AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮೆ ಹಣಕ್ಕಾಗಿ ಭಿಕ್ಷುಕನ ಕೊಂದು, ದೇಹದ ಬಳಿ ತನ್ನ ಐಡಿ ಇಟ್ಟ ವ್ಯಕ್ತಿ

ವ್ಯಕ್ತಿಯೊಬ್ಬ ವಿಮೆ ಹಣ ಪಡೆಯಲು ಭಿಕ್ಷುಕನನ್ನು ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಭಿಕ್ಷುಕನನ್ನು ವ್ಯಕ್ತಿಯೊಬ್ಬ ಟ್ರಕ್​ನಿಂದ ಗುದ್ದಿಸಿ ಹತ್ಯೆ ಮಾಡಿದ್ದಾನೆ. ತಾನೇ ಸತ್ತಿದ್ದೇನೆಂದು ಬಿಂಬಿಸಲು ಶವದ ಪಕ್ಕದಲ್ಲಿ ತನ್ನ ಗುರುತಿನ ಚೀಟಿಯನ್ನು ಇಟ್ಟಿದ್ದ.

ವಿಮೆ ಹಣಕ್ಕಾಗಿ ಭಿಕ್ಷುಕನ ಕೊಂದು, ದೇಹದ ಬಳಿ ತನ್ನ ಐಡಿ ಇಟ್ಟ ವ್ಯಕ್ತಿ
ಭಿಕ್ಷುಕ-ಸಾಂದರ್ಭಿಕ ಚಿತ್ರImage Credit source: Times Of India
ನಯನಾ ರಾಜೀವ್
|

Updated on: Dec 08, 2024 | 8:20 AM

Share

ವ್ಯಕ್ತಿಯೊಬ್ಬ ವಿಮೆ ಹಣ ಪಡೆಯಲು ಭಿಕ್ಷುಕನನ್ನು ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಭಿಕ್ಷುಕನನ್ನು ವ್ಯಕ್ತಿಯೊಬ್ಬ ಟ್ರಕ್​ನಿಂದ ಗುದ್ದಿಸಿ ಹತ್ಯೆ ಮಾಡಿದ್ದಾನೆ. ತಾನೇ ಸತ್ತಿದ್ದೇನೆಂದು ಬಿಂಬಿಸಲು ಶವದ ಪಕ್ಕದಲ್ಲಿ ತನ್ನ ಗುರುತಿನ ಚೀಟಿಯನ್ನು ಇಟ್ಟಿದ್ದ.

ಬನ್ಸ್ವಾರಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ನರೇಂದ್ರ ಸಿಂಗ್ ರಾವತ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬ ತುಂಬಾ ಸಾಲ ಮಾಡಿದ್ದು, ಆರ್ಥಿಕ ಸಂಕಷ್ಟದಿಂದ ಪಾರಾಗಲು ಯೋಜನೆ ರೂಪಿಸಿದ್ದರು. ಡಿಸೆಂಬರ್ 1 ರಂದು, ಪೊಲೀಸರಿಗೆ ಜರ್ಬಡಿ ಗ್ರಾಮದ ಬಳಿ ವಿಕೃತ ಶವ ಪತ್ತೆಯಾಗಿತ್ತು. ಹತ್ತಿರದಲ್ಲಿ ಪತ್ತೆಯಾದ ಬ್ಯಾಗ್‌ನಲ್ಲಿ ನರೇಂದ್ರ ಸಿಂಗ್‌ಗೆ ಸೇರಿದ ಗುರುತಿನ ದಾಖಲೆಗಳಿತ್ತು.

ದಾಖಲೆಗಳ ಆಧಾರದ ಮೇಲೆ, ಪೊಲೀಸರು ರಾವತ್ ಅವರ ಕುಟುಂಬವನ್ನು ಪತ್ತೆಹಚ್ಚಿ ಸಂಪರ್ಕಿಸಿದರು, ಆದರೆ ಕುಟುಂಬದವರು ಇದು ತಮ್ಮ ಮನೆಯವರ ದೇಹವಲ್ಲ ಎಂದು ಹೇಳಿದರು. ಇದು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಪೊಲೀಸರು ಅಂತಿಮವಾಗಿ ನರೇಂದ್ರ ಸಿಂಗ್, ಭೈರುಲಾಲ್ ಎಂಬ ವ್ಯಕ್ತಿ ಮತ್ತು ಇಬ್ರಾಹಿಂ ಎಂಬ ಟ್ರಕ್ ಡ್ರೈವರ್ ಇಬ್ಬರೂ ಸೇರಿ ಮಾಡಿರುವ ಪಿತೂರಿಯನ್ನು ಬಯಲಿಗೆಳೆದಿದ್ದಾರೆ.

ಮತ್ತಷ್ಟು ಓದಿ: ಟಾಯ್ಲೆಟ್​ನಲ್ಲಿ ಫ್ಲಶ್ ಮಾಡಿಲ್ಲವೆಂದು ಶುರುವಾದ ಮನೆ ಬಾಡಿಗೆದಾರರ ಜಗಳ ಕೊಲೆಯಲ್ಲಿ ಅಂತ್ಯ!

ವಿಚಾರಣೆ ವೇಳೆ, ಭೈರುಲಾಲ್ ಮೃತ ವ್ಯಕ್ತಿ ನರೇಂದ್ರ ಸಿಂಗ್ ಅಲ್ಲ, ತೂಫಾನ್ ಸಿಂಗ್ ಎಂಬ ನಿರಾಶ್ರಿತ ವ್ಯಕ್ತಿ ಮತ್ತು ಭಿಕ್ಷುಕ ಎಂದು ಒಪ್ಪಿಕೊಂಡರು. ನ.30ರಂದು ಮೂವರೂ ಆರೋಪಿಗಳು ತೂಫಾನ್ ಸಿಂಗ್‌ಗೆ ಗುಜರಾತ್‌ನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ, ಪ್ರಜ್ಞೆ ತಪ್ಪುವವರೆಗೂ ಮದ್ಯ ಕುಡಿಸಿ, ನಂತರ ಆತನನ್ನು ಹೆದ್ದಾರಿಯಲ್ಲಿ ನಿಲ್ಲಿಸಿದ್ದರು.

ಇಬ್ರಾಹಿಂ ತೂಫಾನ್‌ನ ದೇಹದ ಮೇಲೆ ಟ್ರಕ್ ಹತ್ತಿಸಿದ್ದ ತಕ್ಷಣವೇ ಆತ ಸಾವನ್ನಪ್ಪಿದ್ದ. ಆಗ ನರೇಂದ್ರ ಸಿಂಗ್ ಶವದ ಬಳಿ ತನ್ನದೇ ಗುರುತಿನ ದಾಖಲೆಗಳನ್ನು ಇಟ್ಟು ತಲೆಮರೆಸಿಕೊಂಡಿದ್ದ.

ಭೈರುಲಾಲ್ ಮತ್ತು ಇಬ್ರಾಹಿಂ ಅವರನ್ನು ಕೊಲೆ ಮತ್ತು ಪಿತೂರಿಯ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ, ಆದರೆ ನರೇಂದ್ರ ಸಿಂಗ್ ತಲೆಮರೆಸಿಕೊಂಡಿದ್ದಾನೆ. ನರೇಂದ್ರ ಸಿಂಗ್ ಅವರನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದ್ದು, ಪೊಲೀಸರು ಪ್ರಕರಣದ ಇತರ ಅಂಶಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ