಲ್ಲಿಗೆ ಬಂದರು. ಅದು ಅವರ ನಿರ್ಧಾರವಾಗಿತ್ತು. ಹಾಗೆಯೇ ಇಲ್ಲಿಂದ ತೆರಳುವುದು ಕೂಡ ಅವರ ವೈಯಕ್ತಿಕ ನಿರ್ಧಾರವಾಗಿರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: Sheikh Hasina: ಶೇಖ್ ಹಸೀನಾಗೆ ಗಲ್ಲುಶಿಕ್ಷೆ; ಭಾರತದಿಂದ ಬಾಂಗ್ಲಾದೇಶಕ್ಕೆ ಹಸ್ತಾಂತರವಾಗುತ್ತಾರಾ ಮಾಜಿ ಪ್ರಧಾನಿ?

ಬಾಂಗ್ಲಾದೇಶದಲ್ಲಿ ಉಂಟಾದ ರಾಜಕೀಯ ಅಶಾಂತಿಯ ನಂತರ ಕಳೆದ ವರ್ಷ ಆಗಸ್ಟ್‌ನಲ್ಲಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದರು. ಅವರ ಅಧಿಕಾರಾವಧಿಯಲ್ಲಿ ಗಲಭೆ ಉಂಟಾಗಿ ನೂರಾರು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಗಾಯಗೊಂಡರು. ಹೀಗಾಗಿ, ಕಳೆದ ತಿಂಗಳು ಶೇಖ್ ಹಸೀನಾ ಅವರಿಗೆ ವಿಶೇಷ ನ್ಯಾಯಮಂಡಳಿಯು ಮರಣದಂಡನೆ ವಿಧಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ